Homeಮುಖಪುಟ#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ #2RupeeBhakts ಟ್ರೆಂಡ್ ಆಗುತ್ತಿದ್ದು ಬಿಜೆಪಿ ಪಕ್ಷವು ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಂಡಿತು ಎಂಬ ಬಗ್ಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಸಿ ಅದಲ್ಲಿ ಹಾಕುವ ಒಂದೊಂದು ಪೋಸ್ಟ್ ಹಾಗೂ ಕಮೆಂಟುಗಳಿಗೆ ಬಿಜೆಪಿಯು ಹಣ ಪಾವತಿ ಮಾಡುತ್ತಿತ್ತು ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಪ್ರಸ್ತುತ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ #2RupeeBhakts ಜನಪ್ರಿಯ ಟ್ರೆಂಡ್ ಆಗುತ್ತಿದ್ದು ಹಲವಾರು ಜನರು ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪೋಸ್ಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ: 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವ್ಯಯಿಸಿದ್ದು ಎಷ್ಟು ಗೊತ್ತೇ ?

ರಾಘು ಬಿ ಹಿಂದೂ ಎಂಬ ಹೆಸರಲ್ಲಿರುವ ಫೇಸ್‌ಬುಕ್‌ ಖಾತೆದಾರರೊಬ್ಬ, “2014 ರಿಂದ ನನಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್‌ಗೂ 2 ರೂ. ಮತ್ತು ಪ್ರತಿ ಪೋಸ್ಟ್‌ಗೂ 3 ರೂ. ನಂತೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ ಅಕೌಂಟ್‌ಗೆ ಹಾಕುತ್ತಿದ್ದರು. ಆದರೆ ನನ್ನ ಆತ್ಮಸಾಕ್ಷಿ ಇತ್ತೀಚಿನ ದಿನಗಳಲ್ಲಿ ಒಪ್ಪುತ್ತಾ ಇರಲಿಲ್ಲ, ಎಂಜಲು ಕಾಸಿಗೋಸ್ಕರ ನನ್ನ ದೇಶವನ್ನು ಬಲಿಕೊಡಬಾರದೆಂದು ತಿರ್ಮಾನಿಸಿ ಹೊರಗಡೆ ಬಂದಿದ್ದೇನೆ.

ನಿಮಗಿದು ತಿಳಿದಿರಲಿ ಸಾಮಾಜಿಕ ಜಾಲತಾಣದಲ್ಲಿ ಅಸಹ್ಯವಾಗಿ ಕಮೆಂಟ್ ಮಾಡೋಕೆ ಅಂತಾನೆ ಈಗಿನ ಕೆಲವು ಮಂತ್ರಿಗಳ ನೇತೃತ್ವದಲ್ಲಿ ತಂಡವೊಂದು ಇದೆ. ಹುಡುಗಿಯರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡೋದು ಬಿಜೆಪಿಗರ ಪ್ಲ್ಯಾನ್..ಸಧ್ಯ ನನ್ನ ಹಳೆಯ ಅಕೌಂಟ್ ಡಿಲೀಟ್ ಮಾಡಿ ಮತ್ತೊಮ್ಮೆ ಮನುಷ್ಯನಾಗಿ ಬದಲಾಗಿದ್ದೇನೆ” ಎಂದು ಬರೆದು ಕೊಂಡಿದ್ದಾರೆ.

2014ರಿಂದ ನಂಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್ಗೂ 2 ರೂ ಮತ್ತು ಪ್ರತಿ ಪೋಸ್ಟ್ ಗೂ 3 ರೂ ಹಾಗೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ…

Posted by ರಾಘು ಬಿ ಹಿಂದೂ on Friday, August 21, 2020

ಚಂದ್ರಶೇಖರ್‌ ಶೆಟ್ಟಿ ಎಂಬವರು ಬಿಜೆಪಿ ಐಟಿ ಸೆಲ್‌ ಕಳುಹಿಸಿದ್ದಾರೆ ಎಂದು ಹೇಳಲಾದ ಮೆಸೇಜಿನ ಸ್ಕೀನ್ ಶಾರ್ಟ್ ಹಾಕಿ “ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ#2RupeeBhakts

Posted by Chandrashekar Shetty on Saturday, August 22, 2020

ಮೊಹಮ್ಮದ್ ಅಝರ್‌ ಎನ್ನುವವರು, “ಎರಡು ರುಪಾಯಿಗೆ ತಬ್ಲೀಗ್‌ ಜಮಾತ್ ವಿಷಯದಲ್ಲಿ ಹಿಂದೂ ಮುಸ್ಲಿಮರ ನಡುವೆ ದ್ವೇಷವನ್ನು ಸೃಷ್ಟಿಸಿದವರು” ಎಂದು ಹೇಳಿದ್ದಾರೆ.

“18% ಜಿಎಸ್ಟಿ ಕಳೆದು ಪ್ರತಿ ಟ್ವೀಟ್‌ಗೆ ನಿಜವಾದ ಪಾವತಿ ಕೇವಲ 1.64 ರೂ.” ಎಂದು ಒಬ್ಬರು ಪ್ರಧಾನಿ ಮೋದಿಯ ಚಿತ್ರದ ಜೊತೆಗೆ ಟ್ವೀಟ್ ಮಾಡಿದ್ದಾರೆ.


ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...