HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...