Homeಕರ್ನಾಟಕವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ಬಲಪಂಥೀಯ ಸನಾತನ ಸಂಸ್ಥೆ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಕೊಲೆಯ ಪ್ರಧಾನ ಆರೋಪಿಗಳಾಗಿದ್ದಾರೆ

- Advertisement -
- Advertisement -

ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಯ ಎರಡನೇ ಸ್ವತಂತ್ರ ಸಾಕ್ಷಿಯು 2015 ರಲ್ಲಿ ಧಾರವಾಡದ ಅವರ ಮನೆಯ ಹೊರಗೆ ಅವರ ಮೇಲೆ ಗುಮಟು ಹಾರಿಸಿದ ವ್ಯಕ್ತಿಯನ್ನು ಗುರುತಿಸಿದ್ದಾರೆ. ಕಲ್ಬುರ್ಗಿ ಅವರ ಮನೆಯ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕ್ಷಿಯು, ಹುಬ್ಬಳ್ಳಿಯ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಗಣೇಶ್ ಮಿಸ್ಕಿನ್ (29) ಎಂಬಾತನೆ ಈ ಶೂಟರ್ ಎಂದು ಗುರುತಿಸಿದ್ದಾರೆ.

ಬಲಪಂಥೀಯ ಸನಾತನ ಸಂಸ್ಥೆಯ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕ ಅಮೋಲ್ ಕಾಳೆ (39) ಎಂಬಾತ ಕಲಬುರ್ಗಿ ಅವರ ಮನೆಯ ಸುತ್ತಲೂ ಓಡಾಡುತ್ತಿದ್ದ ಎಂದು ಕೂಡಾ ಸಾಕ್ಷಿ ಹೇಳಿದ್ದಾರೆ. ಕಲಬುರ್ಗಿ ಅವರ ಕೊಲೆಗೆ ಅಮೋಲ್ ಕಾಳೆ ಸಂಚು ರೂಪಿಸಿದ್ದನು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಎರಡನೇ ಸ್ವತಂತ್ರ ಸಾಕ್ಷಿ ಇಬ್ಬರನ್ನೂ ಗುರುತಿಸಿದ್ದಾರೆ.

ಕಲ್ಬುರ್ಗಿ ಅವರ ಮನೆಯ ಎದುರು ಅಂಗಡಿಯನ್ನು ಹೊಂದಿದ್ದ ಇನ್ನೊಬ್ಬ ಸ್ವತಂತ್ರ ಸಾಕ್ಷಿ ಆಗಸ್ಟ್ 30, 2015 ರಂದು ಶೂಟರ್ ಅನ್ನು ಕಲಬುರ್ಗಿ ಅವರ ಮನೆಗೆ ಕರೆತಂದ ಬೈಕ್‌ ಸವಾರನನ್ನು ಗುರುತಿಸಿದ್ದರು. ಈ ಸವಾರನನ್ನು ಬೆಳಗಾವಿಯ ಹಿಂದುತ್ವ ದುಷ್ಕರ್ಮಿ ಪ್ರವೀಣ್‌ ಚತುರ್‌ (29) ಎಂದು ಗುರುತಿಸಲಾಗಿದ್ದು, ಈತ ಕಲಬುರ್ಗಿ ಅವರ ಕೊಲೆಯ ನಂತರ ಶೂಟರ್‌‌ನೊಂದಿಗೆ ತಪ್ಪಿಸಿಕೊಳ್ಳಲು ಹೊರಗೆ ಕಾಯುತ್ತಿದ್ದನು.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಕಲ್ಬುರ್ಗಿ ಅವರ ಹತ್ಯೆಯ ದಿನ ಅವರ ಪುತ್ರಿ ರೂಪದರ್ಶಿ ಕೆ ಮನೆಯಲ್ಲಿ ಇದ್ದರು. ಅವರು ಕೋರ್ಟ್‌ನಲ್ಲಿ ಗಣೇಶ್ ಮಿಸ್ಕಿನ್‌ನನ್ನು ಗುರುತಿಸಿದ್ದರು. ಮನೆಯ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ ಚತುರ್‌‌ನನ್ನು ಕೂಡಾ ಅವರು ಗುರುತಿಸಿದ್ದರು. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕೂಡ ಮಾರ್ಚ್‌ನಲ್ಲಿ ಮಿಸ್ಕಿನ್‌ನನ್ನು ಗುರುತಿಸಿದ್ದರು.

ಮಿಸ್ಕಿನ್, ಚತುರ್ ಮತ್ತು ಕಾಳೆ ಅವರನ್ನು ಗುರುತಿಸಿರುವ ನಾಲ್ವರು ಸಾಕ್ಷಿಗಳು ಈ ಹಿಂದೆ ಪ್ರಕರಣದ ತನಿಖಾ ಹಂತದಲ್ಲಿ ನಡೆಸಿದ ಪರೀಕ್ಷಾ ಗುರುತಿನ ಪರೇಡ್‌ಗಳಲ್ಲಿ ಕೂಡಾ ಅವರನ್ನು ಗುರುತಿಸಿದ್ದರು. ಸಾಕ್ಷಿದಾರರು ಗುರುವಾರ ನ್ಯಾಯಾಲಯದಲ್ಲಿ ನೀಡಿರುವ ಮುಖ್ಯ ಹೇಳಿಕೆಯನ್ನು ಅನುಸರಿಸಿ ಎರಡನೇ ಸ್ವತಂತ್ರ ಸಾಕ್ಷಿಯನ್ನು ಮುಂದಿನ ತಿಂಗಳು ಪ್ರತಿವಾದಿ ವಕೀಲರು ಕ್ರಾಸ್ ಎಗ್ಸಾಮಿನ್‌ ಮಾಡಲಿದ್ದಾರೆ.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಕೂಡಾ ಗಣೇಶ್‌‌ ಮಿಸ್ಕಿನ್ ಮತ್ತು ಕಾಳೆ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಕಾಳೆ, ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಶ್ರೀರಾಮ ಸೇನೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದುಸ್ಥಾನದಂತಹ ಹಿಂದುತ್ವ ಸಂಘಟನೆಗಳಿಂದ ಉಗ್ರಗಾಮಿ ಮನಸ್ಥಿತಿ ಹೊಂದಿರುವ ಯುವಕರನ್ನು ಸೇರಿಸಿಕೊಳ್ಳುವ ಮೂಲಕ ಬಲಪಂಥೀಯ ಉಗ್ರಗಾಮಿ ಗುಂಪಿನ ಪ್ರಮುಖ ನಾಯಕರಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...