Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...