Homeಮುಖಪುಟಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ಪ್ರತಿಪಕ್ಷದ ಒಟ್ಟು 141 ಸಂಸದರನ್ನು ಲೋಕಸಭೆ ಮತ್ತು ರಾಜ್ಯಸಭೆಯಿಂದ ಚಳಿಗಾಲದ ಅಧಿವೇಶನದ ಕೊನೆವರೆಗೆ ಅಮಾನತು ಮಾಡಲಾಗಿದೆ. ದೇಶದ ಇತಿಹಾಸಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯಲ್ಲಿ ಸಂಸದರನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಲೋಕಸಭೆಯಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಅಳಿಸಲಾಗಿದೆ. ವಿವಿಧ ಇಲಾಖೆಯ ಸಚಿವರಿಗೆ ಪ್ರಶ್ನೆಯನ್ನು ಕೇಳಬೇಕಿದ್ದ ಸಂಸದರ ಪಟ್ಟಿಯಿಂದ ಕೂಡ ಮಾನತುಗೊಂಡ ಸಂಸದರ ಹೆಸರನ್ನು ತೆಗೆದುಹಾಕಲಾಗಿದೆ.

ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದ  ಹನುಮಾನ್ ಬೇನಿವಾಲ್ ಅವರ ಹೆಸರನ್ನು ಸಹ ಅಳಿಸಲಾಗಿದೆ. ತೃಣಮೂಲ ಕಾಂಗ್ರೆಸ್‌ನ ಅಪರೂಪ ಪೊದ್ದಾರ್ ಮತ್ತು ಕಾಂಗ್ರೆಸ್‌ನ ರಮ್ಯಾ ಹರಿದಾಸ್ ಕೇಳಿದ ಎರಡು ನಕ್ಷತ್ರ(ಸ್ಟಾರ್) ಹಾಕಿದ ಪ್ರಶ್ನೆಗಳನ್ನು ಅಳಿಸಲಾಗಿದೆ ಮತ್ತು 25 ನಕ್ಷತ್ರರಹಿತ ಪ್ರಶ್ನೆಗಳನ್ನು ಪಟ್ಟಿಯಿಂದ ಅಳಿಸಲಾಗಿದೆ. ಮಂತ್ರಿಗಳು ನಕ್ಷತ್ರ ಹಾಕಿದ ಪ್ರಶ್ನೆಗಳಿಗೆ ಮೌಖಿಕ ಉತ್ತರಗಳನ್ನು ನೀಡುತ್ತಾರೆ ಮತ್ತು ನಕ್ಷತ್ರ ಹಾಕದ ಪ್ರಶ್ನೆಗಳಿಗೆ ಲಿಖಿತ ಉತ್ತರಗಳನ್ನು ನೀಡುತ್ತಾರೆ.

ಸ್ಟಾರ್ ಮಾಡಿದ ಹಾಗೂ ಅನ್‌ಸ್ಟಾರ್ ಮಾಡಿದ ಪ್ರಶ್ನೆಗಳು ಎಂದರೇನು?

ಸಂಸದರಿಗೆ ಸದನದಲ್ಲಿ ನಕ್ಷತ್ರ ಚಿಹ್ನೆ ಇರುವ ಮೌಖಿಕ ಉತ್ತರ ಪಡೆಯಬಹುದಾದ ಪ್ರಶ್ನೆ ಕೇಳುವ ಅವಕಾಶವಿದೆ. ಈ ರೀತಿಯ ಪ್ರಶ್ನೆಗಳನ್ನು ಸ್ಟಾರ್ ಮಾಡಿದ ಇಲ್ಲವೇ ನಕ್ಷತ್ರ ಹಾಕಿದ ಪ್ರಶ್ನೆ ಎಂದು ಕರೆಯಲಾಗುತ್ತದೆ. ಲೋಕಸಭೆಯಲ್ಲಿ ಒಂದು ದಿನದ ಪ್ರಶ್ನೋತ್ತರ ಸಮಯದಲ್ಲಿ 20ಕ್ಕಿಂತ ಹೆಚ್ಚು ನಕ್ಷತ್ರ ಹಾಕಿದ ಪ್ರಶ್ನೆಗಳನ್ನು ಪರಿಗಣಿಸುವುದಿಲ್ಲ ಹಾಗೂ ರಾಜ್ಯಸಭೆಯಲ್ಲಿ ನಕ್ಷತ್ರ ಹಾಕಿದ 15 ಪ್ರಶ್ನೆಗಳನ್ನು ಅನುಮತಿಸಲಾಗುತ್ತದೆ. ಈ ಪ್ರಶ್ನೆಗಳಿಗೆ ಸಚಿವರು ಮೌಖಿಕವಾಗಿಯೇ ಉತ್ತರಿಸಬೇಕಿದೆ.

ನಕ್ಷತ್ರ ಹಾಕದ ಪ್ರಶ್ನೆ ಎಂದರೆ ಸಂಸದರ ಲಿಖಿತ ಉತ್ತರವನ್ನು ಕೇಳಿದ ಪ್ರಶ್ನೆಯಾಗಿದೆ. ಇಂತಹ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ಮೇಜಿನ ಮೇಲೆ ಇರಿಸಲಾಗುತ್ತದೆ. ತದನಂತರ ಇಂತಹ ಪ್ರಶ್ನೆಗಳು ಪೂರಕ ಪ್ರಶ್ನೆಗಳಿಗೆ ಅವಕಾಶ ನೀಡುವುದಿಲ್ಲ. ಲೋಕಸಭೆಯಲ್ಲಿ ಲಿಖಿತ ಉತ್ತರಗಳಿಗಾಗಿ ಪ್ರತಿದಿನ 230 ಪ್ರಶ್ನೆಗಳನ್ನು ಆಯ್ಕೆಮಾಡಿದರೆ ರಾಜ್ಯಸಭೆಯಲ್ಲಿ ಈ ಪ್ರಶ್ನೆಗಳ ಮಿತಿ 160 ಆಗಿದೆ.

ಡಿಸೆಂಬರ್ 14ರಂದು ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು.

ಗೃಹ ಸಚಿವರ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...