Homeಮುಖಪುಟರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

ರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಒಡಿಶಾ ರೈಲು ಅಪಘಾತದ ಬಗ್ಗೆ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು “ರೈಲ್ವೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ” ಎಂದು ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಮೂರು ರೈಲುಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. “ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರವು ಈ ವಿಷಯದ ಬಗ್ಗೆ ಕೇಂದ್ರೀಯ ಬ್ಯೂರೋ ತನಿಖೆಗೆ ಆದೇಶಿಸಿದೆ. ಆದರೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟಗೆ ತೆಗೆದುಕೊಂಡಿವೆ. ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರದ ಅಗತ್ಯವಿದೆ ಎಂದು ಒತ್ತಾಯಿಸಿವೆ.

ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದು, “ಈ ಅಪಘಾತವು ಪೂರ್ವ ಕರಾವಳಿ ರೈಲ್ವೆ ವ್ಯಾಪ್ತಿಯಲ್ಲಿ ಘಟಿಸಿದ್ದು, ಇಲ್ಲಿ ಸುಮಾರು 8,278 ಹುದ್ದೆಗಳು ಖಾಲಿ ಇವೆ” ಎಂದು ಉಲ್ಲೇಖಿಸಿದ್ದಾರೆ.

“ಪ್ರಧಾನಿ ಕಾರ್ಯಾಲಯ ಮತ್ತು ಕ್ಯಾಬಿನೆಟ್ ಸಮಿತಿಯೆರಡೂ ನೇಮಕಾತಿಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಹಿರಿಯ ಹುದ್ದೆಗಳ ವಿಷಯದಲ್ಲಿಯೂ ಇದು ನಿರಾಸಕ್ತಿ, ನಿರ್ಲಕ್ಷ್ಯವನ್ನು ಸರ್ಕಾರ ತೋರಿದೆ” ಎಂದು ಟೀಕಿಸಿದ್ದಾರೆ.

1990ರ ದಶಕದಲ್ಲಿ ರೈಲ್ವೆಯಲ್ಲಿ 18 ಲಕ್ಷ ಜನರಿಗೆ ಉದ್ಯೋಗವಿತ್ತು. ಈಗ ಈ ಸಂಖ್ಯೆಯನ್ನು 12 ಲಕ್ಷಕ್ಕೆ ಇಳಿಸಲಾಗಿದ್ದು, ಈ ಪೈಕಿ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ಉದ್ಯೋಗಗಳಿಗೆ ಕುತ್ತು ಬಂದಿದೆ. ಖಾಲಿ ಹುದ್ದೆಗಳಿಂದಾಗಿ ಅಪಾಯ ಬಂದೊದಗಿದೆ” ಎಂದು ಹೇಳಿದ್ದಾರೆ.

“ಕಳೆದ 9 ವರ್ಷಗಳಲ್ಲಿ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

2017-18 ಮತ್ತು 2020-21ರ ನಡುವಿನ ರೈಲು ಅಪಘಾತಗಳಲ್ಲಿ ನಾಲ್ಕರಲ್ಲಿ ಮೂರರಷ್ಟು ಅಪಘಾತಗಳು ರೈಲುಗಳು ಹಳಿ ತಪ್ಪಿದ್ದರಿಂದ ಸಂಭವಿಸಿವೆ ಎಂದು  ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರು ಸಲ್ಲಿಸಿರುವ ಇತ್ತೀಚಿನ ವರದಿಯ ಬಗ್ಗೆಯೂ ಖರ್ಗೆಯವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“2017-18ರ ನಡುವೆ, ಪೂರ್ವ ಕರಾವಳಿ ರೈಲ್ವೆಯಲ್ಲಿ ಸುರಕ್ಷತೆ ನಿಟ್ಟಿನಲ್ಲಿ ರೈಲು ಮತ್ತು ಟ್ರಾಕ್‌ ಪರೀಕ್ಷೆಯನ್ನು ಯಾವುದೇ ರೀತಿಯಲ್ಲೂ ನಡೆಸಲಾಗಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಹಿಂದಿನ ಕಾರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರೈಲ್ವೆ ಮಂಡಳಿ ನಿರ್ಧರಿಸಿರುವುದನ್ನು ಖರ್ಗೆ ಪ್ರಶ್ನಿಸಿದ್ದಾರೆ. ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳು ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಅವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

“ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ. “…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...