HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...