Homeಮುಖಪುಟ#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ #2RupeeBhakts ಟ್ರೆಂಡ್ ಆಗುತ್ತಿದ್ದು ಬಿಜೆಪಿ ಪಕ್ಷವು ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಂಡಿತು ಎಂಬ ಬಗ್ಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಸಿ ಅದಲ್ಲಿ ಹಾಕುವ ಒಂದೊಂದು ಪೋಸ್ಟ್ ಹಾಗೂ ಕಮೆಂಟುಗಳಿಗೆ ಬಿಜೆಪಿಯು ಹಣ ಪಾವತಿ ಮಾಡುತ್ತಿತ್ತು ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಪ್ರಸ್ತುತ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ #2RupeeBhakts ಜನಪ್ರಿಯ ಟ್ರೆಂಡ್ ಆಗುತ್ತಿದ್ದು ಹಲವಾರು ಜನರು ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪೋಸ್ಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ: 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವ್ಯಯಿಸಿದ್ದು ಎಷ್ಟು ಗೊತ್ತೇ ?

ರಾಘು ಬಿ ಹಿಂದೂ ಎಂಬ ಹೆಸರಲ್ಲಿರುವ ಫೇಸ್‌ಬುಕ್‌ ಖಾತೆದಾರರೊಬ್ಬ, “2014 ರಿಂದ ನನಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್‌ಗೂ 2 ರೂ. ಮತ್ತು ಪ್ರತಿ ಪೋಸ್ಟ್‌ಗೂ 3 ರೂ. ನಂತೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ ಅಕೌಂಟ್‌ಗೆ ಹಾಕುತ್ತಿದ್ದರು. ಆದರೆ ನನ್ನ ಆತ್ಮಸಾಕ್ಷಿ ಇತ್ತೀಚಿನ ದಿನಗಳಲ್ಲಿ ಒಪ್ಪುತ್ತಾ ಇರಲಿಲ್ಲ, ಎಂಜಲು ಕಾಸಿಗೋಸ್ಕರ ನನ್ನ ದೇಶವನ್ನು ಬಲಿಕೊಡಬಾರದೆಂದು ತಿರ್ಮಾನಿಸಿ ಹೊರಗಡೆ ಬಂದಿದ್ದೇನೆ.

ನಿಮಗಿದು ತಿಳಿದಿರಲಿ ಸಾಮಾಜಿಕ ಜಾಲತಾಣದಲ್ಲಿ ಅಸಹ್ಯವಾಗಿ ಕಮೆಂಟ್ ಮಾಡೋಕೆ ಅಂತಾನೆ ಈಗಿನ ಕೆಲವು ಮಂತ್ರಿಗಳ ನೇತೃತ್ವದಲ್ಲಿ ತಂಡವೊಂದು ಇದೆ. ಹುಡುಗಿಯರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡೋದು ಬಿಜೆಪಿಗರ ಪ್ಲ್ಯಾನ್..ಸಧ್ಯ ನನ್ನ ಹಳೆಯ ಅಕೌಂಟ್ ಡಿಲೀಟ್ ಮಾಡಿ ಮತ್ತೊಮ್ಮೆ ಮನುಷ್ಯನಾಗಿ ಬದಲಾಗಿದ್ದೇನೆ” ಎಂದು ಬರೆದು ಕೊಂಡಿದ್ದಾರೆ.

2014ರಿಂದ ನಂಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್ಗೂ 2 ರೂ ಮತ್ತು ಪ್ರತಿ ಪೋಸ್ಟ್ ಗೂ 3 ರೂ ಹಾಗೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ…

Posted by ರಾಘು ಬಿ ಹಿಂದೂ on Friday, August 21, 2020

ಚಂದ್ರಶೇಖರ್‌ ಶೆಟ್ಟಿ ಎಂಬವರು ಬಿಜೆಪಿ ಐಟಿ ಸೆಲ್‌ ಕಳುಹಿಸಿದ್ದಾರೆ ಎಂದು ಹೇಳಲಾದ ಮೆಸೇಜಿನ ಸ್ಕೀನ್ ಶಾರ್ಟ್ ಹಾಕಿ “ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ#2RupeeBhakts

Posted by Chandrashekar Shetty on Saturday, August 22, 2020

ಮೊಹಮ್ಮದ್ ಅಝರ್‌ ಎನ್ನುವವರು, “ಎರಡು ರುಪಾಯಿಗೆ ತಬ್ಲೀಗ್‌ ಜಮಾತ್ ವಿಷಯದಲ್ಲಿ ಹಿಂದೂ ಮುಸ್ಲಿಮರ ನಡುವೆ ದ್ವೇಷವನ್ನು ಸೃಷ್ಟಿಸಿದವರು” ಎಂದು ಹೇಳಿದ್ದಾರೆ.

“18% ಜಿಎಸ್ಟಿ ಕಳೆದು ಪ್ರತಿ ಟ್ವೀಟ್‌ಗೆ ನಿಜವಾದ ಪಾವತಿ ಕೇವಲ 1.64 ರೂ.” ಎಂದು ಒಬ್ಬರು ಪ್ರಧಾನಿ ಮೋದಿಯ ಚಿತ್ರದ ಜೊತೆಗೆ ಟ್ವೀಟ್ ಮಾಡಿದ್ದಾರೆ.


ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...