ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಕುಶಿನಗರದಲ್ಲಿ ಚಲಿಸುವ ವಾಹನದಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ನೆರೆಹೊರೆಯವರಾದ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ.
”ಈ ಘಟನೆ ಸೆಪ್ಟೆಂಬರ್ 9 ರಂದು ನಡೆದಿದೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸಲು ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು, ಆಕೆಗೆ ಚಾಕು ತೋರಿಸಿ ಹೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅದಕ್ಕೂ ಮುನ್ನ ಗೋಶಾಲೆಯನ್ನು ಗುಡಿಸಲು ಕರೆದೊಯ್ದರು ಎಂದು ಸಂತ್ರಸ್ತೆ ತನ್ನ ಪೊಲೀಸ್ ದೂರಿನಲ್ಲಿ ಬರೆದಿದ್ದಾರೆ.
ಆನಂತರ, ಆತನ ಇಬ್ಬರು ಸಹಚರರು ಸ್ಥಳಕ್ಕೆ ಬಂದು, ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ನಂತರ ಮೂವರು ಆರೋಪಿಗಳು ಆಕೆಯನ್ನು ಗೋಶಾಲೆಯ ಹೊರಗೆ ಬಿಸಾಡಿದ್ದರು. ಪ್ರಜ್ಞೆ ಮರಳಿದ ನಂತರ ಬಾಲಕಿ ಮನೆಗೆ ತೆರಳಿ, ತನ್ನ ಪೋಷಕರಿಗೆ ನಡೆದ ಘಟನೆ ಬಗ್ಗೆ ವಿವರಿಸಿದಳು.
ಈ ಬಗ್ಗೆ ಕಪ್ತಂಗಂಜ್ ಪೊಲೀಸ್ ಠಾಣೆಯ ಪೊಲೀಸರು ಆರಂಭದಲ್ಲಿ ಎಫ್ಐಆರ್ ದಾಖಲಿಸಲಿಲ್ಲ. ಆನಂತರ ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಘಟನೆ ಬಗ್ಗೆ ವಿವರಿಸಿದಾಗ ಅಧಿಕೃತ ದೂರು ದಾಖಲಿಸಲಾಯಿತು.
ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಮುಂಗಡ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಖುಷಿನಗರ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹರಿಯಾಣ: ಕುಟುಂಬಸ್ಥರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ