Homeಮುಖಪುಟ28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

- Advertisement -
- Advertisement -

ಝೀ ನ್ಯೂಸ್ ಹಿಂದಿ ಸುದ್ದಿವಾಹಿನಿಯ‌ 28‌ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿದ್ದು ಕೂಡಲೇ ಝೀ ನ್ಯೂಸ್ ಕಛೇರಿ ಸೀಲ್‌ಡೌನ್ ಮಾಡಿ ಸಂಪಾದಕ ಸುಧೀರ್‌ ಚೌಧರಿ ಸೇರಿದಂತೆ ಪ್ರತಿಯೊಬ್ಬ ಉದ್ಯೋಗಿಗಳನ್ನು ಕ್ವಾರಂಟೈನ್‌ ಮಾಡುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ.

ನಿನ್ನೆ ಮಧ್ಯಾಹ್ನ ಝೀ ನ್ಯೂಸ್ ಪ್ರಧಾನ ಸಂಪಾದಕ ಸುಧೀರ್‌ ಚೌಧರಿಯವರು ಟ್ವೀಟ್‌ ಮಾಡಿ “ಇವು ಕಷ್ಟದ ಸಮಯಗಳು. ನನ್ನ 28 ಸಹೋದ್ಯೋಗಿಗಳು COVID-19 ಸೋಂಕಿಗೆ ತುತ್ತಾಗಿದ್ದಾರೆ. ನಾನು ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಮತ್ತು ಅವರ ಧೈರ್ಯ ಮತ್ತು ವೃತ್ತಿಪರತೆಗೆ ನಮಸ್ಕರಿಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಅಲ್ಲದೇ ಮುಂದುವರಿದ ಅವರು ಸೋಂಕಿತರಿಗೆ ಮನೆಯಲ್ಲಿಯೇ ಇರುವ ಅವಕಾಶವಿತ್ತು. ಆದರೂ ಅವರು ವೃತ್ತಪರರಾದ್ದರಿಂದ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಗೌರವಿಸದಿದ್ದರೂ ಪರವಾಗಿಲ್ಲ ಹಗೆತನ ಸಾಧಿಸಬೇಡಿ ಎರಡನೇ ಟ್ವೀಟ್‌ ಮಾಡಿದರು. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾವುದೇ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಬಂದರೆ ಅವರ ಸಂಪರ್ಕದಲ್ಲಿದ್ದವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಬೇಕೆಂಬ ನಿಯಮವಿದೆ. ಅದನ್ನು ಉಲ್ಲಂಘಿಸಿ ಅವರು ಕಚೇರಿಗೆ ಬಂದುದ್ದೇಕೆ ಎಂಬ ಪ್ರಶ್ನೆಯನ್ನು ಬಹಳಷ್ಟು ನೆಟ್ಟಿಗರು ಎತ್ತಿದ್ದಾರೆ.

ಸುಧೀರ್‌ ಚೌಧರಿತವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಸೋಂಕಿತ ವ್ಯಕ್ತಿಗಳು ಕೆಲಸಕ್ಕೆ ಬಂದಿದ್ದರೆ ಅದು ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 269 ಮತ್ತು 188 ರ ಅಡಿಯಲ್ಲಿ ನೀಡಲಾದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಅರವಿಂದ್‌ ಗುಣಶೇಖರ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದಲ್ಲದೇ ಪತ್ರಕರ್ತ ಅವೀಕ್‌ ಸೇನ್‌ರವರು ಸಿಬ್ಬಂದಿಗಳನ್ನು ಒತ್ತಾಯಪೂರ್ವಕವಾಗಿ ಕಚೇರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ. ತನ್ನ ಸಿಬ್ಬಂದಗಳಿಗೆ ಭಾವನಾತ್ಮಕ ಭಾಷಣ ಮಾಡಿ, ಸೋಂಕು ಹರಡುತ್ತದೆ, ನಾವು ಅದನ್ನು ಹರಡಬಹುದು. ಹಾಗಂತ ಕಚೇರಿಗೆ ತಪ್ಪಿಸಿಕೊಳ್ಳುವವರ ಮೇಲೆ ಕಣ್ಣಿಡಲಾಗುತ್ತದೆ’ ಎಂದು ಬ್ಲಾಕ್‌ ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಸುಧೀರ್‌ ಚೌಧರಿಯವರು ಶುಕ್ರವಾರದಿಂದಲೇ ನಮ್ಮ ಕಚೇರಿ ಸೀಲ್‌ಡೌನ್‌ ಆಗಿದೆ. ಸೋಮವಾರದಿಂದಲೇ ಸೋಂಕಿತರು ನಮ್ಮ ಕಚೇರಿಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡುವ ಕೆಲಸ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ತದನಂತರ ಶಟ್‌ಡೌನ್‌ಝೀನ್ಯೂಸ್ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಕೆಲ ಟ್ವೀಟ್‌ ಮತ್ತು ಫೇಸ್‌ಬುಕ್‌ ಅಭಿಪ್ರಾಯಗಳು ಕೆಳಗಿನಂತಿವೆ.

ಸುಧೀರ್ ಚೌಧರಿಯ ಹಿಪಾಕ್ರಸಿಗೆ ಒಂದು ಮಿತಿಯೇ ಇದ್ದಂತಿಲ್ಲ.‌ ತಬ್ಲೀಗಿ ಜಮಾತ್ ನವರಿಗೆ ಕೊರೋನಾ ಸೋಂಕು ಬಂದಾಗ ಅವರನ್ನು ಭಯೋತ್ಪಾದಕರು,…

Posted by Dinesh Kumar Dinoo on Monday, May 18, 2020


ಇದನ್ನೂ ಓದಿ: ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...