Homeಮುಖಪುಟಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ಪ್ರತಿಪಕ್ಷದ ಒಟ್ಟು 141 ಸಂಸದರನ್ನು ಲೋಕಸಭೆ ಮತ್ತು ರಾಜ್ಯಸಭೆಯಿಂದ ಚಳಿಗಾಲದ ಅಧಿವೇಶನದ ಕೊನೆವರೆಗೆ ಅಮಾನತು ಮಾಡಲಾಗಿದೆ. ದೇಶದ ಇತಿಹಾಸಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯಲ್ಲಿ ಸಂಸದರನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಲೋಕಸಭೆಯಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷ ಸದಸ್ಯರು ಕೇಳಿದ 27 ಪ್ರಶ್ನೆಗಳನ್ನು ಮಂಗಳವಾರ ಕೇಳಬೇಕಾದ ಪ್ರಶ್ನೆಗಳ ಪಟ್ಟಿಯಿಂದ ಅಳಿಸಲಾಗಿದೆ. ವಿವಿಧ ಇಲಾಖೆಯ ಸಚಿವರಿಗೆ ಪ್ರಶ್ನೆಯನ್ನು ಕೇಳಬೇಕಿದ್ದ ಸಂಸದರ ಪಟ್ಟಿಯಿಂದ ಕೂಡ ಮಾನತುಗೊಂಡ ಸಂಸದರ ಹೆಸರನ್ನು ತೆಗೆದುಹಾಕಲಾಗಿದೆ.

ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದ  ಹನುಮಾನ್ ಬೇನಿವಾಲ್ ಅವರ ಹೆಸರನ್ನು ಸಹ ಅಳಿಸಲಾಗಿದೆ. ತೃಣಮೂಲ ಕಾಂಗ್ರೆಸ್‌ನ ಅಪರೂಪ ಪೊದ್ದಾರ್ ಮತ್ತು ಕಾಂಗ್ರೆಸ್‌ನ ರಮ್ಯಾ ಹರಿದಾಸ್ ಕೇಳಿದ ಎರಡು ನಕ್ಷತ್ರ(ಸ್ಟಾರ್) ಹಾಕಿದ ಪ್ರಶ್ನೆಗಳನ್ನು ಅಳಿಸಲಾಗಿದೆ ಮತ್ತು 25 ನಕ್ಷತ್ರರಹಿತ ಪ್ರಶ್ನೆಗಳನ್ನು ಪಟ್ಟಿಯಿಂದ ಅಳಿಸಲಾಗಿದೆ. ಮಂತ್ರಿಗಳು ನಕ್ಷತ್ರ ಹಾಕಿದ ಪ್ರಶ್ನೆಗಳಿಗೆ ಮೌಖಿಕ ಉತ್ತರಗಳನ್ನು ನೀಡುತ್ತಾರೆ ಮತ್ತು ನಕ್ಷತ್ರ ಹಾಕದ ಪ್ರಶ್ನೆಗಳಿಗೆ ಲಿಖಿತ ಉತ್ತರಗಳನ್ನು ನೀಡುತ್ತಾರೆ.

ಸ್ಟಾರ್ ಮಾಡಿದ ಹಾಗೂ ಅನ್‌ಸ್ಟಾರ್ ಮಾಡಿದ ಪ್ರಶ್ನೆಗಳು ಎಂದರೇನು?

ಸಂಸದರಿಗೆ ಸದನದಲ್ಲಿ ನಕ್ಷತ್ರ ಚಿಹ್ನೆ ಇರುವ ಮೌಖಿಕ ಉತ್ತರ ಪಡೆಯಬಹುದಾದ ಪ್ರಶ್ನೆ ಕೇಳುವ ಅವಕಾಶವಿದೆ. ಈ ರೀತಿಯ ಪ್ರಶ್ನೆಗಳನ್ನು ಸ್ಟಾರ್ ಮಾಡಿದ ಇಲ್ಲವೇ ನಕ್ಷತ್ರ ಹಾಕಿದ ಪ್ರಶ್ನೆ ಎಂದು ಕರೆಯಲಾಗುತ್ತದೆ. ಲೋಕಸಭೆಯಲ್ಲಿ ಒಂದು ದಿನದ ಪ್ರಶ್ನೋತ್ತರ ಸಮಯದಲ್ಲಿ 20ಕ್ಕಿಂತ ಹೆಚ್ಚು ನಕ್ಷತ್ರ ಹಾಕಿದ ಪ್ರಶ್ನೆಗಳನ್ನು ಪರಿಗಣಿಸುವುದಿಲ್ಲ ಹಾಗೂ ರಾಜ್ಯಸಭೆಯಲ್ಲಿ ನಕ್ಷತ್ರ ಹಾಕಿದ 15 ಪ್ರಶ್ನೆಗಳನ್ನು ಅನುಮತಿಸಲಾಗುತ್ತದೆ. ಈ ಪ್ರಶ್ನೆಗಳಿಗೆ ಸಚಿವರು ಮೌಖಿಕವಾಗಿಯೇ ಉತ್ತರಿಸಬೇಕಿದೆ.

ನಕ್ಷತ್ರ ಹಾಕದ ಪ್ರಶ್ನೆ ಎಂದರೆ ಸಂಸದರ ಲಿಖಿತ ಉತ್ತರವನ್ನು ಕೇಳಿದ ಪ್ರಶ್ನೆಯಾಗಿದೆ. ಇಂತಹ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ಮೇಜಿನ ಮೇಲೆ ಇರಿಸಲಾಗುತ್ತದೆ. ತದನಂತರ ಇಂತಹ ಪ್ರಶ್ನೆಗಳು ಪೂರಕ ಪ್ರಶ್ನೆಗಳಿಗೆ ಅವಕಾಶ ನೀಡುವುದಿಲ್ಲ. ಲೋಕಸಭೆಯಲ್ಲಿ ಲಿಖಿತ ಉತ್ತರಗಳಿಗಾಗಿ ಪ್ರತಿದಿನ 230 ಪ್ರಶ್ನೆಗಳನ್ನು ಆಯ್ಕೆಮಾಡಿದರೆ ರಾಜ್ಯಸಭೆಯಲ್ಲಿ ಈ ಪ್ರಶ್ನೆಗಳ ಮಿತಿ 160 ಆಗಿದೆ.

ಡಿಸೆಂಬರ್ 14ರಂದು ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದಿದ್ದ ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು.

ಗೃಹ ಸಚಿವರ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...