Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...