Homeಮುಖಪುಟ29 ಸಾವಿರ ಜನರ ಮಾರಣಹೋಮ: ಗಾಝಾ 'ಸಾವಿನ ಮನೆ'ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

29 ಸಾವಿರ ಜನರ ಮಾರಣಹೋಮ: ಗಾಝಾ ‘ಸಾವಿನ ಮನೆ’ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

“ಗಾಝಾ ಸಾವಿನ ಮನೆಯಾಗಿ ಮಾರ್ಪಟ್ಟಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿವೆ. ಬರೋಬ್ಬರಿ 29,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಕಾಣೆಯಾಗಿದ್ದಾರೆ, ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಘೆಬ್ರೆಯೆಸಸ್ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೆಚ್ಚಳ :

“ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ ಅಪೌಷ್ಠಿಕತೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆ. ಕೆಲ ಪ್ರದೇಶಗಳಲ್ಲಿ ಶೇ.1ಕ್ಕಿಂತ ಕಡಿಮೆ, ಕೆಲ ಪ್ರದೇಶಗಳಲ್ಲಿ ಶೇ.15ಕ್ಕಿಂತ ಹೆಚ್ಚು ಅಪೌಷ್ಠಿಕತೆಯಿದೆ” ಎಂದು ಹೇಳಿದ್ದಾರೆ.

“ಯುದ್ಧ ಮುಂದುವರೆಯಲಿರುವ ಹಿನ್ನೆಲೆ, ಆಹಾರ ಸಾಮಗ್ರಿಗಳ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಇದರಿಂದ ಜನರಿಗೆ ಸರಿಯಾದ ಆಹಾರ ಸಿಗದೆ ಅಪೌಷ್ಠಿಕತೆಯ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಉತ್ತರ ಗಾಝಾ ಪ್ರದೇಶಕ್ಕೆ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ) ಯಂತಹ ಸಂಸ್ಥೆಗಳು ತೆರಳಲು ಸಾಧ್ಯವಾಗುತ್ತಿಲ್ಲ. ಮಾನವೀಯ ಸಿಬ್ಬಂದಿ ಮತ್ತು ಸಹಾಯವನ್ನು ಬಯಸುವವರಿಗೆ ಭದ್ರತೆಯ ಕೊರತೆಯಿಂದಾಗಿ ಡಬ್ಲ್ಯುಎಫ್‌ಪಿ ಅಲ್ಲಿ ತನ್ನ ಸಹಾಯ ವಿತರಣೆಯನ್ನು ಸ್ಥಗಿತಗೊಳಿಸಿದೆ” ಎಂದು ಘೆಬ್ರೆಯೆಸಸ್ ಕಳವಳ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನೆರವಿನ ಮೇಲೆ ದಾಳಿ :

ಯುದ್ಧದಿಂದ ಸಂತ್ರಸ್ತ ಜನರಿಗೆ ಸಹಾಯ ಒದಗಿಸುತ್ತಿರುವ ಸ್ವಯಂ ಸೇವಕರಿಗೆ ದೊಡ್ಡ ಭೀತಿ ಉಂಟಾಗಿದೆ. ನೂರಾರು ಮಾನವೀಯ ನೆರವಿನ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ. ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್ (ಎಂಎಸ್‌ಎಫ್‌) ಶಿಬಿರದ ಮೇಲೆ ಮಂಗಳವಾರ (ಫೆ.20) ರಾತ್ರಿ (ಸ್ಥಳೀಯ ಕಾಲಮಾನ) ಶೆಲ್ ದಾಳಿ ನಡೆದಿದೆ. ಇರಿಂದ ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ವಿಶ್ವಸಂಸ್ಥೆಯ ತುರ್ತು ಪರಿಹಾರ ಯೋಜನೆಯ ಸಂಯೋಜಕ ಮಾರ್ಟಿನ್ ಗ್ರಿಫಿತ್ಸ್, “ಗಾಝಾ ಮೇಲಿನ ದಾಳಿಯಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ. ಅಲ್ಲಿನ ಜನರ ದುಃಖದಲ್ಲಿ ಭಾಗಿಯಾಗಿದ್ದೇನೆ. ಇತರ ನಾಗರಿಕರಂತೆ ಮಾನವೀಯ ನೆರವು ಒದಗಿಸುತ್ತಿರುವ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಬೇಕು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

‘ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ’?

ಮಾನವೀಯತೆಯ ಗಂಭೀರ ಅಪಾಯವನ್ನು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ. ಎಲ್ಲಾ ನಾಗರಿಕರನ್ನು ತುರ್ತಾಗಿ ರಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. “ಜನರಿಗೆ ಆಹಾರ, ನೀರು ಸಿಗುತ್ತಿಲ್ಲ. ಕನಿಷ್ಠ ಪಕ್ಷ ಸ್ವತಂತ್ರವಾಗಿ ಓಡಾಡಲು ಆಗುತ್ತಿಲ್ಲ. ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ?” ಎಂದು ಘೆಬ್ರೆಯೆಸಸ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ಧಾವಿಸುವ ಆರೋಗ್ಯ ಕಾರ್ಯಕರ್ತರು ಬಾಂಬ್ ದಾಳಿಯ ಅಪಾಯದಲ್ಲಿದ್ದಾರೆ. ಔಷಧಗಳ ಕೊರತೆಯಿಂದ ಆಸ್ಪತ್ರೆಗಳು ಮುಚ್ಚಲ್ಪಡುತ್ತಿವೆ. ಹಾಗಾದರೆ, ನಾವು ಯಾವ ಜಗತ್ತಿನಲ್ಲಿದ್ದೇವೆ?” ಎಂದು ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ.

ತಕ್ಷಣದ ಕದನ ವಿರಾಮದ ಘೋಷಿಸಬೇಕು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು, ಬಂದೂಕುಗಳು ಮೌನವಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...