Homeಮುಖಪುಟಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ಪ್ರತಿಪಕ್ಷದ ಒಟ್ಟು 141 ಸಂಸದರನ್ನು ಲೋಕಸಭೆ ಮತ್ತು ರಾಜ್ಯಸಭೆಯಿಂದ ಚಳಿಗಾಲದ ಅಧಿವೇಶನದ ಕೊನೆವರೆಗೆ ಅಮಾನತು ಮಾಡಲಾಗಿದೆ. ದೇಶದ ಇತಿಹಾಸಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯಲ್ಲಿ ಸಂಸದರನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಲೋಕಸಭೆಯಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಅಳಿಸಲಾಗಿದೆ. ವಿವಿಧ ಇಲಾಖೆಯ ಸಚಿವರಿಗೆ ಪ್ರಶ್ನೆಯನ್ನು ಕೇಳಬೇಕಿದ್ದ ಸಂಸದರ ಪಟ್ಟಿಯಿಂದ ಕೂಡ ಮಾನತುಗೊಂಡ ಸಂಸದರ ಹೆಸರನ್ನು ತೆಗೆದುಹಾಕಲಾಗಿದೆ.

ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದ  ಹನುಮಾನ್ ಬೇನಿವಾಲ್ ಅವರ ಹೆಸರನ್ನು ಸಹ ಅಳಿಸಲಾಗಿದೆ. ತೃಣಮೂಲ ಕಾಂಗ್ರೆಸ್‌ನ ಅಪರೂಪ ಪೊದ್ದಾರ್ ಮತ್ತು ಕಾಂಗ್ರೆಸ್‌ನ ರಮ್ಯಾ ಹರಿದಾಸ್ ಕೇಳಿದ ಎರಡು ನಕ್ಷತ್ರ(ಸ್ಟಾರ್) ಹಾಕಿದ ಪ್ರಶ್ನೆಗಳನ್ನು ಅಳಿಸಲಾಗಿದೆ ಮತ್ತು 25 ನಕ್ಷತ್ರರಹಿತ ಪ್ರಶ್ನೆಗಳನ್ನು ಪಟ್ಟಿಯಿಂದ ಅಳಿಸಲಾಗಿದೆ. ಮಂತ್ರಿಗಳು ನಕ್ಷತ್ರ ಹಾಕಿದ ಪ್ರಶ್ನೆಗಳಿಗೆ ಮೌಖಿಕ ಉತ್ತರಗಳನ್ನು ನೀಡುತ್ತಾರೆ ಮತ್ತು ನಕ್ಷತ್ರ ಹಾಕದ ಪ್ರಶ್ನೆಗಳಿಗೆ ಲಿಖಿತ ಉತ್ತರಗಳನ್ನು ನೀಡುತ್ತಾರೆ.

ಸ್ಟಾರ್ ಮಾಡಿದ ಹಾಗೂ ಅನ್‌ಸ್ಟಾರ್ ಮಾಡಿದ ಪ್ರಶ್ನೆಗಳು ಎಂದರೇನು?

ಸಂಸದರಿಗೆ ಸದನದಲ್ಲಿ ನಕ್ಷತ್ರ ಚಿಹ್ನೆ ಇರುವ ಮೌಖಿಕ ಉತ್ತರ ಪಡೆಯಬಹುದಾದ ಪ್ರಶ್ನೆ ಕೇಳುವ ಅವಕಾಶವಿದೆ. ಈ ರೀತಿಯ ಪ್ರಶ್ನೆಗಳನ್ನು ಸ್ಟಾರ್ ಮಾಡಿದ ಇಲ್ಲವೇ ನಕ್ಷತ್ರ ಹಾಕಿದ ಪ್ರಶ್ನೆ ಎಂದು ಕರೆಯಲಾಗುತ್ತದೆ. ಲೋಕಸಭೆಯಲ್ಲಿ ಒಂದು ದಿನದ ಪ್ರಶ್ನೋತ್ತರ ಸಮಯದಲ್ಲಿ 20ಕ್ಕಿಂತ ಹೆಚ್ಚು ನಕ್ಷತ್ರ ಹಾಕಿದ ಪ್ರಶ್ನೆಗಳನ್ನು ಪರಿಗಣಿಸುವುದಿಲ್ಲ ಹಾಗೂ ರಾಜ್ಯಸಭೆಯಲ್ಲಿ ನಕ್ಷತ್ರ ಹಾಕಿದ 15 ಪ್ರಶ್ನೆಗಳನ್ನು ಅನುಮತಿಸಲಾಗುತ್ತದೆ. ಈ ಪ್ರಶ್ನೆಗಳಿಗೆ ಸಚಿವರು ಮೌಖಿಕವಾಗಿಯೇ ಉತ್ತರಿಸಬೇಕಿದೆ.

ನಕ್ಷತ್ರ ಹಾಕದ ಪ್ರಶ್ನೆ ಎಂದರೆ ಸಂಸದರ ಲಿಖಿತ ಉತ್ತರವನ್ನು ಕೇಳಿದ ಪ್ರಶ್ನೆಯಾಗಿದೆ. ಇಂತಹ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ಮೇಜಿನ ಮೇಲೆ ಇರಿಸಲಾಗುತ್ತದೆ. ತದನಂತರ ಇಂತಹ ಪ್ರಶ್ನೆಗಳು ಪೂರಕ ಪ್ರಶ್ನೆಗಳಿಗೆ ಅವಕಾಶ ನೀಡುವುದಿಲ್ಲ. ಲೋಕಸಭೆಯಲ್ಲಿ ಲಿಖಿತ ಉತ್ತರಗಳಿಗಾಗಿ ಪ್ರತಿದಿನ 230 ಪ್ರಶ್ನೆಗಳನ್ನು ಆಯ್ಕೆಮಾಡಿದರೆ ರಾಜ್ಯಸಭೆಯಲ್ಲಿ ಈ ಪ್ರಶ್ನೆಗಳ ಮಿತಿ 160 ಆಗಿದೆ.

ಡಿಸೆಂಬರ್ 14ರಂದು ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು.

ಗೃಹ ಸಚಿವರ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...