Homeಮುಖಪುಟರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

ರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಒಡಿಶಾ ರೈಲು ಅಪಘಾತದ ಬಗ್ಗೆ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು “ರೈಲ್ವೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ” ಎಂದು ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಮೂರು ರೈಲುಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. “ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರವು ಈ ವಿಷಯದ ಬಗ್ಗೆ ಕೇಂದ್ರೀಯ ಬ್ಯೂರೋ ತನಿಖೆಗೆ ಆದೇಶಿಸಿದೆ. ಆದರೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟಗೆ ತೆಗೆದುಕೊಂಡಿವೆ. ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರದ ಅಗತ್ಯವಿದೆ ಎಂದು ಒತ್ತಾಯಿಸಿವೆ.

ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದು, “ಈ ಅಪಘಾತವು ಪೂರ್ವ ಕರಾವಳಿ ರೈಲ್ವೆ ವ್ಯಾಪ್ತಿಯಲ್ಲಿ ಘಟಿಸಿದ್ದು, ಇಲ್ಲಿ ಸುಮಾರು 8,278 ಹುದ್ದೆಗಳು ಖಾಲಿ ಇವೆ” ಎಂದು ಉಲ್ಲೇಖಿಸಿದ್ದಾರೆ.

“ಪ್ರಧಾನಿ ಕಾರ್ಯಾಲಯ ಮತ್ತು ಕ್ಯಾಬಿನೆಟ್ ಸಮಿತಿಯೆರಡೂ ನೇಮಕಾತಿಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಹಿರಿಯ ಹುದ್ದೆಗಳ ವಿಷಯದಲ್ಲಿಯೂ ಇದು ನಿರಾಸಕ್ತಿ, ನಿರ್ಲಕ್ಷ್ಯವನ್ನು ಸರ್ಕಾರ ತೋರಿದೆ” ಎಂದು ಟೀಕಿಸಿದ್ದಾರೆ.

1990ರ ದಶಕದಲ್ಲಿ ರೈಲ್ವೆಯಲ್ಲಿ 18 ಲಕ್ಷ ಜನರಿಗೆ ಉದ್ಯೋಗವಿತ್ತು. ಈಗ ಈ ಸಂಖ್ಯೆಯನ್ನು 12 ಲಕ್ಷಕ್ಕೆ ಇಳಿಸಲಾಗಿದ್ದು, ಈ ಪೈಕಿ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ಉದ್ಯೋಗಗಳಿಗೆ ಕುತ್ತು ಬಂದಿದೆ. ಖಾಲಿ ಹುದ್ದೆಗಳಿಂದಾಗಿ ಅಪಾಯ ಬಂದೊದಗಿದೆ” ಎಂದು ಹೇಳಿದ್ದಾರೆ.

“ಕಳೆದ 9 ವರ್ಷಗಳಲ್ಲಿ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

2017-18 ಮತ್ತು 2020-21ರ ನಡುವಿನ ರೈಲು ಅಪಘಾತಗಳಲ್ಲಿ ನಾಲ್ಕರಲ್ಲಿ ಮೂರರಷ್ಟು ಅಪಘಾತಗಳು ರೈಲುಗಳು ಹಳಿ ತಪ್ಪಿದ್ದರಿಂದ ಸಂಭವಿಸಿವೆ ಎಂದು  ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರು ಸಲ್ಲಿಸಿರುವ ಇತ್ತೀಚಿನ ವರದಿಯ ಬಗ್ಗೆಯೂ ಖರ್ಗೆಯವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“2017-18ರ ನಡುವೆ, ಪೂರ್ವ ಕರಾವಳಿ ರೈಲ್ವೆಯಲ್ಲಿ ಸುರಕ್ಷತೆ ನಿಟ್ಟಿನಲ್ಲಿ ರೈಲು ಮತ್ತು ಟ್ರಾಕ್‌ ಪರೀಕ್ಷೆಯನ್ನು ಯಾವುದೇ ರೀತಿಯಲ್ಲೂ ನಡೆಸಲಾಗಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಹಿಂದಿನ ಕಾರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರೈಲ್ವೆ ಮಂಡಳಿ ನಿರ್ಧರಿಸಿರುವುದನ್ನು ಖರ್ಗೆ ಪ್ರಶ್ನಿಸಿದ್ದಾರೆ. ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳು ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಅವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

“ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ. “…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...