Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...