Homeಮುಖಪುಟಹೊಸ ಸಂಸತ್ತು ‘ಸೆಂಟ್ರಲ್‌ ವಿಸ್ಟಾ’ ನಿರ್ಮಾಣ ವೆಚ್ಚ ಯೋಜನೆಗಿಂತ 282 ಕೋಟಿ ರೂ. ಹೆಚ್ಚಳ

ಹೊಸ ಸಂಸತ್ತು ‘ಸೆಂಟ್ರಲ್‌ ವಿಸ್ಟಾ’ ನಿರ್ಮಾಣ ವೆಚ್ಚ ಯೋಜನೆಗಿಂತ 282 ಕೋಟಿ ರೂ. ಹೆಚ್ಚಳ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ‘ಸೆಂಟ್ರಲ್‌ ವಿಸ್ಟಾ’ ನೂತನ ಸಂಸತ್ ಭವನಕ್ಕೆ, ಈ ಹಿಂದೆ ಯೋಜಿಸಿರುವುದಕ್ಕಿಂತ ಹೆಚ್ಚುವರಿಯಾಗಿ ಹೆಚ್ಚು 282 ಕೋಟಿ ರೂ ವೆಚ್ಚವಾಗಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

2020 ರ ಡಿಸೆಂಬರ್‌ನಲ್ಲಿ ಇದಕ್ಕೆ ಶಿಲಾನ್ಯಾಸ ಸಮಾರಂಭ ನಡೆದಿತ್ತು. ಆಗ ಈ ಯೋಜನೆಗೆ 977 ಕೋಟಿ ರೂ ವೆಚ್ಚವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಬಜೆಟ್ ವೆಚ್ಚದ ಮೇಲೆ 29% ರಷ್ಟು ಹೆಚ್ಚಳವಾಗಳಿದೆ ಎಂದು ವರದಿಯಾಗಿದೆ. ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ಟಾಟಾ ಕಂಪೆನಿಯು, ಯೋಜನೆಯ ನಲವತ್ತು ಶೇಖಡದಷ್ಟು ಕೆಲಸವನ್ನು ಪೂರ್ಣಗೊಳಿಸಿದೆ.

ಇದನ್ನೂ ಓದಿ:‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಆದಾಗ್ಯೂ, ಕಟ್ಟಡವು ಈ ಹಿಂದೆ ಹೇಳಿದ ಸಮಯಕ್ಕೆ ಮುಗಿಯಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತಾವಿತ ನಾಲ್ಕು ಅಂತಸ್ತಿನ ಕಟ್ಟಡ, 13 ಎಕರೆಗಳಲ್ಲಿ ಎದ್ದು ನಿಲ್ಲಲಿದೆ. ಈ ವರ್ಷದ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಇದನ್ನು ಪೂರ್ಣಗೊಳಿಸಲಾಗುವುದು ಎಂದು ಆರಂಭದಲ್ಲಿ ನಿರೀಕ್ಷಿಸಲಾಗಿತ್ತು. ಇದರ ನಂತರ ಈ ಗಡುವನ್ನು ವಿಸ್ತರಿಸಿ ಅಕ್ಟೋಬರ್‌‌ಗೆ ನಿಗದಿಪಡಿಸಲಾಯಿತು.

ಕೋವಿಡ್ ಕಾರಣದಿಂದ ವಿಧಿಸಲಾಗಿರುವ ನಿರ್ಬಂಧಗಳು ಈ ನಿರ್ಮಾಣ ಕಾರ್ಯಗಳಿಗೆ ಅನ್ವಯಿಸುವುದಿಲ್ಲ. ಈ ನಿರ್ಮಾಣವು ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ನಂತರ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ:ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

1927 ರಲ್ಲಿ ಕಟ್ಟಲಾಗಿರುವ ಈಗಿನ ಸಂಸತ್‌ ಭವನವು ಇಕ್ಕಟ್ಟಾಗಿದೆ. ಲೋಕಸಭೆ ಮತ್ತು ರಾಜ್ಯಸಭಾ ಸಭಾಂಗಣಗಳ ಆಸನ ವ್ಯವಸ್ಥೆಗಳು ತನ್ನ ಸಾಮರ್ಥ್ಯವನ್ನು ತಲುಪಿದೆ. ಕಟ್ಟಡವು ಭೂಕಂಪದಿಂದ ರಕ್ಷಣೆ ಹೊಂದಿಲ್ಲ ಅಥವಾ ಯಾವುದೇ ಅಗ್ನಿ ಸುರಕ್ಷತೆ ಮಾನದಂಡಗಳನ್ನು ಹೊಂದಿಲ್ಲ ಎಂದು ಅನೇಕ ಸಂಸದರು ಗಮನಸೆಳೆದಿದ್ದರು ಎನ್‌ಡಿಟಿವಿ ವರದಿ ಮಾಡಿದೆ.

ಹೊಸ ಸಂಸತ್‌ ಕಟ್ಟಡದ ಲೋಕಸಭೆಯ ಚೇಂಬರ್‌ನಲ್ಲಿ 888 ಸದಸ್ಯರು ಕುಳಿತುಕೊಳ್ಳುವ ನಿರೀಕ್ಷೆಯಿದೆ. ಜೊತೆಗೆ ಜಂಟಿ ಅಧಿವೇಶನಗಳ ಸಮಯದಲ್ಲಿ 1,224 ಸದಸ್ಯರು ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾಡಬಹುದಾದ ಆಯ್ಕೆಯನ್ನು ಹೊಂದಿದೆ. ರಾಜ್ಯಸಭಾ ಚೇಂಬರ್ 384 ಸದಸ್ಯರಿಗೆ ಆಸನ ಸಾಮರ್ಥ್ಯವನ್ನು ಹೊಂದಿರುತ್ತದೆ.

ಇದನ್ನೂ ಓದಿ:ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...