Homeಕರ್ನಾಟಕವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರ ಶೂಟರ್ ಅನ್ನು ಗುರುತಿಸಿದ 2ನೇ ಸಾಕ್ಷಿ

ಬಲಪಂಥೀಯ ಸನಾತನ ಸಂಸ್ಥೆ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಕೊಲೆಯ ಪ್ರಧಾನ ಆರೋಪಿಗಳಾಗಿದ್ದಾರೆ

- Advertisement -
- Advertisement -

ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಯ ಎರಡನೇ ಸ್ವತಂತ್ರ ಸಾಕ್ಷಿಯು 2015 ರಲ್ಲಿ ಧಾರವಾಡದ ಅವರ ಮನೆಯ ಹೊರಗೆ ಅವರ ಮೇಲೆ ಗುಮಟು ಹಾರಿಸಿದ ವ್ಯಕ್ತಿಯನ್ನು ಗುರುತಿಸಿದ್ದಾರೆ. ಕಲ್ಬುರ್ಗಿ ಅವರ ಮನೆಯ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಕ್ಷಿಯು, ಹುಬ್ಬಳ್ಳಿಯ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಗಣೇಶ್ ಮಿಸ್ಕಿನ್ (29) ಎಂಬಾತನೆ ಈ ಶೂಟರ್ ಎಂದು ಗುರುತಿಸಿದ್ದಾರೆ.

ಬಲಪಂಥೀಯ ಸನಾತನ ಸಂಸ್ಥೆಯ ಸಂಯೋಜಿತ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕ ಅಮೋಲ್ ಕಾಳೆ (39) ಎಂಬಾತ ಕಲಬುರ್ಗಿ ಅವರ ಮನೆಯ ಸುತ್ತಲೂ ಓಡಾಡುತ್ತಿದ್ದ ಎಂದು ಕೂಡಾ ಸಾಕ್ಷಿ ಹೇಳಿದ್ದಾರೆ. ಕಲಬುರ್ಗಿ ಅವರ ಕೊಲೆಗೆ ಅಮೋಲ್ ಕಾಳೆ ಸಂಚು ರೂಪಿಸಿದ್ದನು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಎರಡನೇ ಸ್ವತಂತ್ರ ಸಾಕ್ಷಿ ಇಬ್ಬರನ್ನೂ ಗುರುತಿಸಿದ್ದಾರೆ.

ಕಲ್ಬುರ್ಗಿ ಅವರ ಮನೆಯ ಎದುರು ಅಂಗಡಿಯನ್ನು ಹೊಂದಿದ್ದ ಇನ್ನೊಬ್ಬ ಸ್ವತಂತ್ರ ಸಾಕ್ಷಿ ಆಗಸ್ಟ್ 30, 2015 ರಂದು ಶೂಟರ್ ಅನ್ನು ಕಲಬುರ್ಗಿ ಅವರ ಮನೆಗೆ ಕರೆತಂದ ಬೈಕ್‌ ಸವಾರನನ್ನು ಗುರುತಿಸಿದ್ದರು. ಈ ಸವಾರನನ್ನು ಬೆಳಗಾವಿಯ ಹಿಂದುತ್ವ ದುಷ್ಕರ್ಮಿ ಪ್ರವೀಣ್‌ ಚತುರ್‌ (29) ಎಂದು ಗುರುತಿಸಲಾಗಿದ್ದು, ಈತ ಕಲಬುರ್ಗಿ ಅವರ ಕೊಲೆಯ ನಂತರ ಶೂಟರ್‌‌ನೊಂದಿಗೆ ತಪ್ಪಿಸಿಕೊಳ್ಳಲು ಹೊರಗೆ ಕಾಯುತ್ತಿದ್ದನು.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಕಲ್ಬುರ್ಗಿ ಅವರ ಹತ್ಯೆಯ ದಿನ ಅವರ ಪುತ್ರಿ ರೂಪದರ್ಶಿ ಕೆ ಮನೆಯಲ್ಲಿ ಇದ್ದರು. ಅವರು ಕೋರ್ಟ್‌ನಲ್ಲಿ ಗಣೇಶ್ ಮಿಸ್ಕಿನ್‌ನನ್ನು ಗುರುತಿಸಿದ್ದರು. ಮನೆಯ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ ಚತುರ್‌‌ನನ್ನು ಕೂಡಾ ಅವರು ಗುರುತಿಸಿದ್ದರು. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕೂಡ ಮಾರ್ಚ್‌ನಲ್ಲಿ ಮಿಸ್ಕಿನ್‌ನನ್ನು ಗುರುತಿಸಿದ್ದರು.

ಮಿಸ್ಕಿನ್, ಚತುರ್ ಮತ್ತು ಕಾಳೆ ಅವರನ್ನು ಗುರುತಿಸಿರುವ ನಾಲ್ವರು ಸಾಕ್ಷಿಗಳು ಈ ಹಿಂದೆ ಪ್ರಕರಣದ ತನಿಖಾ ಹಂತದಲ್ಲಿ ನಡೆಸಿದ ಪರೀಕ್ಷಾ ಗುರುತಿನ ಪರೇಡ್‌ಗಳಲ್ಲಿ ಕೂಡಾ ಅವರನ್ನು ಗುರುತಿಸಿದ್ದರು. ಸಾಕ್ಷಿದಾರರು ಗುರುವಾರ ನ್ಯಾಯಾಲಯದಲ್ಲಿ ನೀಡಿರುವ ಮುಖ್ಯ ಹೇಳಿಕೆಯನ್ನು ಅನುಸರಿಸಿ ಎರಡನೇ ಸ್ವತಂತ್ರ ಸಾಕ್ಷಿಯನ್ನು ಮುಂದಿನ ತಿಂಗಳು ಪ್ರತಿವಾದಿ ವಕೀಲರು ಕ್ರಾಸ್ ಎಗ್ಸಾಮಿನ್‌ ಮಾಡಲಿದ್ದಾರೆ.

ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಕೂಡಾ ಗಣೇಶ್‌‌ ಮಿಸ್ಕಿನ್ ಮತ್ತು ಕಾಳೆ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಸಂಚಾಲಕನಾಗಿರುವ ಕಾಳೆ, ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಶ್ರೀರಾಮ ಸೇನೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದುಸ್ಥಾನದಂತಹ ಹಿಂದುತ್ವ ಸಂಘಟನೆಗಳಿಂದ ಉಗ್ರಗಾಮಿ ಮನಸ್ಥಿತಿ ಹೊಂದಿರುವ ಯುವಕರನ್ನು ಸೇರಿಸಿಕೊಳ್ಳುವ ಮೂಲಕ ಬಲಪಂಥೀಯ ಉಗ್ರಗಾಮಿ ಗುಂಪಿನ ಪ್ರಮುಖ ನಾಯಕರಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...