Homeಮುಖಪುಟ3/4 ರಷ್ಟು ಭಾರತೀಯರು OTTಯಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ

3/4 ರಷ್ಟು ಭಾರತೀಯರು OTTಯಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ

ಆ್ಯಪ್ ಡಿಸ್ಟ್ರಿಬ್ಯೂಷನ್ ಪ್ಲಾಟ್‌ಫಾರ್ಮ್ ಮೊಮ್ಯಾಜಿಕ್ ನಡೆಸಿದ ಸಮೀಕ್ಷೆಯಲ್ಲಿ 54 ಪ್ರತಿಶತದಷ್ಟು ಗ್ರಾಹಕರು ಇನ್ನೂ ಥಿಯೇಟರ್ ಹಾಲ್‌ಗಳಲ್ಲಿ ಪಾನೀಯಗಳು ಮತ್ತು ತಿಂಡಿಗಳನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿದಿದೆ. 44 ಪ್ರತಿಶತದಷ್ಟು ಜನರು ಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

- Advertisement -
- Advertisement -

ನಾಲ್ಕು ಭಾರತೀಯರಲ್ಲಿ ಮೂವರು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಚಲನಚಿತ್ರವನ್ನು ನೋಡಲು ಬಯಸುತ್ತಾರೆ. ಕೇವಲ ನಾಲ್ಕರಲ್ಲಿ ಒಬ್ಬರು  ಸಿನೆಮಾ ಹಾಲ್‌ಗೆ ಹೋಗಲು ಇಷ್ಟಪಡುತ್ತಾರೆ ಎಂದು ಹೊಸ ಸಮೀಕ್ಷೆಯೊಂದು ಶುಕ್ರವಾರ ತಿಳಿಸಿದೆ.

ಕೊರೊನಾ ಕಾರಣದಿಂದ ಚಿತ್ರಮಂದಿರಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಚಿತ್ರಮಂದಿರಗಳು ತೆರೆದರೆ ಸಿನಿಮಾ ವೀಕ್ಷಕರ ಮನಸ್ಥಿತಿ ಹೇಗಿರುತ್ತದೆ ಎಂದು ತಿಳಿಯಲು ನಡೆಸಿದ ಸಮೀಕ್ಷೆ ಇದಾಗಿದೆ.

ಆ್ಯಪ್ ಡಿಸ್ಟ್ರಿಬ್ಯೂಷನ್ ಪ್ಲಾಟ್‌ಫಾರ್ಮ್ ಮೊಮ್ಯಾಜಿಕ್ ನಡೆಸಿದ ಸಮೀಕ್ಷೆಯಲ್ಲಿ 54 ಪ್ರತಿಶತದಷ್ಟು ಗ್ರಾಹಕರು ಇನ್ನೂ ಥಿಯೇಟರ್ ಹಾಲ್‌ಗಳಲ್ಲಿ ಪಾನೀಯಗಳು ಮತ್ತು ತಿಂಡಿಗಳನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿದಿದೆ. 44 ಪ್ರತಿಶತದಷ್ಟು ಜನರು ಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

“ಶೇಕಡಾ 71 ರಷ್ಟು ಜನರು ಚಿತ್ರಮಂದಿರದಲ್ಲಿ ನೋಡುವುದಕ್ಕೆ ಟಿಕೆಟ್ ದರ ಒಂದು ಪ್ರಮುಖ ಅಂಶವೆಂದು ತಿಳಿದಿದೆ. ನಂತರ 27 ಪ್ರತಿಶತದಷ್ಟು ಜನರು ಟಿಕೆಟ್ ದರ ಪ್ರಮುಖವಲ್ಲ ಎಂದು ಹೇಳಿದ್ದಾರೆ” ಎಂದು ಮೊಮಾಜಿಕ್ ಟೆಕ್ನಾಲಜೀಸ್ ಸಿಇಒ ಮತ್ತು ಸಂಸ್ಥಾಪಕ ಅರುಣ್ ಗುಪ್ತಾ ಹೇಳಿದ್ದಾರೆ.

75 ರಷ್ಟು ಮಂದಿ ಪ್ರತಿಕ್ರಿಯಿಸಿದ್ದು, ಚಲನಚಿತ್ರ ಮಂದಿರದಲ್ಲಿ ಆಸನಗಳ ನಡುವೆ ಸಾಮಾಜಿಕ ದೂರವಿರುವುದು ಒಟ್ಟಾರೆ ನೋಡುವ ಅನುಭವದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರೆ, ಕೇವಲ 23 ಪ್ರತಿಶತದಷ್ಟು ಜನರು ಮಾತ್ರ ತಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ, “ಶೇಕಡಾ 72 ರಷ್ಟು ಗ್ರಾಹಕರು ಚಲನಚಿತ್ರ ಮಂದಿರಕ್ಕಿಂತ ಹೆಚ್ಚಾಗಿ, ಮನೆಯಲ್ಲಿ ವೀಕ್ಷಿಸಲು ದೊಡ್ಡ ಪರದೆಯ ಟಿವಿ ಮತ್ತು ಹೋಮ್ ಥಿಯೇಟರ್ ಖರೀದಿಸಲು ಹೂಡಿಕೆ ಮಾಡುವುದಾಗಿ ಹೇಳಿದರು” ಎಂದು ಗುಪ್ತಾ ಹೇಳಿದರು.

ಕುಟುಂಬದೊಂದಿಗೆ ಮತ್ತೆ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸುತ್ತೀರಾ ಎಂಬ ಪ್ರಶ್ನೆಗೆ 44 ಪ್ರತಿಶತದಷ್ಟು ಗ್ರಾಹಕರು ತಾವು ಉತ್ಸುಕರಾಗಿದ್ದೇವೆಂದು ಹೇಳಿದರೆ, 26 ಪ್ರತಿಶತದಷ್ಟು ಜನರು ಹೆಚ್ಚು ಉತ್ಸುಕರಾಗಲಿಲ್ಲ, ಆದರೆ 15 ಪ್ರತಿಶತದಷ್ಟು ಜನರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಬೇಸರದಿಂದಿದ್ದಾರೆ.

ಹಲವಾರು ಚಲನಚಿತ್ರ ನಿರ್ಮಾಪಕರು ಮುಂದಿನ ತಿಂಗಳುಗಳಲ್ಲಿ ತಮ್ಮ ಚಲನಚಿತ್ರಗಳನ್ನು ವಿವಿಧ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ. ಡಿಸ್ನಿ + ಹಾಟ್‌ಸ್ಟಾರ್ ತನ್ನ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಏಳು ಮುಖ್ಯವಾಹಿನಿಯ ಚಲನಚಿತ್ರಗಳನ್ನು ಪ್ರದರ್ಶಿಸುತ್ತದೆ.

ಈ ವರ್ಷದ ಮಾರ್ಚ್ 13 ರಿಂದ ಮಾರಣಾಂತಿಕ ಕೊರೊನಾವೈರಸ್‌ನಿಂದಾಗಿ ಚಲನಚಿತ್ರೋದ್ಯಮ ಸ್ಥಗಿತಗೊಂಡಿದೆ.


ಇದನ್ನೂ ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...