Homeಮುಖಪುಟ3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

- Advertisement -
- Advertisement -

ರೈತ ಹೋರಾಟಕ್ಕೆ ಬೆದರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರದ್ದು ಮಾಡಿರುವ ಮೂರು ವಿವಾದಾತ್ಮಕ ರೈತ ವಿರೋಧಿ ಕಾನೂನನ್ನು ಕೇಂದ್ರ ಸರ್ಕಾರ ವಾಪಾಸು ತರಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಹೇಳಿದ್ದು, ಮತ್ತೊಮ್ಮೆ ವಿವಾದ ಹುಟ್ಟುಹಾಕಿದ್ದಾರೆ. “ಈ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ. ಆದರೆ ಮೂರು ಕೃಷಿ ಕಾನೂನುಗಳನ್ನು ಮತ್ತೆ ತರಬೇಕು. ರೈತರೇ ಅದನ್ನು ಒತ್ತಾಯಿಸಬೇಕು.” ಎಂದು ಹಿಮಾಚಲ ಪ್ರದೇಶದ ತನ್ನ ಕ್ಷೇತ್ರ ಮಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿಯಾಗಿವೆ. ಆದರೆ ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯಿಂದಾಗಿ ಸರ್ಕಾರವು ಅದನ್ನು ರದ್ದುಗೊಳಿಸಿದೆ. ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ವಾಪಾಸು ಪರಿಚಯಿಸುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ರಾಜೀನಾಮೆ ಪ್ರಶ್ನೆಯೆ ಇಲ್ಲ’ | ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಬೆಂಬಲ

ರಣಾವತ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಪಕ್ಷವು ಅದನ್ನು ಎಂದಿಗೂ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. “ಮೂರು ಕರಾಳ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ 750 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅವರನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ. ಇದನ್ನು ನಾವು ಎಂದಿಗೂ ಬಿಡುವುದಿಲ್ಲ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಯನ್ನು ಬೆಟ್ಟು ಮಾಡಿದ ಅವರು, ಇದಕ್ಕೆ ಹರಿಯಾಣವೆ ಮೊದಲು ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್, “ಪ್ರಧಾನಿ ಮೋದಿಯ ಬಗ್ಗೆ ನನಗೆ ವಿಷಾದವಿದೆ.  ಕಂಗನಾ ಪ್ರಧಾನಿ ಮೋದಿ ಸವಾಲು ಹಾಕುತ್ತಿರುವಂತೆ ತೋರುತ್ತಿದೆ. ಅಥವಾ ಮೋದಿ ಅಸಹಾಯಕರಾಗಿದ್ದಾರೆ, ಇದನ್ನು ಬಿಜೆಪಿ ಮಾತ್ರ ಹೇಳಬಲ್ಲದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ನಟಿ ಮತ್ತು ಸಂಸದ ಕಂಗನಾ ರಣಾವತ್ ಅವರು ಮೂರು ಕೃಷಿ ಕಾನೂನುಗಳ ವಿರುದ್ಧ ಒಂದು ವರ್ಷ ಆಂದೋಲನದ ನಡೆಸಿದ್ದ ರೈತ ವಿರುದ್ಧ ಪದೇ ಪದೇ ಹೇಳಿಕೆ ನೀಡಿದ್ದರು. 2020 ರಲ್ಲಿ, ಕಂಗನಾ ರಣಾವತ್ ಅವರು ಪ್ರತಿಭಟನೆಗಳನ್ನು ರಾಜಕೀಯ ಪ್ರೇರಿತ ಎಂದು ಕರೆದಿದ್ದರು ಮತ್ತು ಈ ವಿಷಯದ ಬಗ್ಗೆ ಪಂಜಾಬಿ ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರೊಂದಿಗೆ ಸಾರ್ವಜನಿಕವಾಗಿ ಜಗಳವಾಡಿದ್ದರು.

ಇತ್ತೀಚೆಗೆ, ಕಂಗನಾ ರಣಾವತ್ ಅವರು ರೈತ ಪ್ರತಿಭಟನೆಗಳಿಂದ “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗುತ್ತಿತ್ತು ಎಂದು ಹೇಳಿದ್ದರು ಮತ್ತು ಆಂದೋಲನದ ಸ್ಥಳಗಳಲ್ಲಿ ಮೃತ ದೇಹಗಳು ನೇಣು ಬಿಗಿದುಕೊಂಡಿತ್ತು ಹಾಗೂ ಅತ್ಯಾಚಾರಗಳು ನಡೆಯುತ್ತಿತ್ತು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ವ್ಯಾಪಕ ಪ್ರತಿಭಟನೆಗೆ ವ್ಯಕ್ತವಾಗಿದ್ದು, ಬಿಜೆಪಿ ಅವರ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು ಮತ್ತು ಅಂತಹ ಹೇಳಿಕೆಗಳಿಂದ ಅವರನ್ನು ದೂರವಿರಲು ಒತ್ತಾಯಿಸಿತ್ತು.

ವಿಡಿಯೊ ನೋಡಿ: ಬಹಳ ಚೆಂದ ಹಾಡಿದ್ದೀರಿ ಮತ್ತು ಜೀವ ತುಂಬಿದ್ದೀರಿ ನಿಮಗೆ ಶರಣು ರಮೇಶ್ ಗಬ್ಬೂರ್ ಸರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...