Homeಮುಖಪುಟಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ಪ್ರತಿಪಕ್ಷದ ಒಟ್ಟು 141 ಸಂಸದರನ್ನು ಲೋಕಸಭೆ ಮತ್ತು ರಾಜ್ಯಸಭೆಯಿಂದ ಚಳಿಗಾಲದ ಅಧಿವೇಶನದ ಕೊನೆವರೆಗೆ ಅಮಾನತು ಮಾಡಲಾಗಿದೆ. ದೇಶದ ಇತಿಹಾಸಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯಲ್ಲಿ ಸಂಸದರನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಲೋಕಸಭೆಯಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಅಳಿಸಲಾಗಿದೆ. ವಿವಿಧ ಇಲಾಖೆಯ ಸಚಿವರಿಗೆ ಪ್ರಶ್ನೆಯನ್ನು ಕೇಳಬೇಕಿದ್ದ ಸಂಸದರ ಪಟ್ಟಿಯಿಂದ ಕೂಡ ಮಾನತುಗೊಂಡ ಸಂಸದರ ಹೆಸರನ್ನು ತೆಗೆದುಹಾಕಲಾಗಿದೆ.

ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದ  ಹನುಮಾನ್ ಬೇನಿವಾಲ್ ಅವರ ಹೆಸರನ್ನು ಸಹ ಅಳಿಸಲಾಗಿದೆ. ತೃಣಮೂಲ ಕಾಂಗ್ರೆಸ್‌ನ ಅಪರೂಪ ಪೊದ್ದಾರ್ ಮತ್ತು ಕಾಂಗ್ರೆಸ್‌ನ ರಮ್ಯಾ ಹರಿದಾಸ್ ಕೇಳಿದ ಎರಡು ನಕ್ಷತ್ರ(ಸ್ಟಾರ್) ಹಾಕಿದ ಪ್ರಶ್ನೆಗಳನ್ನು ಅಳಿಸಲಾಗಿದೆ ಮತ್ತು 25 ನಕ್ಷತ್ರರಹಿತ ಪ್ರಶ್ನೆಗಳನ್ನು ಪಟ್ಟಿಯಿಂದ ಅಳಿಸಲಾಗಿದೆ. ಮಂತ್ರಿಗಳು ನಕ್ಷತ್ರ ಹಾಕಿದ ಪ್ರಶ್ನೆಗಳಿಗೆ ಮೌಖಿಕ ಉತ್ತರಗಳನ್ನು ನೀಡುತ್ತಾರೆ ಮತ್ತು ನಕ್ಷತ್ರ ಹಾಕದ ಪ್ರಶ್ನೆಗಳಿಗೆ ಲಿಖಿತ ಉತ್ತರಗಳನ್ನು ನೀಡುತ್ತಾರೆ.

ಸ್ಟಾರ್ ಮಾಡಿದ ಹಾಗೂ ಅನ್‌ಸ್ಟಾರ್ ಮಾಡಿದ ಪ್ರಶ್ನೆಗಳು ಎಂದರೇನು?

ಸಂಸದರಿಗೆ ಸದನದಲ್ಲಿ ನಕ್ಷತ್ರ ಚಿಹ್ನೆ ಇರುವ ಮೌಖಿಕ ಉತ್ತರ ಪಡೆಯಬಹುದಾದ ಪ್ರಶ್ನೆ ಕೇಳುವ ಅವಕಾಶವಿದೆ. ಈ ರೀತಿಯ ಪ್ರಶ್ನೆಗಳನ್ನು ಸ್ಟಾರ್ ಮಾಡಿದ ಇಲ್ಲವೇ ನಕ್ಷತ್ರ ಹಾಕಿದ ಪ್ರಶ್ನೆ ಎಂದು ಕರೆಯಲಾಗುತ್ತದೆ. ಲೋಕಸಭೆಯಲ್ಲಿ ಒಂದು ದಿನದ ಪ್ರಶ್ನೋತ್ತರ ಸಮಯದಲ್ಲಿ 20ಕ್ಕಿಂತ ಹೆಚ್ಚು ನಕ್ಷತ್ರ ಹಾಕಿದ ಪ್ರಶ್ನೆಗಳನ್ನು ಪರಿಗಣಿಸುವುದಿಲ್ಲ ಹಾಗೂ ರಾಜ್ಯಸಭೆಯಲ್ಲಿ ನಕ್ಷತ್ರ ಹಾಕಿದ 15 ಪ್ರಶ್ನೆಗಳನ್ನು ಅನುಮತಿಸಲಾಗುತ್ತದೆ. ಈ ಪ್ರಶ್ನೆಗಳಿಗೆ ಸಚಿವರು ಮೌಖಿಕವಾಗಿಯೇ ಉತ್ತರಿಸಬೇಕಿದೆ.

ನಕ್ಷತ್ರ ಹಾಕದ ಪ್ರಶ್ನೆ ಎಂದರೆ ಸಂಸದರ ಲಿಖಿತ ಉತ್ತರವನ್ನು ಕೇಳಿದ ಪ್ರಶ್ನೆಯಾಗಿದೆ. ಇಂತಹ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ಮೇಜಿನ ಮೇಲೆ ಇರಿಸಲಾಗುತ್ತದೆ. ತದನಂತರ ಇಂತಹ ಪ್ರಶ್ನೆಗಳು ಪೂರಕ ಪ್ರಶ್ನೆಗಳಿಗೆ ಅವಕಾಶ ನೀಡುವುದಿಲ್ಲ. ಲೋಕಸಭೆಯಲ್ಲಿ ಲಿಖಿತ ಉತ್ತರಗಳಿಗಾಗಿ ಪ್ರತಿದಿನ 230 ಪ್ರಶ್ನೆಗಳನ್ನು ಆಯ್ಕೆಮಾಡಿದರೆ ರಾಜ್ಯಸಭೆಯಲ್ಲಿ ಈ ಪ್ರಶ್ನೆಗಳ ಮಿತಿ 160 ಆಗಿದೆ.

ಡಿಸೆಂಬರ್ 14ರಂದು ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು.

ಗೃಹ ಸಚಿವರ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...