Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...