Homeಕರೋನಾ ತಲ್ಲಣಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

- Advertisement -
- Advertisement -

ಕೊರೊನಾ ಎರಡನೇ ಅಲೆಯಲ್ಲಿ ಕರ್ನಾಟಕದಾದ್ಯಂತ 28 ವೈದ್ಯರು ಕೊರೊನಾ ಸೋಂಕಿನಿಂದ ಬಲಿಯಾಗಿದ್ದಾರೆ. ಆದರೆ ಆರೋಗ್ಯ ಕಾರ್ಯಕರ್ತರಿಗಾಗಿ ಸರ್ಕಾರವು ನಿಗದಿಪಡಿಸಿದ ವಿಮಾ ಪರಿಹಾರ ಇಲ್ಲಿವರೆಗೂ ಒಂದು ಕುಟುಂಬಕ್ಕೂ ದೊರೆತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ ಹಲವು ಬಾರಿ ಮನವಿಯನ್ನು ಸಲ್ಲಿಸಿದೆ ಎನ್ನಲಾಗಿದೆ.

ಮೃತಪಟ್ಟ 28 ವೈದ್ಯರೆಲ್ಲರೂ ಕನಿಷ್ಠ ಒಂದು ಕೊರೊನಾ ಲಸಿಕೆ ಡೋಸ್ ಪಡೆದಿದ್ದರೆ, ಅವರಲ್ಲಿ ಹೆಚ್ಚಿನವರು  ಎರಡನೇ ಡೋಸ್ ಕೂಡ ಪಡೆದಿದ್ದರು ಎನ್ನಲಾಗಿದೆ. ಮೃತರಲ್ಲಿ ನಾಲ್ಕು ಮಂದಿ  ವೈದ್ಯರು ಬೆಂಗಳೂರಿನವರಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಡಾ.ಮನು ವಿ (27) ಜೂನ್ 16 ರಂದು ನಿಧನರಾಗಿದ್ದಾರೆ. ಬುರುದುಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರು, ಕೋವಿಡ್ ರೋಗಿಗಳ ತಪಾಸಣೆ ನಡೆಸಿ, ಚಿಕಿತ್ಸೆ ನೀಡುತ್ತಿದ್ದರು. ಅಂಗವೈಕಲ್ಯತೆಯನ್ನು ಮೆಟ್ಟಿನಿಂತು ಜನರ ಸೇವೆಗೆ ಮುಂದಾಗಿದ್ದ ಮನು ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟ ಎಂಬ ಸ್ನೇಹಿತರು ತಿಳಿಸಿದ್ದಾರೆ.

ಇದನ್ನೂ ಓದಿ: ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ಡಾ.ಮೊಹಮ್ಮದ್ ಖಲೀಲುಲ್ಲಾ ಶಕೀಲ್, ಜೂನ್ 7 ರಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿತರುವ ಹಲವಾರು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದರು. ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದ ಅವರು, ಸೋಂಕಿಗೆ ತುತ್ತಾಗಿ ಅಸುನೀಗಿದ್ದಾರೆ. ಇಲ್ಲಿಯವರೆಗೂ ಸರ್ಕಾರದಿಂದ ಇವರ ಕುಟುಂಬಕ್ಕೆ ಯಯಾವುದೇ ಸಹಾಯವಾಗಿಲ್ಲ ಎಂದು ಡಾ.ಶಕೀಲ್ ಅವರ ಪುತ್ರ ಡಾ.ಮೊಹಮ್ಮದ್ ಅಕ್ವಿಬ್ ಶಕೀಲ್ ಹೇಳಿದ್ದಾರೆ.

ಇವರುಗಳ ಜೊತೆಗೆ, ಚಾಮರಾಜನಗರದ ಕೊಳ್ಳೇಗಾಲದಲ್ಲಿ ವೈದ್ಯಾಧಿಕಾರಿಯಾಗಿದ್ದ ಡಾ. ಜಿಎನ್ ಗಣೇಶ್ ಕುಮಾರ್ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕ ಸಾಂಕ್ರಾಮಿಕ ಸೋಂಕಿತರಾಗಿ ಸಾವನ್ನಪ್ಪಿದ್ದಾರೆ.

“ಭಾರತದಲ್ಲಿ ಎರಡನೇ ಅಲೆಯಲ್ಲಿ ಒಟ್ಟು 750 ವೈದ್ಯರು ಸಾವನ್ನಪ್ಪಿದ್ದಾರೆ. ಅವರೆಲ್ಲರ ವಿವರಗಳನ್ನು ನಾವು ಸರ್ಕಾರಕ್ಕೆ ಸಲ್ಲಿಸಿದ್ದೇವೆ ” ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಡಾ. ಜೆಎ ಜೈಲಾಲ್ ತಿಳಿಸಿದ್ದಾರೆ.

’ಮಾರ್ಗಸೂಚಿಗಳ ಪ್ರಕಾರ, ಕೋವಿಡ್ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿರುವ ಆರೋಗ್ಯ ಕಾರ್ಯಕರ್ತರಿಗೆ ಪರಿಹಾರ ಸಿಗಲಿದೆ .ಈ  ಪ್ರಯೋಜನವು ಸರ್ಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕಾರ್ಯಕರ್ತರನ್ನು ಒಳಗೊಳ್ಳುತ್ತದೆ, ಆದರೆ ಖಾಸಗಿ ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಿಗಲ್ಲ. ನಾವು ಸ್ವೀಕರಿಸಿದ ಎಲ್ಲಾ ಪ್ರಸ್ತಾಪಗಳನ್ನು ಕೇಂದ್ರಕ್ಕೆ ಕಳುಹಿಸಿದ್ದೇವೆ’ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಭಾಗದ ನಿರ್ದೇಶಕ ಡಾ. ಓಂ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...