Homeಮುಖಪುಟಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

- Advertisement -
- Advertisement -

ಶನಿವಾರ ಮಧ್ಯರಾತ್ರಿಯಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿಯ ನಂತರ ಜಮ್ಮುವಿನಲ್ಲಿ ಸತತವಾಗಿ ಡ್ರೊಣ್‌ಗಳು ಪತ್ತೆಯಾಗುತ್ತಿವೆ. ಅನಧಿಕೃತವಾಗಿ ಹಾರಾಡುತ್ತಿರುವ ಡ್ರೊಣ್‌ಗಳು ಭದ್ರತಾಪಡೆಗಳ ನೆಲೆಗಳ ಸಮೀಪವೇ ಕಾಣಿಸಿಕೊಳ್ಳುತ್ತಿವೆ. ನಿನ್ನ ರಾತ್ರಿ ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆಯಾಗಿವೆ ಎಂದು ಭದ್ರತಾಪಡೆಗಳು ತಿಳಿಸಿವೆ.

ನಿನ್ನೆ ರಾತ್ರಿ 9:23 ಗಂಟೆಗೆ ಜಮ್ಮುವಿನ ಮಿರಾನ್ ಸಾಹೇಬ್ ಪ್ರದೇಶದಲ್ಲಿ ಡ್ರೋಣ್‌ ಒಂದು ಪತ್ತೆಯಾಗಿದ್ದರೆ ಇಂದು ಬೆಳಗಿನ ಜಾವ 4:40 ಗಂಟೆಗೆ  ಕಾಲುಚುಕ್ ಮತ್ತು ಕುಂಜ್ವಾನಿ ಪ್ರದೇಶದಲ್ಲಿ ಮತ್ತೆರಡು ಡ್ರೋಣ್‌ಗಳು ಪತ್ತೆಯಾಗಿವೆ.

ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿ ನಂತರ ಪ್ರತಿನಿತ್ಯ ಡ್ರೋಣ್‌ಗಳು ಕಾಣಿಸಿಕೊಳ್ಳುತ್ತಿದ್ದು ಭಾರತದ ಭದ್ರತಾ ವ್ಯವಸ್ಥೆಗೆ ತೀವ್ರ ಆತಂಕವನ್ನು ತಂದೊಡ್ಡಿವೆ.  ಮಂಗಳವಾರ ಮುಂಜಾನೆ ರತ್ನುಚಕ್, ಕಾಲುಚಕ್ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋಣ್ ಹಾರಾಟ ಕಂಡು ಬಂದಿದ್ದರೆ  ಸೋಮವಾರ ಕೂಡ ಜಮ್ಮುವಿನ ಕಾಲುಚಕ್ ಸೇನಾ ನೆಲೆಯ ಸಮೀಪ ಡ್ರೊಣ್‌ಗಳು ಹಾರಾಟ ನಡೆಸಿದ್ದವು.

ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರೆ ತೋಯ್ಬಾ ಕಮ್ಯಾಂಡರ್ ಎಂದು ಗುರುತಿಸಲಾದ ಶಂಕಿತ ಉಗ್ರ ನದೀಮ್ ಅಬ್ರಾರ್ ಎಂಬುವವನ್ನು  ಸೋಮವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಮಂಗಳವಾರ ಪೊಲೀಸರು ಮತ್ತು ಉಗ್ರರ ನಡುವಿನ ದಾಳಿಯಲ್ಲಿ ನದೀಮ್ ಅಬ್ರಾರ್ ಮೃತಪಟ್ಟಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಗಡಿಯಾಚೆಗಿನ ಶಕ್ತಿಗಳು ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಡ್ರೋಣ್‌ಗಳನ್ನು ಬಳಸಿಕೊಳ್ಳುತ್ತಿವೆ. ಜಗತ್ತಿನ ಭದ್ರತಾ ವ್ಯವಸ್ಥೆಗೆ ಹೊದಸ ಮಾದರಿಯ ಡ್ರೋಣ್ ದಾಳಿಗಳು ಅತ್ಯಂತ ಅಪಾಯಕಾರಿ ಆಗಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ಮೇಲೆ ಭಾರತ ಆರೋಪಿಸಿದೆ.

ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ವಿಮಾನ ನಿಲ್ಧಾಣದ ಮೇಲಿನ ಡ್ರೋಣ್‌ ದಾಳಿಯ ಕುರಿತಾಗಿ ತನಿಖೆ ನಡೆಸುತ್ತಿದ್ದು ಶನಿವಾರದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್‌-ಎ-ತೈಬಾ ಸಂಘಟನೆಯ ಕೈವಾಡವನ್ನು ಶಂಕಿಸಲಾಗಿದೆ ಎಂದು ಭದ್ರತಾಪಡೆಯ ಮೂಲಗಳು ತಿಳಿಸಿವೆ. ಜಮ್ಮು ಕಾಶ್ಮೀರದ ಡಿಸಿಪಿ ದಿಲ್ಬಾಗ್‌ ಸಿಂಗ್  ಕೂಡ ಜಮ್ಮು ಡ್ರೋಣ್ ದಾಳಿಯ ಹಿಂದೆ ಲಷ್ಕರ್‌ ಕೈವಾಡವಿರುವ ಕುರಿತು ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದ್ದಾರೆ.

ಕಳೆದವಾರ ಭಾರತ ಪಾಕಿಸ್ತಾನದೊಂದಿಗೆ ವಿದೇಶಾಂಗ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಯಸುತ್ತದೆ ಎಂದು ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಹೇಳಿದ್ದರು .ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ತಾನದ ಐಎಸ್‌ಐ ಮುಖ್ಯಸ್ಥ ಜನರಲ್ ಫೈಜ್ ಹಮೀದ್ ನಡುವೆ ಕಳೆದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ , ಕಾಶ್ಮೀರ ಗಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಕುರಿತಾದ ಮಾತುಕತೆ ಕೂಡ ನಡೆದಿದೆ. ಇವೆಲ್ಲ ಬೆಳವಣಿಗೆಗಳ ಫಲವಾಗಿ ಕಳೆದ ಫೆಬ್ರವರಿ 25 ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ಕದನ ವಿರಾಮವನ್ನು ಘೋಷಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ಲಕ್ಷಣಗಳು ಕಾಣತೊಡಗಿರುವಾಗ ಮತ್ತೆ ಜಮ್ಮ ಗಡಿಯಲ್ಲಿ  ಉಂಟಾಗಿರುವ ಉದ್ವಿಘ್ನ ಪರಿಸ್ಥಿತಿ ವಿದೇಶಾಂಗ ನೀತಿಯ ಮೇಲೆ ತೀವ್ರ ಪರಿಣಾಮವನ್ನುಂಟುಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ 24 ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದರು. ಇದಾದ ಎರಡು ದಿನದಲ್ಲಿ ಕಾಶ್ಮೀರದಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಹೊಸ ಆತಂಕಗಳು ಎದುರಾಗುತ್ತಿವೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....