Homeಮುಖಪುಟ28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

- Advertisement -
- Advertisement -

ಝೀ ನ್ಯೂಸ್ ಹಿಂದಿ ಸುದ್ದಿವಾಹಿನಿಯ‌ 28‌ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿದ್ದು ಕೂಡಲೇ ಝೀ ನ್ಯೂಸ್ ಕಛೇರಿ ಸೀಲ್‌ಡೌನ್ ಮಾಡಿ ಸಂಪಾದಕ ಸುಧೀರ್‌ ಚೌಧರಿ ಸೇರಿದಂತೆ ಪ್ರತಿಯೊಬ್ಬ ಉದ್ಯೋಗಿಗಳನ್ನು ಕ್ವಾರಂಟೈನ್‌ ಮಾಡುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ.

ನಿನ್ನೆ ಮಧ್ಯಾಹ್ನ ಝೀ ನ್ಯೂಸ್ ಪ್ರಧಾನ ಸಂಪಾದಕ ಸುಧೀರ್‌ ಚೌಧರಿಯವರು ಟ್ವೀಟ್‌ ಮಾಡಿ “ಇವು ಕಷ್ಟದ ಸಮಯಗಳು. ನನ್ನ 28 ಸಹೋದ್ಯೋಗಿಗಳು COVID-19 ಸೋಂಕಿಗೆ ತುತ್ತಾಗಿದ್ದಾರೆ. ನಾನು ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಮತ್ತು ಅವರ ಧೈರ್ಯ ಮತ್ತು ವೃತ್ತಿಪರತೆಗೆ ನಮಸ್ಕರಿಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಅಲ್ಲದೇ ಮುಂದುವರಿದ ಅವರು ಸೋಂಕಿತರಿಗೆ ಮನೆಯಲ್ಲಿಯೇ ಇರುವ ಅವಕಾಶವಿತ್ತು. ಆದರೂ ಅವರು ವೃತ್ತಪರರಾದ್ದರಿಂದ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಗೌರವಿಸದಿದ್ದರೂ ಪರವಾಗಿಲ್ಲ ಹಗೆತನ ಸಾಧಿಸಬೇಡಿ ಎರಡನೇ ಟ್ವೀಟ್‌ ಮಾಡಿದರು. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾವುದೇ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಬಂದರೆ ಅವರ ಸಂಪರ್ಕದಲ್ಲಿದ್ದವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಬೇಕೆಂಬ ನಿಯಮವಿದೆ. ಅದನ್ನು ಉಲ್ಲಂಘಿಸಿ ಅವರು ಕಚೇರಿಗೆ ಬಂದುದ್ದೇಕೆ ಎಂಬ ಪ್ರಶ್ನೆಯನ್ನು ಬಹಳಷ್ಟು ನೆಟ್ಟಿಗರು ಎತ್ತಿದ್ದಾರೆ.

ಸುಧೀರ್‌ ಚೌಧರಿತವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಸೋಂಕಿತ ವ್ಯಕ್ತಿಗಳು ಕೆಲಸಕ್ಕೆ ಬಂದಿದ್ದರೆ ಅದು ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 269 ಮತ್ತು 188 ರ ಅಡಿಯಲ್ಲಿ ನೀಡಲಾದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಅರವಿಂದ್‌ ಗುಣಶೇಖರ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದಲ್ಲದೇ ಪತ್ರಕರ್ತ ಅವೀಕ್‌ ಸೇನ್‌ರವರು ಸಿಬ್ಬಂದಿಗಳನ್ನು ಒತ್ತಾಯಪೂರ್ವಕವಾಗಿ ಕಚೇರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ. ತನ್ನ ಸಿಬ್ಬಂದಗಳಿಗೆ ಭಾವನಾತ್ಮಕ ಭಾಷಣ ಮಾಡಿ, ಸೋಂಕು ಹರಡುತ್ತದೆ, ನಾವು ಅದನ್ನು ಹರಡಬಹುದು. ಹಾಗಂತ ಕಚೇರಿಗೆ ತಪ್ಪಿಸಿಕೊಳ್ಳುವವರ ಮೇಲೆ ಕಣ್ಣಿಡಲಾಗುತ್ತದೆ’ ಎಂದು ಬ್ಲಾಕ್‌ ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಸುಧೀರ್‌ ಚೌಧರಿಯವರು ಶುಕ್ರವಾರದಿಂದಲೇ ನಮ್ಮ ಕಚೇರಿ ಸೀಲ್‌ಡೌನ್‌ ಆಗಿದೆ. ಸೋಮವಾರದಿಂದಲೇ ಸೋಂಕಿತರು ನಮ್ಮ ಕಚೇರಿಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡುವ ಕೆಲಸ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ತದನಂತರ ಶಟ್‌ಡೌನ್‌ಝೀನ್ಯೂಸ್ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಕೆಲ ಟ್ವೀಟ್‌ ಮತ್ತು ಫೇಸ್‌ಬುಕ್‌ ಅಭಿಪ್ರಾಯಗಳು ಕೆಳಗಿನಂತಿವೆ.

ಸುಧೀರ್ ಚೌಧರಿಯ ಹಿಪಾಕ್ರಸಿಗೆ ಒಂದು ಮಿತಿಯೇ ಇದ್ದಂತಿಲ್ಲ.‌ ತಬ್ಲೀಗಿ ಜಮಾತ್ ನವರಿಗೆ ಕೊರೋನಾ ಸೋಂಕು ಬಂದಾಗ ಅವರನ್ನು ಭಯೋತ್ಪಾದಕರು,…

Posted by Dinesh Kumar Dinoo on Monday, May 18, 2020


ಇದನ್ನೂ ಓದಿ: ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...