Homeಮುಖಪುಟರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

ರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಒಡಿಶಾ ರೈಲು ಅಪಘಾತದ ಬಗ್ಗೆ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು “ರೈಲ್ವೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ” ಎಂದು ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಮೂರು ರೈಲುಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. “ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರವು ಈ ವಿಷಯದ ಬಗ್ಗೆ ಕೇಂದ್ರೀಯ ಬ್ಯೂರೋ ತನಿಖೆಗೆ ಆದೇಶಿಸಿದೆ. ಆದರೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟಗೆ ತೆಗೆದುಕೊಂಡಿವೆ. ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರದ ಅಗತ್ಯವಿದೆ ಎಂದು ಒತ್ತಾಯಿಸಿವೆ.

ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದು, “ಈ ಅಪಘಾತವು ಪೂರ್ವ ಕರಾವಳಿ ರೈಲ್ವೆ ವ್ಯಾಪ್ತಿಯಲ್ಲಿ ಘಟಿಸಿದ್ದು, ಇಲ್ಲಿ ಸುಮಾರು 8,278 ಹುದ್ದೆಗಳು ಖಾಲಿ ಇವೆ” ಎಂದು ಉಲ್ಲೇಖಿಸಿದ್ದಾರೆ.

“ಪ್ರಧಾನಿ ಕಾರ್ಯಾಲಯ ಮತ್ತು ಕ್ಯಾಬಿನೆಟ್ ಸಮಿತಿಯೆರಡೂ ನೇಮಕಾತಿಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಹಿರಿಯ ಹುದ್ದೆಗಳ ವಿಷಯದಲ್ಲಿಯೂ ಇದು ನಿರಾಸಕ್ತಿ, ನಿರ್ಲಕ್ಷ್ಯವನ್ನು ಸರ್ಕಾರ ತೋರಿದೆ” ಎಂದು ಟೀಕಿಸಿದ್ದಾರೆ.

1990ರ ದಶಕದಲ್ಲಿ ರೈಲ್ವೆಯಲ್ಲಿ 18 ಲಕ್ಷ ಜನರಿಗೆ ಉದ್ಯೋಗವಿತ್ತು. ಈಗ ಈ ಸಂಖ್ಯೆಯನ್ನು 12 ಲಕ್ಷಕ್ಕೆ ಇಳಿಸಲಾಗಿದ್ದು, ಈ ಪೈಕಿ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ಉದ್ಯೋಗಗಳಿಗೆ ಕುತ್ತು ಬಂದಿದೆ. ಖಾಲಿ ಹುದ್ದೆಗಳಿಂದಾಗಿ ಅಪಾಯ ಬಂದೊದಗಿದೆ” ಎಂದು ಹೇಳಿದ್ದಾರೆ.

“ಕಳೆದ 9 ವರ್ಷಗಳಲ್ಲಿ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

2017-18 ಮತ್ತು 2020-21ರ ನಡುವಿನ ರೈಲು ಅಪಘಾತಗಳಲ್ಲಿ ನಾಲ್ಕರಲ್ಲಿ ಮೂರರಷ್ಟು ಅಪಘಾತಗಳು ರೈಲುಗಳು ಹಳಿ ತಪ್ಪಿದ್ದರಿಂದ ಸಂಭವಿಸಿವೆ ಎಂದು  ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರು ಸಲ್ಲಿಸಿರುವ ಇತ್ತೀಚಿನ ವರದಿಯ ಬಗ್ಗೆಯೂ ಖರ್ಗೆಯವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“2017-18ರ ನಡುವೆ, ಪೂರ್ವ ಕರಾವಳಿ ರೈಲ್ವೆಯಲ್ಲಿ ಸುರಕ್ಷತೆ ನಿಟ್ಟಿನಲ್ಲಿ ರೈಲು ಮತ್ತು ಟ್ರಾಕ್‌ ಪರೀಕ್ಷೆಯನ್ನು ಯಾವುದೇ ರೀತಿಯಲ್ಲೂ ನಡೆಸಲಾಗಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಹಿಂದಿನ ಕಾರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರೈಲ್ವೆ ಮಂಡಳಿ ನಿರ್ಧರಿಸಿರುವುದನ್ನು ಖರ್ಗೆ ಪ್ರಶ್ನಿಸಿದ್ದಾರೆ. ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳು ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಅವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

“ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ. “…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...