Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...