Homeಕರ್ನಾಟಕವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ಬಲಪಂಥೀಯ ಸನಾತನ ಸಂಸ್ಥೆ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಕೊಲೆಯ ಪ್ರಧಾನ ಆರೋಪಿಗಳಾಗಿದ್ದಾರೆ

- Advertisement -
- Advertisement -

ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಯ ಎರಡನೇ ಸ್ವತಂತ್ರ ಸಾಕ್ಷಿಯು 2015 ರಲ್ಲಿ ಧಾರವಾಡದ ಅವರ ಮನೆಯ ಹೊರಗೆ ಅವರ ಮೇಲೆ ಗುಮಟು ಹಾರಿಸಿದ ವ್ಯಕ್ತಿಯನ್ನು ಗುರುತಿಸಿದ್ದಾರೆ. ಕಲ್ಬುರ್ಗಿ ಅವರ ಮನೆಯ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕ್ಷಿಯು, ಹುಬ್ಬಳ್ಳಿಯ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಗಣೇಶ್ ಮಿಸ್ಕಿನ್ (29) ಎಂಬಾತನೆ ಈ ಶೂಟರ್ ಎಂದು ಗುರುತಿಸಿದ್ದಾರೆ.

ಬಲಪಂಥೀಯ ಸನಾತನ ಸಂಸ್ಥೆಯ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕ ಅಮೋಲ್ ಕಾಳೆ (39) ಎಂಬಾತ ಕಲಬುರ್ಗಿ ಅವರ ಮನೆಯ ಸುತ್ತಲೂ ಓಡಾಡುತ್ತಿದ್ದ ಎಂದು ಕೂಡಾ ಸಾಕ್ಷಿ ಹೇಳಿದ್ದಾರೆ. ಕಲಬುರ್ಗಿ ಅವರ ಕೊಲೆಗೆ ಅಮೋಲ್ ಕಾಳೆ ಸಂಚು ರೂಪಿಸಿದ್ದನು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಎರಡನೇ ಸ್ವತಂತ್ರ ಸಾಕ್ಷಿ ಇಬ್ಬರನ್ನೂ ಗುರುತಿಸಿದ್ದಾರೆ.

ಕಲ್ಬುರ್ಗಿ ಅವರ ಮನೆಯ ಎದುರು ಅಂಗಡಿಯನ್ನು ಹೊಂದಿದ್ದ ಇನ್ನೊಬ್ಬ ಸ್ವತಂತ್ರ ಸಾಕ್ಷಿ ಆಗಸ್ಟ್ 30, 2015 ರಂದು ಶೂಟರ್ ಅನ್ನು ಕಲಬುರ್ಗಿ ಅವರ ಮನೆಗೆ ಕರೆತಂದ ಬೈಕ್‌ ಸವಾರನನ್ನು ಗುರುತಿಸಿದ್ದರು. ಈ ಸವಾರನನ್ನು ಬೆಳಗಾವಿಯ ಹಿಂದುತ್ವ ದುಷ್ಕರ್ಮಿ ಪ್ರವೀಣ್‌ ಚತುರ್‌ (29) ಎಂದು ಗುರುತಿಸಲಾಗಿದ್ದು, ಈತ ಕಲಬುರ್ಗಿ ಅವರ ಕೊಲೆಯ ನಂತರ ಶೂಟರ್‌‌ನೊಂದಿಗೆ ತಪ್ಪಿಸಿಕೊಳ್ಳಲು ಹೊರಗೆ ಕಾಯುತ್ತಿದ್ದನು.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಕಲ್ಬುರ್ಗಿ ಅವರ ಹತ್ಯೆಯ ದಿನ ಅವರ ಪುತ್ರಿ ರೂಪದರ್ಶಿ ಕೆ ಮನೆಯಲ್ಲಿ ಇದ್ದರು. ಅವರು ಕೋರ್ಟ್‌ನಲ್ಲಿ ಗಣೇಶ್ ಮಿಸ್ಕಿನ್‌ನನ್ನು ಗುರುತಿಸಿದ್ದರು. ಮನೆಯ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ ಚತುರ್‌‌ನನ್ನು ಕೂಡಾ ಅವರು ಗುರುತಿಸಿದ್ದರು. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕೂಡ ಮಾರ್ಚ್‌ನಲ್ಲಿ ಮಿಸ್ಕಿನ್‌ನನ್ನು ಗುರುತಿಸಿದ್ದರು.

ಮಿಸ್ಕಿನ್, ಚತುರ್ ಮತ್ತು ಕಾಳೆ ಅವರನ್ನು ಗುರುತಿಸಿರುವ ನಾಲ್ವರು ಸಾಕ್ಷಿಗಳು ಈ ಹಿಂದೆ ಪ್ರಕರಣದ ತನಿಖಾ ಹಂತದಲ್ಲಿ ನಡೆಸಿದ ಪರೀಕ್ಷಾ ಗುರುತಿನ ಪರೇಡ್‌ಗಳಲ್ಲಿ ಕೂಡಾ ಅವರನ್ನು ಗುರುತಿಸಿದ್ದರು. ಸಾಕ್ಷಿದಾರರು ಗುರುವಾರ ನ್ಯಾಯಾಲಯದಲ್ಲಿ ನೀಡಿರುವ ಮುಖ್ಯ ಹೇಳಿಕೆಯನ್ನು ಅನುಸರಿಸಿ ಎರಡನೇ ಸ್ವತಂತ್ರ ಸಾಕ್ಷಿಯನ್ನು ಮುಂದಿನ ತಿಂಗಳು ಪ್ರತಿವಾದಿ ವಕೀಲರು ಕ್ರಾಸ್ ಎಗ್ಸಾಮಿನ್‌ ಮಾಡಲಿದ್ದಾರೆ.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಕೂಡಾ ಗಣೇಶ್‌‌ ಮಿಸ್ಕಿನ್ ಮತ್ತು ಕಾಳೆ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಕಾಳೆ, ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಶ್ರೀರಾಮ ಸೇನೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದುಸ್ಥಾನದಂತಹ ಹಿಂದುತ್ವ ಸಂಘಟನೆಗಳಿಂದ ಉಗ್ರಗಾಮಿ ಮನಸ್ಥಿತಿ ಹೊಂದಿರುವ ಯುವಕರನ್ನು ಸೇರಿಸಿಕೊಳ್ಳುವ ಮೂಲಕ ಬಲಪಂಥೀಯ ಉಗ್ರಗಾಮಿ ಗುಂಪಿನ ಪ್ರಮುಖ ನಾಯಕರಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...