Homeಮುಖಪುಟ29 ಸಾವಿರ ಜನರ ಮಾರಣಹೋಮ: ಗಾಝಾ 'ಸಾವಿನ ಮನೆ'ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

29 ಸಾವಿರ ಜನರ ಮಾರಣಹೋಮ: ಗಾಝಾ ‘ಸಾವಿನ ಮನೆ’ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

“ಗಾಝಾ ಸಾವಿನ ಮನೆಯಾಗಿ ಮಾರ್ಪಟ್ಟಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿವೆ. ಬರೋಬ್ಬರಿ 29,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಕಾಣೆಯಾಗಿದ್ದಾರೆ, ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಘೆಬ್ರೆಯೆಸಸ್ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೆಚ್ಚಳ :

“ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ ಅಪೌಷ್ಠಿಕತೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆ. ಕೆಲ ಪ್ರದೇಶಗಳಲ್ಲಿ ಶೇ.1ಕ್ಕಿಂತ ಕಡಿಮೆ, ಕೆಲ ಪ್ರದೇಶಗಳಲ್ಲಿ ಶೇ.15ಕ್ಕಿಂತ ಹೆಚ್ಚು ಅಪೌಷ್ಠಿಕತೆಯಿದೆ” ಎಂದು ಹೇಳಿದ್ದಾರೆ.

“ಯುದ್ಧ ಮುಂದುವರೆಯಲಿರುವ ಹಿನ್ನೆಲೆ, ಆಹಾರ ಸಾಮಗ್ರಿಗಳ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಇದರಿಂದ ಜನರಿಗೆ ಸರಿಯಾದ ಆಹಾರ ಸಿಗದೆ ಅಪೌಷ್ಠಿಕತೆಯ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಉತ್ತರ ಗಾಝಾ ಪ್ರದೇಶಕ್ಕೆ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ) ಯಂತಹ ಸಂಸ್ಥೆಗಳು ತೆರಳಲು ಸಾಧ್ಯವಾಗುತ್ತಿಲ್ಲ. ಮಾನವೀಯ ಸಿಬ್ಬಂದಿ ಮತ್ತು ಸಹಾಯವನ್ನು ಬಯಸುವವರಿಗೆ ಭದ್ರತೆಯ ಕೊರತೆಯಿಂದಾಗಿ ಡಬ್ಲ್ಯುಎಫ್‌ಪಿ ಅಲ್ಲಿ ತನ್ನ ಸಹಾಯ ವಿತರಣೆಯನ್ನು ಸ್ಥಗಿತಗೊಳಿಸಿದೆ” ಎಂದು ಘೆಬ್ರೆಯೆಸಸ್ ಕಳವಳ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನೆರವಿನ ಮೇಲೆ ದಾಳಿ :

ಯುದ್ಧದಿಂದ ಸಂತ್ರಸ್ತ ಜನರಿಗೆ ಸಹಾಯ ಒದಗಿಸುತ್ತಿರುವ ಸ್ವಯಂ ಸೇವಕರಿಗೆ ದೊಡ್ಡ ಭೀತಿ ಉಂಟಾಗಿದೆ. ನೂರಾರು ಮಾನವೀಯ ನೆರವಿನ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ. ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್ (ಎಂಎಸ್‌ಎಫ್‌) ಶಿಬಿರದ ಮೇಲೆ ಮಂಗಳವಾರ (ಫೆ.20) ರಾತ್ರಿ (ಸ್ಥಳೀಯ ಕಾಲಮಾನ) ಶೆಲ್ ದಾಳಿ ನಡೆದಿದೆ. ಇರಿಂದ ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ವಿಶ್ವಸಂಸ್ಥೆಯ ತುರ್ತು ಪರಿಹಾರ ಯೋಜನೆಯ ಸಂಯೋಜಕ ಮಾರ್ಟಿನ್ ಗ್ರಿಫಿತ್ಸ್, “ಗಾಝಾ ಮೇಲಿನ ದಾಳಿಯಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ. ಅಲ್ಲಿನ ಜನರ ದುಃಖದಲ್ಲಿ ಭಾಗಿಯಾಗಿದ್ದೇನೆ. ಇತರ ನಾಗರಿಕರಂತೆ ಮಾನವೀಯ ನೆರವು ಒದಗಿಸುತ್ತಿರುವ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಬೇಕು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

‘ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ’?

ಮಾನವೀಯತೆಯ ಗಂಭೀರ ಅಪಾಯವನ್ನು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ. ಎಲ್ಲಾ ನಾಗರಿಕರನ್ನು ತುರ್ತಾಗಿ ರಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. “ಜನರಿಗೆ ಆಹಾರ, ನೀರು ಸಿಗುತ್ತಿಲ್ಲ. ಕನಿಷ್ಠ ಪಕ್ಷ ಸ್ವತಂತ್ರವಾಗಿ ಓಡಾಡಲು ಆಗುತ್ತಿಲ್ಲ. ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ?” ಎಂದು ಘೆಬ್ರೆಯೆಸಸ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ಧಾವಿಸುವ ಆರೋಗ್ಯ ಕಾರ್ಯಕರ್ತರು ಬಾಂಬ್ ದಾಳಿಯ ಅಪಾಯದಲ್ಲಿದ್ದಾರೆ. ಔಷಧಗಳ ಕೊರತೆಯಿಂದ ಆಸ್ಪತ್ರೆಗಳು ಮುಚ್ಚಲ್ಪಡುತ್ತಿವೆ. ಹಾಗಾದರೆ, ನಾವು ಯಾವ ಜಗತ್ತಿನಲ್ಲಿದ್ದೇವೆ?” ಎಂದು ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ.

ತಕ್ಷಣದ ಕದನ ವಿರಾಮದ ಘೋಷಿಸಬೇಕು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು, ಬಂದೂಕುಗಳು ಮೌನವಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...