Homeಮುಖಪುಟ#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ #2RupeeBhakts ಟ್ರೆಂಡ್ ಆಗುತ್ತಿದ್ದು ಬಿಜೆಪಿ ಪಕ್ಷವು ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಂಡಿತು ಎಂಬ ಬಗ್ಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಸಿ ಅದಲ್ಲಿ ಹಾಕುವ ಒಂದೊಂದು ಪೋಸ್ಟ್ ಹಾಗೂ ಕಮೆಂಟುಗಳಿಗೆ ಬಿಜೆಪಿಯು ಹಣ ಪಾವತಿ ಮಾಡುತ್ತಿತ್ತು ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಪ್ರಸ್ತುತ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ #2RupeeBhakts ಜನಪ್ರಿಯ ಟ್ರೆಂಡ್ ಆಗುತ್ತಿದ್ದು ಹಲವಾರು ಜನರು ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪೋಸ್ಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ: 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವ್ಯಯಿಸಿದ್ದು ಎಷ್ಟು ಗೊತ್ತೇ ?

ರಾಘು ಬಿ ಹಿಂದೂ ಎಂಬ ಹೆಸರಲ್ಲಿರುವ ಫೇಸ್‌ಬುಕ್‌ ಖಾತೆದಾರರೊಬ್ಬ, “2014 ರಿಂದ ನನಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್‌ಗೂ 2 ರೂ. ಮತ್ತು ಪ್ರತಿ ಪೋಸ್ಟ್‌ಗೂ 3 ರೂ. ನಂತೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ ಅಕೌಂಟ್‌ಗೆ ಹಾಕುತ್ತಿದ್ದರು. ಆದರೆ ನನ್ನ ಆತ್ಮಸಾಕ್ಷಿ ಇತ್ತೀಚಿನ ದಿನಗಳಲ್ಲಿ ಒಪ್ಪುತ್ತಾ ಇರಲಿಲ್ಲ, ಎಂಜಲು ಕಾಸಿಗೋಸ್ಕರ ನನ್ನ ದೇಶವನ್ನು ಬಲಿಕೊಡಬಾರದೆಂದು ತಿರ್ಮಾನಿಸಿ ಹೊರಗಡೆ ಬಂದಿದ್ದೇನೆ.

ನಿಮಗಿದು ತಿಳಿದಿರಲಿ ಸಾಮಾಜಿಕ ಜಾಲತಾಣದಲ್ಲಿ ಅಸಹ್ಯವಾಗಿ ಕಮೆಂಟ್ ಮಾಡೋಕೆ ಅಂತಾನೆ ಈಗಿನ ಕೆಲವು ಮಂತ್ರಿಗಳ ನೇತೃತ್ವದಲ್ಲಿ ತಂಡವೊಂದು ಇದೆ. ಹುಡುಗಿಯರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡೋದು ಬಿಜೆಪಿಗರ ಪ್ಲ್ಯಾನ್..ಸಧ್ಯ ನನ್ನ ಹಳೆಯ ಅಕೌಂಟ್ ಡಿಲೀಟ್ ಮಾಡಿ ಮತ್ತೊಮ್ಮೆ ಮನುಷ್ಯನಾಗಿ ಬದಲಾಗಿದ್ದೇನೆ” ಎಂದು ಬರೆದು ಕೊಂಡಿದ್ದಾರೆ.

2014ರಿಂದ ನಂಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್ಗೂ 2 ರೂ ಮತ್ತು ಪ್ರತಿ ಪೋಸ್ಟ್ ಗೂ 3 ರೂ ಹಾಗೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ…

Posted by ರಾಘು ಬಿ ಹಿಂದೂ on Friday, August 21, 2020

ಚಂದ್ರಶೇಖರ್‌ ಶೆಟ್ಟಿ ಎಂಬವರು ಬಿಜೆಪಿ ಐಟಿ ಸೆಲ್‌ ಕಳುಹಿಸಿದ್ದಾರೆ ಎಂದು ಹೇಳಲಾದ ಮೆಸೇಜಿನ ಸ್ಕೀನ್ ಶಾರ್ಟ್ ಹಾಕಿ “ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ#2RupeeBhakts

Posted by Chandrashekar Shetty on Saturday, August 22, 2020

ಮೊಹಮ್ಮದ್ ಅಝರ್‌ ಎನ್ನುವವರು, “ಎರಡು ರುಪಾಯಿಗೆ ತಬ್ಲೀಗ್‌ ಜಮಾತ್ ವಿಷಯದಲ್ಲಿ ಹಿಂದೂ ಮುಸ್ಲಿಮರ ನಡುವೆ ದ್ವೇಷವನ್ನು ಸೃಷ್ಟಿಸಿದವರು” ಎಂದು ಹೇಳಿದ್ದಾರೆ.

“18% ಜಿಎಸ್ಟಿ ಕಳೆದು ಪ್ರತಿ ಟ್ವೀಟ್‌ಗೆ ನಿಜವಾದ ಪಾವತಿ ಕೇವಲ 1.64 ರೂ.” ಎಂದು ಒಬ್ಬರು ಪ್ರಧಾನಿ ಮೋದಿಯ ಚಿತ್ರದ ಜೊತೆಗೆ ಟ್ವೀಟ್ ಮಾಡಿದ್ದಾರೆ.


ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...