Homeಮುಖಪುಟದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

- Advertisement -
- Advertisement -

ಸುಪ್ರೀಂಕೋರ್ಟ್ ನೀಡಿದ 2018ರ ಮಾರ್ಗಸೂಚಿಯಂತೆ ದ್ವೇಷ ಭಾಷಣ ಪ್ರಕರಣವನ್ನು ನಿಭಾಯಿಸುವ  ಸಂಬಂಧ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೊಡೆಲ್‌ ಅಧಿಕಾರಗಳನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ತೆಹಸೀನ್ ಪೂನಾವಾಲಾ ಪ್ರಕರಣದ ಅರ್ಜಿ ವಿಚಾರಣೆ ವೇಳೆ, ಗುಂಪು ಹಿಂಸಾಚಾರ ಮತ್ತು ಥಳಿತವನ್ನು ತಡೆಯಲು ನ್ಯಾಯಾಲಯವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ 28 ರಾಜ್ಯಗಳು ನೋಡಲ್ ಅಧಿಕಾರಿಗಳನ್ನು ನೇಮಿಸಿವೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ದ್ವೇಷದ ಭಾಷಣವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿ ಕೇಂದ್ರವು ಸಲ್ಲಿಸಿದ ಸ್ಥಿತಿ ವರದಿಯಲ್ಲಿ ಈ ವಿಚಾರ ಉಲ್ಲೇಖಿಸಲಾಗಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಆ.25ರಂದು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ನೋಡಲ್ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಂದ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತು 3 ವಾರಗಳಲ್ಲಿ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಗೃಹ ಸಚಿವಾಲಯವನ್ನು ಕೇಳಿತ್ತು. ಯಾವುದೇ ರಾಜ್ಯ ಸರ್ಕಾರವು ಹೇಳಿದ ವಿವರಗಳನ್ನು ಒದಗಿಸದಿದ್ದರೆ, ಅದರ ಬಗ್ಗೆ ಉನ್ನತ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿತ್ತು.

2018ರಲ್ಲಿ ಸಂಸತ್ತಿಗೆ ಹಿಂಸಾಚಾರದ ವಿರುದ್ಧ ವಿಶೇಷ ಕಾನೂನನ್ನು ರಚಿಸುವಂತೆ ಶಿಫಾರಸು ಸುಪ್ರಿಂಕೋರ್ಟ್ ಮಾಡಿತ್ತು. ಕಾನೂನಿನ ಭಯ ಸುಸಂಸ್ಕೃತ ಸಮಾಜದ ಅಡಿಪಾಯವಾಗಿದೆ ಎಂದು ಹೇಳಿತ್ತು. ದೇಶಾದ್ಯಂತ  ಗುಂಪು ಹತ್ಯೆಯನ್ನು ತಡೆಯಲು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ ಮತ್ತು ನೋಡಲ್ ಅಧಿಕಾರಿಗಳನ್ನು ನೇಮಿಸಲು ಆದೇಶವನ್ನು ನೀಡಿದೆ.

ಗುಂಪು ಹತ್ಯೆ ಮತ್ತು ಹಿಂಸಾಚಾರವನ್ನು ತಡೆಯಲು ನೀಡಿದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಕೇಂದ್ರ ಸರಕಾರ ಮತ್ತು 10 ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ 2019ರಲ್ಲಿ ತರಾಟೆಗೆ ತೆಗೆದುಕೊಂಡಿತ್ತು.

ಈ ಬಗ್ಗೆ ಜಿಲ್ಲಾ ಪೊಲೀಸ್ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸೂಚಿಸಿದೆ. ಈ ಸಮಿತಿಯು ದ್ವೇಷ ಭಾಷಣದ ದೂರುಗಳ ವಿಷಯ ಮತ್ತು ನಿಖರತೆ ಎರಡನ್ನೂ ಮೌಲ್ಯಮಾಪನ ಮಾಡಲಿದೆ. ಸಮಿತಿ ತನಿಖಾಧಿಕಾರಿಗೆ ನಿರ್ದಿಷ್ಠ ನಿರ್ದೇಶನಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಸಮಿತಿಯು ಒಂದು ಪ್ರಕರಣದ ಬಗ್ಗೆ ತಿಳಿಸಿದ ನಂತರ ನಿಗದಿತ ಅವಧಿಯೊಳಗೆ ಸಭೆ ಸೇರಬೇಕಾಗುತ್ತದೆ. ನಿಯಮಿತವಾಗಿ ಪ್ರಕರಣದಲ್ಲಿನ  ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಲೈವ್ ಲಾ ವರದಿ ಹೇಳಿದೆ.

ಇದನ್ನು ಓದಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಜಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...