HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...