Homeಮುಖಪುಟಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

ಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

- Advertisement -
- Advertisement -

ಇಸ್ರೇಲ್ ಗಾಝಾದಲ್ಲಿ ನರಮೇಧವನ್ನು ಮುಂದುವರಿಸಿದ್ದು, ಗಾಝಾ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಗೆ  27 ನಿರಾಶ್ರಿತರು ಬಲಿಯಾಗಿದ್ದಾರೆ. ಅಕ್ಟೋಬರ್ 7ರ ದಾಳಿಯಲ್ಲಿ ಭಾಗಿಯಾಗಿರುವ ಹಮಾಸ್‌ ಸಶಸ್ತ್ರದಾರಿಗಳನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್‌ ಹೇಳಿದರೆ, ಅಮಾಯಕ ನಿರಾಶ್ರಿತರನ್ನು ಹತ್ಯೆ ಮಾಡಲಾಗಿದೆ ಎಂದು ಗಾಝಾ ಮಾಧ್ಯಮಗಳು ವರದಿ ಮಾಡಿದೆ.

ಮಧ್ಯ ಗಾಝಾದ ನುಸಿರಾತ್‌ನಲ್ಲಿರುವ ಯುಎನ್ ಶಾಲೆಯಲ್ಲಿ ಹಮಾಸ್ ಕಮಾಂಡ್ ಪೋಸ್ಟ್ ಅಡಗಿಕೊಂಡಿದೆ ಎಂಬ ಇಸ್ರೇಲ್‌ನ ಹೇಳಿಕೆಗಳನ್ನು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿಯ ನಿರ್ದೇಶಕ ಇಸ್ಮಾಯಿಲ್ ಅಲ್-ತವಾಬ್ತಾ ತಿರಸ್ಕರಿಸಿದ್ದಾರೆ. ಡಜನ್‌ಗಟ್ಟಲೆ ನಿರಾಶ್ರಿತ ಜನರ ವಿರುದ್ಧ ನಡೆಸಿದ ಕ್ರೂರ ಅಪರಾಧವನ್ನು ಸಮರ್ಥಿಸಲು ಸುಳ್ಳು ಕಪೋಲಕಲ್ಪಿತ ಕಥೆಗಳನ್ನು ಇಸ್ರೇಲ್‌ ಹೇಳುತ್ತಿದೆ ಎಂದು ತವಾಬ್ತಾ ಹೇಳಿದ್ದಾರೆ.

ಇಸ್ರೇಲ್‌ ಫೈಟರ್ ಜೆಟ್‌ ದಾಳಿಯ ಮೊದಲು, ನಾಗರಿಕರಿಗೆ ಹಾನಿಯಾಗುವ ಅಪಾಯವನ್ನು ಕಡಿಮೆ ಮಾಡಲು ಮಿಲಿಟರಿ ಕ್ರಮಗಳನ್ನು ತೆಗೆದುಕೊಂಡಿದೆ. ಕದನ ವಿರಾಮ ಮಾತುಕತೆ ಸಂದರ್ಭದಲ್ಲಿ ದಾಳಿಗೆ ಯಾವುದೇ ಅಡ್ಡಿ ಇಲ್ಲ ಎಂದು ಇಸ್ರೇಲ್ ಹೇಳಿದೆ.

ಈ ಬೆಳವಣಿಗೆ ಕಳೆದ ವಾರ ಯುಎಸ್ ಅಧ್ಯಕ್ಷ ಜೋ ಬಿಡೆನ್ ಪ್ರಸ್ತಾಪಿಸಿದ ಒಪ್ಪಂದದ ಪ್ರಸ್ತಾಪಕ್ಕೆ ಸ್ಪಷ್ಟವಾದ ಹೊಡೆತವಾಗಿದೆ. ಹಮಾಸ್ ನಾಯಕ ಗಾಝಾದಲ್ಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಇಸ್ರೇಲ್‌ ಸೇನಾ ವಾಪಸಾತಿಗೆ ಆಗ್ರಹಿಸಿದ್ದರು.

ಕದನ ವಿರಾಮ ಒಪ್ಪಂದವನ್ನು ವಾಷಿಂಗ್ಟನ್ ಬಲವಾಗಿ ಸಮರ್ಥಿಸಿದೆ. CIA ನಿರ್ದೇಶಕ ವಿಲಿಯಂ ಬರ್ನ್ಸ್ ಕದನ ವಿರಾಮ ಪ್ರಸ್ತಾಪದ ಕುರಿತು ಚರ್ಚಿಸಲು ಮಧ್ಯವರ್ತಿಗಳಾದ ಕತಾರ್ ಮತ್ತು ಈಜಿಪ್ಟ್‌ನ ಹಿರಿಯ ಅಧಿಕಾರಿಗಳನ್ನು ಬುಧವಾರ ದೋಹಾದಲ್ಲಿ ಭೇಟಿಯಾಗಿದ್ದಾರೆ.

ನವೆಂಬರ್‌ನಲ್ಲಿ ಸಂಕ್ಷಿಪ್ತ ಕದನ ವಿರಾಮದ ನಂತರ ಕದನ ವಿರಾಮದ ಎಲ್ಲಾ ಪ್ರಯತ್ನಗಳು ಈವರೆಗೆ ವಿಫಲವಾಗಿವೆ. ಹಮಾಸ್ ಸಂಘರ್ಷಕ್ಕೆ ಶಾಶ್ವತ ಅಂತ್ಯದ ಬೇಡಿಕೆಯನ್ನು ಒತ್ತಾಯಿಸುತ್ತದೆ, ಆದರೆ ಇಸ್ರೇಲ್ ಹಮಾಸ್‌ನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಾಗಿ ಹೇಳಿಕೊಂಡಿದೆ. ಕಳೆದ ಹಲವು ದಿನಗಳಿಂದ ಕದನ ವಿರಾಮಗಳ ಬಗ್ಗೆ ಬಿಡೆನ್ ಪದೇ ಪದೇ ಘೋಷಿಸಿದ್ದಾರೆ. ಆದರೆ ಯಾವುದೇ ಕದನ ವಿರಾಮ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುವುದನ್ನು ಗಮನಿಸಬಹುದಾಗಿದೆ.

ಹಮಾಸ್ ಅ.7ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಗೆ 36,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...