HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...