Homeಮುಖಪುಟಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

ಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

- Advertisement -
- Advertisement -

ಇಸ್ರೇಲ್ ಗಾಝಾದಲ್ಲಿ ನರಮೇಧವನ್ನು ಮುಂದುವರಿಸಿದ್ದು, ಗಾಝಾ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಗೆ  27 ನಿರಾಶ್ರಿತರು ಬಲಿಯಾಗಿದ್ದಾರೆ. ಅಕ್ಟೋಬರ್ 7ರ ದಾಳಿಯಲ್ಲಿ ಭಾಗಿಯಾಗಿರುವ ಹಮಾಸ್‌ ಸಶಸ್ತ್ರದಾರಿಗಳನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್‌ ಹೇಳಿದರೆ, ಅಮಾಯಕ ನಿರಾಶ್ರಿತರನ್ನು ಹತ್ಯೆ ಮಾಡಲಾಗಿದೆ ಎಂದು ಗಾಝಾ ಮಾಧ್ಯಮಗಳು ವರದಿ ಮಾಡಿದೆ.

ಮಧ್ಯ ಗಾಝಾದ ನುಸಿರಾತ್‌ನಲ್ಲಿರುವ ಯುಎನ್ ಶಾಲೆಯಲ್ಲಿ ಹಮಾಸ್ ಕಮಾಂಡ್ ಪೋಸ್ಟ್ ಅಡಗಿಕೊಂಡಿದೆ ಎಂಬ ಇಸ್ರೇಲ್‌ನ ಹೇಳಿಕೆಗಳನ್ನು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿಯ ನಿರ್ದೇಶಕ ಇಸ್ಮಾಯಿಲ್ ಅಲ್-ತವಾಬ್ತಾ ತಿರಸ್ಕರಿಸಿದ್ದಾರೆ. ಡಜನ್‌ಗಟ್ಟಲೆ ನಿರಾಶ್ರಿತ ಜನರ ವಿರುದ್ಧ ನಡೆಸಿದ ಕ್ರೂರ ಅಪರಾಧವನ್ನು ಸಮರ್ಥಿಸಲು ಸುಳ್ಳು ಕಪೋಲಕಲ್ಪಿತ ಕಥೆಗಳನ್ನು ಇಸ್ರೇಲ್‌ ಹೇಳುತ್ತಿದೆ ಎಂದು ತವಾಬ್ತಾ ಹೇಳಿದ್ದಾರೆ.

ಇಸ್ರೇಲ್‌ ಫೈಟರ್ ಜೆಟ್‌ ದಾಳಿಯ ಮೊದಲು, ನಾಗರಿಕರಿಗೆ ಹಾನಿಯಾಗುವ ಅಪಾಯವನ್ನು ಕಡಿಮೆ ಮಾಡಲು ಮಿಲಿಟರಿ ಕ್ರಮಗಳನ್ನು ತೆಗೆದುಕೊಂಡಿದೆ. ಕದನ ವಿರಾಮ ಮಾತುಕತೆ ಸಂದರ್ಭದಲ್ಲಿ ದಾಳಿಗೆ ಯಾವುದೇ ಅಡ್ಡಿ ಇಲ್ಲ ಎಂದು ಇಸ್ರೇಲ್ ಹೇಳಿದೆ.

ಈ ಬೆಳವಣಿಗೆ ಕಳೆದ ವಾರ ಯುಎಸ್ ಅಧ್ಯಕ್ಷ ಜೋ ಬಿಡೆನ್ ಪ್ರಸ್ತಾಪಿಸಿದ ಒಪ್ಪಂದದ ಪ್ರಸ್ತಾಪಕ್ಕೆ ಸ್ಪಷ್ಟವಾದ ಹೊಡೆತವಾಗಿದೆ. ಹಮಾಸ್ ನಾಯಕ ಗಾಝಾದಲ್ಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಇಸ್ರೇಲ್‌ ಸೇನಾ ವಾಪಸಾತಿಗೆ ಆಗ್ರಹಿಸಿದ್ದರು.

ಕದನ ವಿರಾಮ ಒಪ್ಪಂದವನ್ನು ವಾಷಿಂಗ್ಟನ್ ಬಲವಾಗಿ ಸಮರ್ಥಿಸಿದೆ. CIA ನಿರ್ದೇಶಕ ವಿಲಿಯಂ ಬರ್ನ್ಸ್ ಕದನ ವಿರಾಮ ಪ್ರಸ್ತಾಪದ ಕುರಿತು ಚರ್ಚಿಸಲು ಮಧ್ಯವರ್ತಿಗಳಾದ ಕತಾರ್ ಮತ್ತು ಈಜಿಪ್ಟ್‌ನ ಹಿರಿಯ ಅಧಿಕಾರಿಗಳನ್ನು ಬುಧವಾರ ದೋಹಾದಲ್ಲಿ ಭೇಟಿಯಾಗಿದ್ದಾರೆ.

ನವೆಂಬರ್‌ನಲ್ಲಿ ಸಂಕ್ಷಿಪ್ತ ಕದನ ವಿರಾಮದ ನಂತರ ಕದನ ವಿರಾಮದ ಎಲ್ಲಾ ಪ್ರಯತ್ನಗಳು ಈವರೆಗೆ ವಿಫಲವಾಗಿವೆ. ಹಮಾಸ್ ಸಂಘರ್ಷಕ್ಕೆ ಶಾಶ್ವತ ಅಂತ್ಯದ ಬೇಡಿಕೆಯನ್ನು ಒತ್ತಾಯಿಸುತ್ತದೆ, ಆದರೆ ಇಸ್ರೇಲ್ ಹಮಾಸ್‌ನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಾಗಿ ಹೇಳಿಕೊಂಡಿದೆ. ಕಳೆದ ಹಲವು ದಿನಗಳಿಂದ ಕದನ ವಿರಾಮಗಳ ಬಗ್ಗೆ ಬಿಡೆನ್ ಪದೇ ಪದೇ ಘೋಷಿಸಿದ್ದಾರೆ. ಆದರೆ ಯಾವುದೇ ಕದನ ವಿರಾಮ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುವುದನ್ನು ಗಮನಿಸಬಹುದಾಗಿದೆ.

ಹಮಾಸ್ ಅ.7ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಗೆ 36,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...