Homeಮುಖಪುಟ28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

- Advertisement -
- Advertisement -

ಝೀ ನ್ಯೂಸ್ ಹಿಂದಿ ಸುದ್ದಿವಾಹಿನಿಯ‌ 28‌ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿದ್ದು ಕೂಡಲೇ ಝೀ ನ್ಯೂಸ್ ಕಛೇರಿ ಸೀಲ್‌ಡೌನ್ ಮಾಡಿ ಸಂಪಾದಕ ಸುಧೀರ್‌ ಚೌಧರಿ ಸೇರಿದಂತೆ ಪ್ರತಿಯೊಬ್ಬ ಉದ್ಯೋಗಿಗಳನ್ನು ಕ್ವಾರಂಟೈನ್‌ ಮಾಡುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ.

ನಿನ್ನೆ ಮಧ್ಯಾಹ್ನ ಝೀ ನ್ಯೂಸ್ ಪ್ರಧಾನ ಸಂಪಾದಕ ಸುಧೀರ್‌ ಚೌಧರಿಯವರು ಟ್ವೀಟ್‌ ಮಾಡಿ “ಇವು ಕಷ್ಟದ ಸಮಯಗಳು. ನನ್ನ 28 ಸಹೋದ್ಯೋಗಿಗಳು COVID-19 ಸೋಂಕಿಗೆ ತುತ್ತಾಗಿದ್ದಾರೆ. ನಾನು ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಮತ್ತು ಅವರ ಧೈರ್ಯ ಮತ್ತು ವೃತ್ತಿಪರತೆಗೆ ನಮಸ್ಕರಿಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಅಲ್ಲದೇ ಮುಂದುವರಿದ ಅವರು ಸೋಂಕಿತರಿಗೆ ಮನೆಯಲ್ಲಿಯೇ ಇರುವ ಅವಕಾಶವಿತ್ತು. ಆದರೂ ಅವರು ವೃತ್ತಪರರಾದ್ದರಿಂದ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಗೌರವಿಸದಿದ್ದರೂ ಪರವಾಗಿಲ್ಲ ಹಗೆತನ ಸಾಧಿಸಬೇಡಿ ಎರಡನೇ ಟ್ವೀಟ್‌ ಮಾಡಿದರು. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾವುದೇ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಬಂದರೆ ಅವರ ಸಂಪರ್ಕದಲ್ಲಿದ್ದವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಬೇಕೆಂಬ ನಿಯಮವಿದೆ. ಅದನ್ನು ಉಲ್ಲಂಘಿಸಿ ಅವರು ಕಚೇರಿಗೆ ಬಂದುದ್ದೇಕೆ ಎಂಬ ಪ್ರಶ್ನೆಯನ್ನು ಬಹಳಷ್ಟು ನೆಟ್ಟಿಗರು ಎತ್ತಿದ್ದಾರೆ.

ಸುಧೀರ್‌ ಚೌಧರಿತವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಸೋಂಕಿತ ವ್ಯಕ್ತಿಗಳು ಕೆಲಸಕ್ಕೆ ಬಂದಿದ್ದರೆ ಅದು ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 269 ಮತ್ತು 188 ರ ಅಡಿಯಲ್ಲಿ ನೀಡಲಾದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಅರವಿಂದ್‌ ಗುಣಶೇಖರ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದಲ್ಲದೇ ಪತ್ರಕರ್ತ ಅವೀಕ್‌ ಸೇನ್‌ರವರು ಸಿಬ್ಬಂದಿಗಳನ್ನು ಒತ್ತಾಯಪೂರ್ವಕವಾಗಿ ಕಚೇರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ. ತನ್ನ ಸಿಬ್ಬಂದಗಳಿಗೆ ಭಾವನಾತ್ಮಕ ಭಾಷಣ ಮಾಡಿ, ಸೋಂಕು ಹರಡುತ್ತದೆ, ನಾವು ಅದನ್ನು ಹರಡಬಹುದು. ಹಾಗಂತ ಕಚೇರಿಗೆ ತಪ್ಪಿಸಿಕೊಳ್ಳುವವರ ಮೇಲೆ ಕಣ್ಣಿಡಲಾಗುತ್ತದೆ’ ಎಂದು ಬ್ಲಾಕ್‌ ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಸುಧೀರ್‌ ಚೌಧರಿಯವರು ಶುಕ್ರವಾರದಿಂದಲೇ ನಮ್ಮ ಕಚೇರಿ ಸೀಲ್‌ಡೌನ್‌ ಆಗಿದೆ. ಸೋಮವಾರದಿಂದಲೇ ಸೋಂಕಿತರು ನಮ್ಮ ಕಚೇರಿಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡುವ ಕೆಲಸ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ತದನಂತರ ಶಟ್‌ಡೌನ್‌ಝೀನ್ಯೂಸ್ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಕೆಲ ಟ್ವೀಟ್‌ ಮತ್ತು ಫೇಸ್‌ಬುಕ್‌ ಅಭಿಪ್ರಾಯಗಳು ಕೆಳಗಿನಂತಿವೆ.

ಸುಧೀರ್ ಚೌಧರಿಯ ಹಿಪಾಕ್ರಸಿಗೆ ಒಂದು ಮಿತಿಯೇ ಇದ್ದಂತಿಲ್ಲ.‌ ತಬ್ಲೀಗಿ ಜಮಾತ್ ನವರಿಗೆ ಕೊರೋನಾ ಸೋಂಕು ಬಂದಾಗ ಅವರನ್ನು ಭಯೋತ್ಪಾದಕರು,…

Posted by Dinesh Kumar Dinoo on Monday, May 18, 2020


ಇದನ್ನೂ ಓದಿ: ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...