Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...