Homeಮುಖಪುಟದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

- Advertisement -
- Advertisement -

ಸುಪ್ರೀಂಕೋರ್ಟ್ ನೀಡಿದ 2018ರ ಮಾರ್ಗಸೂಚಿಯಂತೆ ದ್ವೇಷ ಭಾಷಣ ಪ್ರಕರಣವನ್ನು ನಿಭಾಯಿಸುವ  ಸಂಬಂಧ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೊಡೆಲ್‌ ಅಧಿಕಾರಗಳನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ತೆಹಸೀನ್ ಪೂನಾವಾಲಾ ಪ್ರಕರಣದ ಅರ್ಜಿ ವಿಚಾರಣೆ ವೇಳೆ, ಗುಂಪು ಹಿಂಸಾಚಾರ ಮತ್ತು ಥಳಿತವನ್ನು ತಡೆಯಲು ನ್ಯಾಯಾಲಯವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ 28 ರಾಜ್ಯಗಳು ನೋಡಲ್ ಅಧಿಕಾರಿಗಳನ್ನು ನೇಮಿಸಿವೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ದ್ವೇಷದ ಭಾಷಣವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿ ಕೇಂದ್ರವು ಸಲ್ಲಿಸಿದ ಸ್ಥಿತಿ ವರದಿಯಲ್ಲಿ ಈ ವಿಚಾರ ಉಲ್ಲೇಖಿಸಲಾಗಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಆ.25ರಂದು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ನೋಡಲ್ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಂದ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತು 3 ವಾರಗಳಲ್ಲಿ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಗೃಹ ಸಚಿವಾಲಯವನ್ನು ಕೇಳಿತ್ತು. ಯಾವುದೇ ರಾಜ್ಯ ಸರ್ಕಾರವು ಹೇಳಿದ ವಿವರಗಳನ್ನು ಒದಗಿಸದಿದ್ದರೆ, ಅದರ ಬಗ್ಗೆ ಉನ್ನತ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿತ್ತು.

2018ರಲ್ಲಿ ಸಂಸತ್ತಿಗೆ ಹಿಂಸಾಚಾರದ ವಿರುದ್ಧ ವಿಶೇಷ ಕಾನೂನನ್ನು ರಚಿಸುವಂತೆ ಶಿಫಾರಸು ಸುಪ್ರಿಂಕೋರ್ಟ್ ಮಾಡಿತ್ತು. ಕಾನೂನಿನ ಭಯ ಸುಸಂಸ್ಕೃತ ಸಮಾಜದ ಅಡಿಪಾಯವಾಗಿದೆ ಎಂದು ಹೇಳಿತ್ತು. ದೇಶಾದ್ಯಂತ  ಗುಂಪು ಹತ್ಯೆಯನ್ನು ತಡೆಯಲು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ ಮತ್ತು ನೋಡಲ್ ಅಧಿಕಾರಿಗಳನ್ನು ನೇಮಿಸಲು ಆದೇಶವನ್ನು ನೀಡಿದೆ.

ಗುಂಪು ಹತ್ಯೆ ಮತ್ತು ಹಿಂಸಾಚಾರವನ್ನು ತಡೆಯಲು ನೀಡಿದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಕೇಂದ್ರ ಸರಕಾರ ಮತ್ತು 10 ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ 2019ರಲ್ಲಿ ತರಾಟೆಗೆ ತೆಗೆದುಕೊಂಡಿತ್ತು.

ಈ ಬಗ್ಗೆ ಜಿಲ್ಲಾ ಪೊಲೀಸ್ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸೂಚಿಸಿದೆ. ಈ ಸಮಿತಿಯು ದ್ವೇಷ ಭಾಷಣದ ದೂರುಗಳ ವಿಷಯ ಮತ್ತು ನಿಖರತೆ ಎರಡನ್ನೂ ಮೌಲ್ಯಮಾಪನ ಮಾಡಲಿದೆ. ಸಮಿತಿ ತನಿಖಾಧಿಕಾರಿಗೆ ನಿರ್ದಿಷ್ಠ ನಿರ್ದೇಶನಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಸಮಿತಿಯು ಒಂದು ಪ್ರಕರಣದ ಬಗ್ಗೆ ತಿಳಿಸಿದ ನಂತರ ನಿಗದಿತ ಅವಧಿಯೊಳಗೆ ಸಭೆ ಸೇರಬೇಕಾಗುತ್ತದೆ. ನಿಯಮಿತವಾಗಿ ಪ್ರಕರಣದಲ್ಲಿನ  ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಲೈವ್ ಲಾ ವರದಿ ಹೇಳಿದೆ.

ಇದನ್ನು ಓದಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಜಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...