Homeಮುಖಪುಟ28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

- Advertisement -
- Advertisement -

ಝೀ ನ್ಯೂಸ್ ಹಿಂದಿ ಸುದ್ದಿವಾಹಿನಿಯ‌ 28‌ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿದ್ದು ಕೂಡಲೇ ಝೀ ನ್ಯೂಸ್ ಕಛೇರಿ ಸೀಲ್‌ಡೌನ್ ಮಾಡಿ ಸಂಪಾದಕ ಸುಧೀರ್‌ ಚೌಧರಿ ಸೇರಿದಂತೆ ಪ್ರತಿಯೊಬ್ಬ ಉದ್ಯೋಗಿಗಳನ್ನು ಕ್ವಾರಂಟೈನ್‌ ಮಾಡುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ.

ನಿನ್ನೆ ಮಧ್ಯಾಹ್ನ ಝೀ ನ್ಯೂಸ್ ಪ್ರಧಾನ ಸಂಪಾದಕ ಸುಧೀರ್‌ ಚೌಧರಿಯವರು ಟ್ವೀಟ್‌ ಮಾಡಿ “ಇವು ಕಷ್ಟದ ಸಮಯಗಳು. ನನ್ನ 28 ಸಹೋದ್ಯೋಗಿಗಳು COVID-19 ಸೋಂಕಿಗೆ ತುತ್ತಾಗಿದ್ದಾರೆ. ನಾನು ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಮತ್ತು ಅವರ ಧೈರ್ಯ ಮತ್ತು ವೃತ್ತಿಪರತೆಗೆ ನಮಸ್ಕರಿಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಅಲ್ಲದೇ ಮುಂದುವರಿದ ಅವರು ಸೋಂಕಿತರಿಗೆ ಮನೆಯಲ್ಲಿಯೇ ಇರುವ ಅವಕಾಶವಿತ್ತು. ಆದರೂ ಅವರು ವೃತ್ತಪರರಾದ್ದರಿಂದ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಗೌರವಿಸದಿದ್ದರೂ ಪರವಾಗಿಲ್ಲ ಹಗೆತನ ಸಾಧಿಸಬೇಡಿ ಎರಡನೇ ಟ್ವೀಟ್‌ ಮಾಡಿದರು. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾವುದೇ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಬಂದರೆ ಅವರ ಸಂಪರ್ಕದಲ್ಲಿದ್ದವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಬೇಕೆಂಬ ನಿಯಮವಿದೆ. ಅದನ್ನು ಉಲ್ಲಂಘಿಸಿ ಅವರು ಕಚೇರಿಗೆ ಬಂದುದ್ದೇಕೆ ಎಂಬ ಪ್ರಶ್ನೆಯನ್ನು ಬಹಳಷ್ಟು ನೆಟ್ಟಿಗರು ಎತ್ತಿದ್ದಾರೆ.

ಸುಧೀರ್‌ ಚೌಧರಿತವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಸೋಂಕಿತ ವ್ಯಕ್ತಿಗಳು ಕೆಲಸಕ್ಕೆ ಬಂದಿದ್ದರೆ ಅದು ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 269 ಮತ್ತು 188 ರ ಅಡಿಯಲ್ಲಿ ನೀಡಲಾದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಅರವಿಂದ್‌ ಗುಣಶೇಖರ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದಲ್ಲದೇ ಪತ್ರಕರ್ತ ಅವೀಕ್‌ ಸೇನ್‌ರವರು ಸಿಬ್ಬಂದಿಗಳನ್ನು ಒತ್ತಾಯಪೂರ್ವಕವಾಗಿ ಕಚೇರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ. ತನ್ನ ಸಿಬ್ಬಂದಗಳಿಗೆ ಭಾವನಾತ್ಮಕ ಭಾಷಣ ಮಾಡಿ, ಸೋಂಕು ಹರಡುತ್ತದೆ, ನಾವು ಅದನ್ನು ಹರಡಬಹುದು. ಹಾಗಂತ ಕಚೇರಿಗೆ ತಪ್ಪಿಸಿಕೊಳ್ಳುವವರ ಮೇಲೆ ಕಣ್ಣಿಡಲಾಗುತ್ತದೆ’ ಎಂದು ಬ್ಲಾಕ್‌ ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಸುಧೀರ್‌ ಚೌಧರಿಯವರು ಶುಕ್ರವಾರದಿಂದಲೇ ನಮ್ಮ ಕಚೇರಿ ಸೀಲ್‌ಡೌನ್‌ ಆಗಿದೆ. ಸೋಮವಾರದಿಂದಲೇ ಸೋಂಕಿತರು ನಮ್ಮ ಕಚೇರಿಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡುವ ಕೆಲಸ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ತದನಂತರ ಶಟ್‌ಡೌನ್‌ಝೀನ್ಯೂಸ್ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಕೆಲ ಟ್ವೀಟ್‌ ಮತ್ತು ಫೇಸ್‌ಬುಕ್‌ ಅಭಿಪ್ರಾಯಗಳು ಕೆಳಗಿನಂತಿವೆ.

ಸುಧೀರ್ ಚೌಧರಿಯ ಹಿಪಾಕ್ರಸಿಗೆ ಒಂದು ಮಿತಿಯೇ ಇದ್ದಂತಿಲ್ಲ.‌ ತಬ್ಲೀಗಿ ಜಮಾತ್ ನವರಿಗೆ ಕೊರೋನಾ ಸೋಂಕು ಬಂದಾಗ ಅವರನ್ನು ಭಯೋತ್ಪಾದಕರು,…

Posted by Dinesh Kumar Dinoo on Monday, May 18, 2020


ಇದನ್ನೂ ಓದಿ: ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...