Homeಕರ್ನಾಟಕವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ಬಲಪಂಥೀಯ ಸನಾತನ ಸಂಸ್ಥೆ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಕೊಲೆಯ ಪ್ರಧಾನ ಆರೋಪಿಗಳಾಗಿದ್ದಾರೆ

- Advertisement -
- Advertisement -

ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಯ ಎರಡನೇ ಸ್ವತಂತ್ರ ಸಾಕ್ಷಿಯು 2015 ರಲ್ಲಿ ಧಾರವಾಡದ ಅವರ ಮನೆಯ ಹೊರಗೆ ಅವರ ಮೇಲೆ ಗುಮಟು ಹಾರಿಸಿದ ವ್ಯಕ್ತಿಯನ್ನು ಗುರುತಿಸಿದ್ದಾರೆ. ಕಲ್ಬುರ್ಗಿ ಅವರ ಮನೆಯ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕ್ಷಿಯು, ಹುಬ್ಬಳ್ಳಿಯ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಗಣೇಶ್ ಮಿಸ್ಕಿನ್ (29) ಎಂಬಾತನೆ ಈ ಶೂಟರ್ ಎಂದು ಗುರುತಿಸಿದ್ದಾರೆ.

ಬಲಪಂಥೀಯ ಸನಾತನ ಸಂಸ್ಥೆಯ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕ ಅಮೋಲ್ ಕಾಳೆ (39) ಎಂಬಾತ ಕಲಬುರ್ಗಿ ಅವರ ಮನೆಯ ಸುತ್ತಲೂ ಓಡಾಡುತ್ತಿದ್ದ ಎಂದು ಕೂಡಾ ಸಾಕ್ಷಿ ಹೇಳಿದ್ದಾರೆ. ಕಲಬುರ್ಗಿ ಅವರ ಕೊಲೆಗೆ ಅಮೋಲ್ ಕಾಳೆ ಸಂಚು ರೂಪಿಸಿದ್ದನು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಎರಡನೇ ಸ್ವತಂತ್ರ ಸಾಕ್ಷಿ ಇಬ್ಬರನ್ನೂ ಗುರುತಿಸಿದ್ದಾರೆ.

ಕಲ್ಬುರ್ಗಿ ಅವರ ಮನೆಯ ಎದುರು ಅಂಗಡಿಯನ್ನು ಹೊಂದಿದ್ದ ಇನ್ನೊಬ್ಬ ಸ್ವತಂತ್ರ ಸಾಕ್ಷಿ ಆಗಸ್ಟ್ 30, 2015 ರಂದು ಶೂಟರ್ ಅನ್ನು ಕಲಬುರ್ಗಿ ಅವರ ಮನೆಗೆ ಕರೆತಂದ ಬೈಕ್‌ ಸವಾರನನ್ನು ಗುರುತಿಸಿದ್ದರು. ಈ ಸವಾರನನ್ನು ಬೆಳಗಾವಿಯ ಹಿಂದುತ್ವ ದುಷ್ಕರ್ಮಿ ಪ್ರವೀಣ್‌ ಚತುರ್‌ (29) ಎಂದು ಗುರುತಿಸಲಾಗಿದ್ದು, ಈತ ಕಲಬುರ್ಗಿ ಅವರ ಕೊಲೆಯ ನಂತರ ಶೂಟರ್‌‌ನೊಂದಿಗೆ ತಪ್ಪಿಸಿಕೊಳ್ಳಲು ಹೊರಗೆ ಕಾಯುತ್ತಿದ್ದನು.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಕಲ್ಬುರ್ಗಿ ಅವರ ಹತ್ಯೆಯ ದಿನ ಅವರ ಪುತ್ರಿ ರೂಪದರ್ಶಿ ಕೆ ಮನೆಯಲ್ಲಿ ಇದ್ದರು. ಅವರು ಕೋರ್ಟ್‌ನಲ್ಲಿ ಗಣೇಶ್ ಮಿಸ್ಕಿನ್‌ನನ್ನು ಗುರುತಿಸಿದ್ದರು. ಮನೆಯ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ ಚತುರ್‌‌ನನ್ನು ಕೂಡಾ ಅವರು ಗುರುತಿಸಿದ್ದರು. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕೂಡ ಮಾರ್ಚ್‌ನಲ್ಲಿ ಮಿಸ್ಕಿನ್‌ನನ್ನು ಗುರುತಿಸಿದ್ದರು.

ಮಿಸ್ಕಿನ್, ಚತುರ್ ಮತ್ತು ಕಾಳೆ ಅವರನ್ನು ಗುರುತಿಸಿರುವ ನಾಲ್ವರು ಸಾಕ್ಷಿಗಳು ಈ ಹಿಂದೆ ಪ್ರಕರಣದ ತನಿಖಾ ಹಂತದಲ್ಲಿ ನಡೆಸಿದ ಪರೀಕ್ಷಾ ಗುರುತಿನ ಪರೇಡ್‌ಗಳಲ್ಲಿ ಕೂಡಾ ಅವರನ್ನು ಗುರುತಿಸಿದ್ದರು. ಸಾಕ್ಷಿದಾರರು ಗುರುವಾರ ನ್ಯಾಯಾಲಯದಲ್ಲಿ ನೀಡಿರುವ ಮುಖ್ಯ ಹೇಳಿಕೆಯನ್ನು ಅನುಸರಿಸಿ ಎರಡನೇ ಸ್ವತಂತ್ರ ಸಾಕ್ಷಿಯನ್ನು ಮುಂದಿನ ತಿಂಗಳು ಪ್ರತಿವಾದಿ ವಕೀಲರು ಕ್ರಾಸ್ ಎಗ್ಸಾಮಿನ್‌ ಮಾಡಲಿದ್ದಾರೆ.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಕೂಡಾ ಗಣೇಶ್‌‌ ಮಿಸ್ಕಿನ್ ಮತ್ತು ಕಾಳೆ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಕಾಳೆ, ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಶ್ರೀರಾಮ ಸೇನೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದುಸ್ಥಾನದಂತಹ ಹಿಂದುತ್ವ ಸಂಘಟನೆಗಳಿಂದ ಉಗ್ರಗಾಮಿ ಮನಸ್ಥಿತಿ ಹೊಂದಿರುವ ಯುವಕರನ್ನು ಸೇರಿಸಿಕೊಳ್ಳುವ ಮೂಲಕ ಬಲಪಂಥೀಯ ಉಗ್ರಗಾಮಿ ಗುಂಪಿನ ಪ್ರಮುಖ ನಾಯಕರಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...