Homeಮುಖಪುಟಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

ಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

- Advertisement -
- Advertisement -

ಇಸ್ರೇಲ್ ಗಾಝಾದಲ್ಲಿ ನರಮೇಧವನ್ನು ಮುಂದುವರಿಸಿದ್ದು, ಗಾಝಾ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಗೆ  27 ನಿರಾಶ್ರಿತರು ಬಲಿಯಾಗಿದ್ದಾರೆ. ಅಕ್ಟೋಬರ್ 7ರ ದಾಳಿಯಲ್ಲಿ ಭಾಗಿಯಾಗಿರುವ ಹಮಾಸ್‌ ಸಶಸ್ತ್ರದಾರಿಗಳನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್‌ ಹೇಳಿದರೆ, ಅಮಾಯಕ ನಿರಾಶ್ರಿತರನ್ನು ಹತ್ಯೆ ಮಾಡಲಾಗಿದೆ ಎಂದು ಗಾಝಾ ಮಾಧ್ಯಮಗಳು ವರದಿ ಮಾಡಿದೆ.

ಮಧ್ಯ ಗಾಝಾದ ನುಸಿರಾತ್‌ನಲ್ಲಿರುವ ಯುಎನ್ ಶಾಲೆಯಲ್ಲಿ ಹಮಾಸ್ ಕಮಾಂಡ್ ಪೋಸ್ಟ್ ಅಡಗಿಕೊಂಡಿದೆ ಎಂಬ ಇಸ್ರೇಲ್‌ನ ಹೇಳಿಕೆಗಳನ್ನು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿಯ ನಿರ್ದೇಶಕ ಇಸ್ಮಾಯಿಲ್ ಅಲ್-ತವಾಬ್ತಾ ತಿರಸ್ಕರಿಸಿದ್ದಾರೆ. ಡಜನ್‌ಗಟ್ಟಲೆ ನಿರಾಶ್ರಿತ ಜನರ ವಿರುದ್ಧ ನಡೆಸಿದ ಕ್ರೂರ ಅಪರಾಧವನ್ನು ಸಮರ್ಥಿಸಲು ಸುಳ್ಳು ಕಪೋಲಕಲ್ಪಿತ ಕಥೆಗಳನ್ನು ಇಸ್ರೇಲ್‌ ಹೇಳುತ್ತಿದೆ ಎಂದು ತವಾಬ್ತಾ ಹೇಳಿದ್ದಾರೆ.

ಇಸ್ರೇಲ್‌ ಫೈಟರ್ ಜೆಟ್‌ ದಾಳಿಯ ಮೊದಲು, ನಾಗರಿಕರಿಗೆ ಹಾನಿಯಾಗುವ ಅಪಾಯವನ್ನು ಕಡಿಮೆ ಮಾಡಲು ಮಿಲಿಟರಿ ಕ್ರಮಗಳನ್ನು ತೆಗೆದುಕೊಂಡಿದೆ. ಕದನ ವಿರಾಮ ಮಾತುಕತೆ ಸಂದರ್ಭದಲ್ಲಿ ದಾಳಿಗೆ ಯಾವುದೇ ಅಡ್ಡಿ ಇಲ್ಲ ಎಂದು ಇಸ್ರೇಲ್ ಹೇಳಿದೆ.

ಈ ಬೆಳವಣಿಗೆ ಕಳೆದ ವಾರ ಯುಎಸ್ ಅಧ್ಯಕ್ಷ ಜೋ ಬಿಡೆನ್ ಪ್ರಸ್ತಾಪಿಸಿದ ಒಪ್ಪಂದದ ಪ್ರಸ್ತಾಪಕ್ಕೆ ಸ್ಪಷ್ಟವಾದ ಹೊಡೆತವಾಗಿದೆ. ಹಮಾಸ್ ನಾಯಕ ಗಾಝಾದಲ್ಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಇಸ್ರೇಲ್‌ ಸೇನಾ ವಾಪಸಾತಿಗೆ ಆಗ್ರಹಿಸಿದ್ದರು.

ಕದನ ವಿರಾಮ ಒಪ್ಪಂದವನ್ನು ವಾಷಿಂಗ್ಟನ್ ಬಲವಾಗಿ ಸಮರ್ಥಿಸಿದೆ. CIA ನಿರ್ದೇಶಕ ವಿಲಿಯಂ ಬರ್ನ್ಸ್ ಕದನ ವಿರಾಮ ಪ್ರಸ್ತಾಪದ ಕುರಿತು ಚರ್ಚಿಸಲು ಮಧ್ಯವರ್ತಿಗಳಾದ ಕತಾರ್ ಮತ್ತು ಈಜಿಪ್ಟ್‌ನ ಹಿರಿಯ ಅಧಿಕಾರಿಗಳನ್ನು ಬುಧವಾರ ದೋಹಾದಲ್ಲಿ ಭೇಟಿಯಾಗಿದ್ದಾರೆ.

ನವೆಂಬರ್‌ನಲ್ಲಿ ಸಂಕ್ಷಿಪ್ತ ಕದನ ವಿರಾಮದ ನಂತರ ಕದನ ವಿರಾಮದ ಎಲ್ಲಾ ಪ್ರಯತ್ನಗಳು ಈವರೆಗೆ ವಿಫಲವಾಗಿವೆ. ಹಮಾಸ್ ಸಂಘರ್ಷಕ್ಕೆ ಶಾಶ್ವತ ಅಂತ್ಯದ ಬೇಡಿಕೆಯನ್ನು ಒತ್ತಾಯಿಸುತ್ತದೆ, ಆದರೆ ಇಸ್ರೇಲ್ ಹಮಾಸ್‌ನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಾಗಿ ಹೇಳಿಕೊಂಡಿದೆ. ಕಳೆದ ಹಲವು ದಿನಗಳಿಂದ ಕದನ ವಿರಾಮಗಳ ಬಗ್ಗೆ ಬಿಡೆನ್ ಪದೇ ಪದೇ ಘೋಷಿಸಿದ್ದಾರೆ. ಆದರೆ ಯಾವುದೇ ಕದನ ವಿರಾಮ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುವುದನ್ನು ಗಮನಿಸಬಹುದಾಗಿದೆ.

ಹಮಾಸ್ ಅ.7ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಗೆ 36,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...