Homeಮುಖಪುಟ3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

- Advertisement -
- Advertisement -

ರೈತ ಹೋರಾಟಕ್ಕೆ ಬೆದರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರದ್ದು ಮಾಡಿರುವ ಮೂರು ವಿವಾದಾತ್ಮಕ ರೈತ ವಿರೋಧಿ ಕಾನೂನನ್ನು ಕೇಂದ್ರ ಸರ್ಕಾರ ವಾಪಾಸು ತರಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಹೇಳಿದ್ದು, ಮತ್ತೊಮ್ಮೆ ವಿವಾದ ಹುಟ್ಟುಹಾಕಿದ್ದಾರೆ. “ಈ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ. ಆದರೆ ಮೂರು ಕೃಷಿ ಕಾನೂನುಗಳನ್ನು ಮತ್ತೆ ತರಬೇಕು. ರೈತರೇ ಅದನ್ನು ಒತ್ತಾಯಿಸಬೇಕು.” ಎಂದು ಹಿಮಾಚಲ ಪ್ರದೇಶದ ತನ್ನ ಕ್ಷೇತ್ರ ಮಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿಯಾಗಿವೆ. ಆದರೆ ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯಿಂದಾಗಿ ಸರ್ಕಾರವು ಅದನ್ನು ರದ್ದುಗೊಳಿಸಿದೆ. ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ವಾಪಾಸು ಪರಿಚಯಿಸುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ರಾಜೀನಾಮೆ ಪ್ರಶ್ನೆಯೆ ಇಲ್ಲ’ | ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಬೆಂಬಲ

ರಣಾವತ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಪಕ್ಷವು ಅದನ್ನು ಎಂದಿಗೂ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. “ಮೂರು ಕರಾಳ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ 750 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅವರನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ. ಇದನ್ನು ನಾವು ಎಂದಿಗೂ ಬಿಡುವುದಿಲ್ಲ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಯನ್ನು ಬೆಟ್ಟು ಮಾಡಿದ ಅವರು, ಇದಕ್ಕೆ ಹರಿಯಾಣವೆ ಮೊದಲು ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್, “ಪ್ರಧಾನಿ ಮೋದಿಯ ಬಗ್ಗೆ ನನಗೆ ವಿಷಾದವಿದೆ.  ಕಂಗನಾ ಪ್ರಧಾನಿ ಮೋದಿ ಸವಾಲು ಹಾಕುತ್ತಿರುವಂತೆ ತೋರುತ್ತಿದೆ. ಅಥವಾ ಮೋದಿ ಅಸಹಾಯಕರಾಗಿದ್ದಾರೆ, ಇದನ್ನು ಬಿಜೆಪಿ ಮಾತ್ರ ಹೇಳಬಲ್ಲದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ನಟಿ ಮತ್ತು ಸಂಸದ ಕಂಗನಾ ರಣಾವತ್ ಅವರು ಮೂರು ಕೃಷಿ ಕಾನೂನುಗಳ ವಿರುದ್ಧ ಒಂದು ವರ್ಷ ಆಂದೋಲನದ ನಡೆಸಿದ್ದ ರೈತ ವಿರುದ್ಧ ಪದೇ ಪದೇ ಹೇಳಿಕೆ ನೀಡಿದ್ದರು. 2020 ರಲ್ಲಿ, ಕಂಗನಾ ರಣಾವತ್ ಅವರು ಪ್ರತಿಭಟನೆಗಳನ್ನು ರಾಜಕೀಯ ಪ್ರೇರಿತ ಎಂದು ಕರೆದಿದ್ದರು ಮತ್ತು ಈ ವಿಷಯದ ಬಗ್ಗೆ ಪಂಜಾಬಿ ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರೊಂದಿಗೆ ಸಾರ್ವಜನಿಕವಾಗಿ ಜಗಳವಾಡಿದ್ದರು.

ಇತ್ತೀಚೆಗೆ, ಕಂಗನಾ ರಣಾವತ್ ಅವರು ರೈತ ಪ್ರತಿಭಟನೆಗಳಿಂದ “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗುತ್ತಿತ್ತು ಎಂದು ಹೇಳಿದ್ದರು ಮತ್ತು ಆಂದೋಲನದ ಸ್ಥಳಗಳಲ್ಲಿ ಮೃತ ದೇಹಗಳು ನೇಣು ಬಿಗಿದುಕೊಂಡಿತ್ತು ಹಾಗೂ ಅತ್ಯಾಚಾರಗಳು ನಡೆಯುತ್ತಿತ್ತು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ವ್ಯಾಪಕ ಪ್ರತಿಭಟನೆಗೆ ವ್ಯಕ್ತವಾಗಿದ್ದು, ಬಿಜೆಪಿ ಅವರ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು ಮತ್ತು ಅಂತಹ ಹೇಳಿಕೆಗಳಿಂದ ಅವರನ್ನು ದೂರವಿರಲು ಒತ್ತಾಯಿಸಿತ್ತು.

ವಿಡಿಯೊ ನೋಡಿ: ಬಹಳ ಚೆಂದ ಹಾಡಿದ್ದೀರಿ ಮತ್ತು ಜೀವ ತುಂಬಿದ್ದೀರಿ ನಿಮಗೆ ಶರಣು ರಮೇಶ್ ಗಬ್ಬೂರ್ ಸರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...