Homeಮುಖಪುಟ3/4 ರಷ್ಟು ಭಾರತೀಯರು OTTಯಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ

3/4 ರಷ್ಟು ಭಾರತೀಯರು OTTಯಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ

ಆ್ಯಪ್ ಡಿಸ್ಟ್ರಿಬ್ಯೂಷನ್ ಪ್ಲಾಟ್‌ಫಾರ್ಮ್ ಮೊಮ್ಯಾಜಿಕ್ ನಡೆಸಿದ ಸಮೀಕ್ಷೆಯಲ್ಲಿ 54 ಪ್ರತಿಶತದಷ್ಟು ಗ್ರಾಹಕರು ಇನ್ನೂ ಥಿಯೇಟರ್ ಹಾಲ್‌ಗಳಲ್ಲಿ ಪಾನೀಯಗಳು ಮತ್ತು ತಿಂಡಿಗಳನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿದಿದೆ. 44 ಪ್ರತಿಶತದಷ್ಟು ಜನರು ಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

- Advertisement -
- Advertisement -

ನಾಲ್ಕು ಭಾರತೀಯರಲ್ಲಿ ಮೂವರು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಚಲನಚಿತ್ರವನ್ನು ನೋಡಲು ಬಯಸುತ್ತಾರೆ. ಕೇವಲ ನಾಲ್ಕರಲ್ಲಿ ಒಬ್ಬರು  ಸಿನೆಮಾ ಹಾಲ್‌ಗೆ ಹೋಗಲು ಇಷ್ಟಪಡುತ್ತಾರೆ ಎಂದು ಹೊಸ ಸಮೀಕ್ಷೆಯೊಂದು ಶುಕ್ರವಾರ ತಿಳಿಸಿದೆ.

ಕೊರೊನಾ ಕಾರಣದಿಂದ ಚಿತ್ರಮಂದಿರಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಚಿತ್ರಮಂದಿರಗಳು ತೆರೆದರೆ ಸಿನಿಮಾ ವೀಕ್ಷಕರ ಮನಸ್ಥಿತಿ ಹೇಗಿರುತ್ತದೆ ಎಂದು ತಿಳಿಯಲು ನಡೆಸಿದ ಸಮೀಕ್ಷೆ ಇದಾಗಿದೆ.

ಆ್ಯಪ್ ಡಿಸ್ಟ್ರಿಬ್ಯೂಷನ್ ಪ್ಲಾಟ್‌ಫಾರ್ಮ್ ಮೊಮ್ಯಾಜಿಕ್ ನಡೆಸಿದ ಸಮೀಕ್ಷೆಯಲ್ಲಿ 54 ಪ್ರತಿಶತದಷ್ಟು ಗ್ರಾಹಕರು ಇನ್ನೂ ಥಿಯೇಟರ್ ಹಾಲ್‌ಗಳಲ್ಲಿ ಪಾನೀಯಗಳು ಮತ್ತು ತಿಂಡಿಗಳನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿದಿದೆ. 44 ಪ್ರತಿಶತದಷ್ಟು ಜನರು ಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

“ಶೇಕಡಾ 71 ರಷ್ಟು ಜನರು ಚಿತ್ರಮಂದಿರದಲ್ಲಿ ನೋಡುವುದಕ್ಕೆ ಟಿಕೆಟ್ ದರ ಒಂದು ಪ್ರಮುಖ ಅಂಶವೆಂದು ತಿಳಿದಿದೆ. ನಂತರ 27 ಪ್ರತಿಶತದಷ್ಟು ಜನರು ಟಿಕೆಟ್ ದರ ಪ್ರಮುಖವಲ್ಲ ಎಂದು ಹೇಳಿದ್ದಾರೆ” ಎಂದು ಮೊಮಾಜಿಕ್ ಟೆಕ್ನಾಲಜೀಸ್ ಸಿಇಒ ಮತ್ತು ಸಂಸ್ಥಾಪಕ ಅರುಣ್ ಗುಪ್ತಾ ಹೇಳಿದ್ದಾರೆ.

75 ರಷ್ಟು ಮಂದಿ ಪ್ರತಿಕ್ರಿಯಿಸಿದ್ದು, ಚಲನಚಿತ್ರ ಮಂದಿರದಲ್ಲಿ ಆಸನಗಳ ನಡುವೆ ಸಾಮಾಜಿಕ ದೂರವಿರುವುದು ಒಟ್ಟಾರೆ ನೋಡುವ ಅನುಭವದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರೆ, ಕೇವಲ 23 ಪ್ರತಿಶತದಷ್ಟು ಜನರು ಮಾತ್ರ ತಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ, “ಶೇಕಡಾ 72 ರಷ್ಟು ಗ್ರಾಹಕರು ಚಲನಚಿತ್ರ ಮಂದಿರಕ್ಕಿಂತ ಹೆಚ್ಚಾಗಿ, ಮನೆಯಲ್ಲಿ ವೀಕ್ಷಿಸಲು ದೊಡ್ಡ ಪರದೆಯ ಟಿವಿ ಮತ್ತು ಹೋಮ್ ಥಿಯೇಟರ್ ಖರೀದಿಸಲು ಹೂಡಿಕೆ ಮಾಡುವುದಾಗಿ ಹೇಳಿದರು” ಎಂದು ಗುಪ್ತಾ ಹೇಳಿದರು.

ಕುಟುಂಬದೊಂದಿಗೆ ಮತ್ತೆ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸುತ್ತೀರಾ ಎಂಬ ಪ್ರಶ್ನೆಗೆ 44 ಪ್ರತಿಶತದಷ್ಟು ಗ್ರಾಹಕರು ತಾವು ಉತ್ಸುಕರಾಗಿದ್ದೇವೆಂದು ಹೇಳಿದರೆ, 26 ಪ್ರತಿಶತದಷ್ಟು ಜನರು ಹೆಚ್ಚು ಉತ್ಸುಕರಾಗಲಿಲ್ಲ, ಆದರೆ 15 ಪ್ರತಿಶತದಷ್ಟು ಜನರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಬೇಸರದಿಂದಿದ್ದಾರೆ.

ಹಲವಾರು ಚಲನಚಿತ್ರ ನಿರ್ಮಾಪಕರು ಮುಂದಿನ ತಿಂಗಳುಗಳಲ್ಲಿ ತಮ್ಮ ಚಲನಚಿತ್ರಗಳನ್ನು ವಿವಿಧ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ. ಡಿಸ್ನಿ + ಹಾಟ್‌ಸ್ಟಾರ್ ತನ್ನ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಏಳು ಮುಖ್ಯವಾಹಿನಿಯ ಚಲನಚಿತ್ರಗಳನ್ನು ಪ್ರದರ್ಶಿಸುತ್ತದೆ.

ಈ ವರ್ಷದ ಮಾರ್ಚ್ 13 ರಿಂದ ಮಾರಣಾಂತಿಕ ಕೊರೊನಾವೈರಸ್‌ನಿಂದಾಗಿ ಚಲನಚಿತ್ರೋದ್ಯಮ ಸ್ಥಗಿತಗೊಂಡಿದೆ.


ಇದನ್ನೂ ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...