Homeಕರ್ನಾಟಕವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ಬಲಪಂಥೀಯ ಸನಾತನ ಸಂಸ್ಥೆ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಕೊಲೆಯ ಪ್ರಧಾನ ಆರೋಪಿಗಳಾಗಿದ್ದಾರೆ

- Advertisement -
- Advertisement -

ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಯ ಎರಡನೇ ಸ್ವತಂತ್ರ ಸಾಕ್ಷಿಯು 2015 ರಲ್ಲಿ ಧಾರವಾಡದ ಅವರ ಮನೆಯ ಹೊರಗೆ ಅವರ ಮೇಲೆ ಗುಮಟು ಹಾರಿಸಿದ ವ್ಯಕ್ತಿಯನ್ನು ಗುರುತಿಸಿದ್ದಾರೆ. ಕಲ್ಬುರ್ಗಿ ಅವರ ಮನೆಯ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕ್ಷಿಯು, ಹುಬ್ಬಳ್ಳಿಯ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಗಣೇಶ್ ಮಿಸ್ಕಿನ್ (29) ಎಂಬಾತನೆ ಈ ಶೂಟರ್ ಎಂದು ಗುರುತಿಸಿದ್ದಾರೆ.

ಬಲಪಂಥೀಯ ಸನಾತನ ಸಂಸ್ಥೆಯ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕ ಅಮೋಲ್ ಕಾಳೆ (39) ಎಂಬಾತ ಕಲಬುರ್ಗಿ ಅವರ ಮನೆಯ ಸುತ್ತಲೂ ಓಡಾಡುತ್ತಿದ್ದ ಎಂದು ಕೂಡಾ ಸಾಕ್ಷಿ ಹೇಳಿದ್ದಾರೆ. ಕಲಬುರ್ಗಿ ಅವರ ಕೊಲೆಗೆ ಅಮೋಲ್ ಕಾಳೆ ಸಂಚು ರೂಪಿಸಿದ್ದನು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಎರಡನೇ ಸ್ವತಂತ್ರ ಸಾಕ್ಷಿ ಇಬ್ಬರನ್ನೂ ಗುರುತಿಸಿದ್ದಾರೆ.

ಕಲ್ಬುರ್ಗಿ ಅವರ ಮನೆಯ ಎದುರು ಅಂಗಡಿಯನ್ನು ಹೊಂದಿದ್ದ ಇನ್ನೊಬ್ಬ ಸ್ವತಂತ್ರ ಸಾಕ್ಷಿ ಆಗಸ್ಟ್ 30, 2015 ರಂದು ಶೂಟರ್ ಅನ್ನು ಕಲಬುರ್ಗಿ ಅವರ ಮನೆಗೆ ಕರೆತಂದ ಬೈಕ್‌ ಸವಾರನನ್ನು ಗುರುತಿಸಿದ್ದರು. ಈ ಸವಾರನನ್ನು ಬೆಳಗಾವಿಯ ಹಿಂದುತ್ವ ದುಷ್ಕರ್ಮಿ ಪ್ರವೀಣ್‌ ಚತುರ್‌ (29) ಎಂದು ಗುರುತಿಸಲಾಗಿದ್ದು, ಈತ ಕಲಬುರ್ಗಿ ಅವರ ಕೊಲೆಯ ನಂತರ ಶೂಟರ್‌‌ನೊಂದಿಗೆ ತಪ್ಪಿಸಿಕೊಳ್ಳಲು ಹೊರಗೆ ಕಾಯುತ್ತಿದ್ದನು.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಕಲ್ಬುರ್ಗಿ ಅವರ ಹತ್ಯೆಯ ದಿನ ಅವರ ಪುತ್ರಿ ರೂಪದರ್ಶಿ ಕೆ ಮನೆಯಲ್ಲಿ ಇದ್ದರು. ಅವರು ಕೋರ್ಟ್‌ನಲ್ಲಿ ಗಣೇಶ್ ಮಿಸ್ಕಿನ್‌ನನ್ನು ಗುರುತಿಸಿದ್ದರು. ಮನೆಯ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ ಚತುರ್‌‌ನನ್ನು ಕೂಡಾ ಅವರು ಗುರುತಿಸಿದ್ದರು. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕೂಡ ಮಾರ್ಚ್‌ನಲ್ಲಿ ಮಿಸ್ಕಿನ್‌ನನ್ನು ಗುರುತಿಸಿದ್ದರು.

ಮಿಸ್ಕಿನ್, ಚತುರ್ ಮತ್ತು ಕಾಳೆ ಅವರನ್ನು ಗುರುತಿಸಿರುವ ನಾಲ್ವರು ಸಾಕ್ಷಿಗಳು ಈ ಹಿಂದೆ ಪ್ರಕರಣದ ತನಿಖಾ ಹಂತದಲ್ಲಿ ನಡೆಸಿದ ಪರೀಕ್ಷಾ ಗುರುತಿನ ಪರೇಡ್‌ಗಳಲ್ಲಿ ಕೂಡಾ ಅವರನ್ನು ಗುರುತಿಸಿದ್ದರು. ಸಾಕ್ಷಿದಾರರು ಗುರುವಾರ ನ್ಯಾಯಾಲಯದಲ್ಲಿ ನೀಡಿರುವ ಮುಖ್ಯ ಹೇಳಿಕೆಯನ್ನು ಅನುಸರಿಸಿ ಎರಡನೇ ಸ್ವತಂತ್ರ ಸಾಕ್ಷಿಯನ್ನು ಮುಂದಿನ ತಿಂಗಳು ಪ್ರತಿವಾದಿ ವಕೀಲರು ಕ್ರಾಸ್ ಎಗ್ಸಾಮಿನ್‌ ಮಾಡಲಿದ್ದಾರೆ.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಕೂಡಾ ಗಣೇಶ್‌‌ ಮಿಸ್ಕಿನ್ ಮತ್ತು ಕಾಳೆ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಕಾಳೆ, ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಶ್ರೀರಾಮ ಸೇನೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದುಸ್ಥಾನದಂತಹ ಹಿಂದುತ್ವ ಸಂಘಟನೆಗಳಿಂದ ಉಗ್ರಗಾಮಿ ಮನಸ್ಥಿತಿ ಹೊಂದಿರುವ ಯುವಕರನ್ನು ಸೇರಿಸಿಕೊಳ್ಳುವ ಮೂಲಕ ಬಲಪಂಥೀಯ ಉಗ್ರಗಾಮಿ ಗುಂಪಿನ ಪ್ರಮುಖ ನಾಯಕರಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...