Homeಮುಖಪುಟ29 ಸಾವಿರ ಜನರ ಮಾರಣಹೋಮ: ಗಾಝಾ 'ಸಾವಿನ ಮನೆ'ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

29 ಸಾವಿರ ಜನರ ಮಾರಣಹೋಮ: ಗಾಝಾ ‘ಸಾವಿನ ಮನೆ’ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

“ಗಾಝಾ ಸಾವಿನ ಮನೆಯಾಗಿ ಮಾರ್ಪಟ್ಟಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿವೆ. ಬರೋಬ್ಬರಿ 29,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಕಾಣೆಯಾಗಿದ್ದಾರೆ, ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಘೆಬ್ರೆಯೆಸಸ್ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೆಚ್ಚಳ :

“ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ ಅಪೌಷ್ಠಿಕತೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆ. ಕೆಲ ಪ್ರದೇಶಗಳಲ್ಲಿ ಶೇ.1ಕ್ಕಿಂತ ಕಡಿಮೆ, ಕೆಲ ಪ್ರದೇಶಗಳಲ್ಲಿ ಶೇ.15ಕ್ಕಿಂತ ಹೆಚ್ಚು ಅಪೌಷ್ಠಿಕತೆಯಿದೆ” ಎಂದು ಹೇಳಿದ್ದಾರೆ.

“ಯುದ್ಧ ಮುಂದುವರೆಯಲಿರುವ ಹಿನ್ನೆಲೆ, ಆಹಾರ ಸಾಮಗ್ರಿಗಳ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಇದರಿಂದ ಜನರಿಗೆ ಸರಿಯಾದ ಆಹಾರ ಸಿಗದೆ ಅಪೌಷ್ಠಿಕತೆಯ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಉತ್ತರ ಗಾಝಾ ಪ್ರದೇಶಕ್ಕೆ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ) ಯಂತಹ ಸಂಸ್ಥೆಗಳು ತೆರಳಲು ಸಾಧ್ಯವಾಗುತ್ತಿಲ್ಲ. ಮಾನವೀಯ ಸಿಬ್ಬಂದಿ ಮತ್ತು ಸಹಾಯವನ್ನು ಬಯಸುವವರಿಗೆ ಭದ್ರತೆಯ ಕೊರತೆಯಿಂದಾಗಿ ಡಬ್ಲ್ಯುಎಫ್‌ಪಿ ಅಲ್ಲಿ ತನ್ನ ಸಹಾಯ ವಿತರಣೆಯನ್ನು ಸ್ಥಗಿತಗೊಳಿಸಿದೆ” ಎಂದು ಘೆಬ್ರೆಯೆಸಸ್ ಕಳವಳ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನೆರವಿನ ಮೇಲೆ ದಾಳಿ :

ಯುದ್ಧದಿಂದ ಸಂತ್ರಸ್ತ ಜನರಿಗೆ ಸಹಾಯ ಒದಗಿಸುತ್ತಿರುವ ಸ್ವಯಂ ಸೇವಕರಿಗೆ ದೊಡ್ಡ ಭೀತಿ ಉಂಟಾಗಿದೆ. ನೂರಾರು ಮಾನವೀಯ ನೆರವಿನ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ. ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್ (ಎಂಎಸ್‌ಎಫ್‌) ಶಿಬಿರದ ಮೇಲೆ ಮಂಗಳವಾರ (ಫೆ.20) ರಾತ್ರಿ (ಸ್ಥಳೀಯ ಕಾಲಮಾನ) ಶೆಲ್ ದಾಳಿ ನಡೆದಿದೆ. ಇರಿಂದ ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ವಿಶ್ವಸಂಸ್ಥೆಯ ತುರ್ತು ಪರಿಹಾರ ಯೋಜನೆಯ ಸಂಯೋಜಕ ಮಾರ್ಟಿನ್ ಗ್ರಿಫಿತ್ಸ್, “ಗಾಝಾ ಮೇಲಿನ ದಾಳಿಯಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ. ಅಲ್ಲಿನ ಜನರ ದುಃಖದಲ್ಲಿ ಭಾಗಿಯಾಗಿದ್ದೇನೆ. ಇತರ ನಾಗರಿಕರಂತೆ ಮಾನವೀಯ ನೆರವು ಒದಗಿಸುತ್ತಿರುವ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಬೇಕು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

‘ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ’?

ಮಾನವೀಯತೆಯ ಗಂಭೀರ ಅಪಾಯವನ್ನು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ. ಎಲ್ಲಾ ನಾಗರಿಕರನ್ನು ತುರ್ತಾಗಿ ರಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. “ಜನರಿಗೆ ಆಹಾರ, ನೀರು ಸಿಗುತ್ತಿಲ್ಲ. ಕನಿಷ್ಠ ಪಕ್ಷ ಸ್ವತಂತ್ರವಾಗಿ ಓಡಾಡಲು ಆಗುತ್ತಿಲ್ಲ. ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ?” ಎಂದು ಘೆಬ್ರೆಯೆಸಸ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ಧಾವಿಸುವ ಆರೋಗ್ಯ ಕಾರ್ಯಕರ್ತರು ಬಾಂಬ್ ದಾಳಿಯ ಅಪಾಯದಲ್ಲಿದ್ದಾರೆ. ಔಷಧಗಳ ಕೊರತೆಯಿಂದ ಆಸ್ಪತ್ರೆಗಳು ಮುಚ್ಚಲ್ಪಡುತ್ತಿವೆ. ಹಾಗಾದರೆ, ನಾವು ಯಾವ ಜಗತ್ತಿನಲ್ಲಿದ್ದೇವೆ?” ಎಂದು ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ.

ತಕ್ಷಣದ ಕದನ ವಿರಾಮದ ಘೋಷಿಸಬೇಕು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು, ಬಂದೂಕುಗಳು ಮೌನವಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...