Homeಮುಖಪುಟಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

- Advertisement -
- Advertisement -

ಶನಿವಾರ ಮಧ್ಯರಾತ್ರಿಯಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿಯ ನಂತರ ಜಮ್ಮುವಿನಲ್ಲಿ ಸತತವಾಗಿ ಡ್ರೊಣ್‌ಗಳು ಪತ್ತೆಯಾಗುತ್ತಿವೆ. ಅನಧಿಕೃತವಾಗಿ ಹಾರಾಡುತ್ತಿರುವ ಡ್ರೊಣ್‌ಗಳು ಭದ್ರತಾಪಡೆಗಳ ನೆಲೆಗಳ ಸಮೀಪವೇ ಕಾಣಿಸಿಕೊಳ್ಳುತ್ತಿವೆ. ನಿನ್ನ ರಾತ್ರಿ ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆಯಾಗಿವೆ ಎಂದು ಭದ್ರತಾಪಡೆಗಳು ತಿಳಿಸಿವೆ.

ನಿನ್ನೆ ರಾತ್ರಿ 9:23 ಗಂಟೆಗೆ ಜಮ್ಮುವಿನ ಮಿರಾನ್ ಸಾಹೇಬ್ ಪ್ರದೇಶದಲ್ಲಿ ಡ್ರೋಣ್‌ ಒಂದು ಪತ್ತೆಯಾಗಿದ್ದರೆ ಇಂದು ಬೆಳಗಿನ ಜಾವ 4:40 ಗಂಟೆಗೆ  ಕಾಲುಚುಕ್ ಮತ್ತು ಕುಂಜ್ವಾನಿ ಪ್ರದೇಶದಲ್ಲಿ ಮತ್ತೆರಡು ಡ್ರೋಣ್‌ಗಳು ಪತ್ತೆಯಾಗಿವೆ.

ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿ ನಂತರ ಪ್ರತಿನಿತ್ಯ ಡ್ರೋಣ್‌ಗಳು ಕಾಣಿಸಿಕೊಳ್ಳುತ್ತಿದ್ದು ಭಾರತದ ಭದ್ರತಾ ವ್ಯವಸ್ಥೆಗೆ ತೀವ್ರ ಆತಂಕವನ್ನು ತಂದೊಡ್ಡಿವೆ.  ಮಂಗಳವಾರ ಮುಂಜಾನೆ ರತ್ನುಚಕ್, ಕಾಲುಚಕ್ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋಣ್ ಹಾರಾಟ ಕಂಡು ಬಂದಿದ್ದರೆ  ಸೋಮವಾರ ಕೂಡ ಜಮ್ಮುವಿನ ಕಾಲುಚಕ್ ಸೇನಾ ನೆಲೆಯ ಸಮೀಪ ಡ್ರೊಣ್‌ಗಳು ಹಾರಾಟ ನಡೆಸಿದ್ದವು.

ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರೆ ತೋಯ್ಬಾ ಕಮ್ಯಾಂಡರ್ ಎಂದು ಗುರುತಿಸಲಾದ ಶಂಕಿತ ಉಗ್ರ ನದೀಮ್ ಅಬ್ರಾರ್ ಎಂಬುವವನ್ನು  ಸೋಮವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಮಂಗಳವಾರ ಪೊಲೀಸರು ಮತ್ತು ಉಗ್ರರ ನಡುವಿನ ದಾಳಿಯಲ್ಲಿ ನದೀಮ್ ಅಬ್ರಾರ್ ಮೃತಪಟ್ಟಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಗಡಿಯಾಚೆಗಿನ ಶಕ್ತಿಗಳು ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಡ್ರೋಣ್‌ಗಳನ್ನು ಬಳಸಿಕೊಳ್ಳುತ್ತಿವೆ. ಜಗತ್ತಿನ ಭದ್ರತಾ ವ್ಯವಸ್ಥೆಗೆ ಹೊದಸ ಮಾದರಿಯ ಡ್ರೋಣ್ ದಾಳಿಗಳು ಅತ್ಯಂತ ಅಪಾಯಕಾರಿ ಆಗಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ಮೇಲೆ ಭಾರತ ಆರೋಪಿಸಿದೆ.

ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ವಿಮಾನ ನಿಲ್ಧಾಣದ ಮೇಲಿನ ಡ್ರೋಣ್‌ ದಾಳಿಯ ಕುರಿತಾಗಿ ತನಿಖೆ ನಡೆಸುತ್ತಿದ್ದು ಶನಿವಾರದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್‌-ಎ-ತೈಬಾ ಸಂಘಟನೆಯ ಕೈವಾಡವನ್ನು ಶಂಕಿಸಲಾಗಿದೆ ಎಂದು ಭದ್ರತಾಪಡೆಯ ಮೂಲಗಳು ತಿಳಿಸಿವೆ. ಜಮ್ಮು ಕಾಶ್ಮೀರದ ಡಿಸಿಪಿ ದಿಲ್ಬಾಗ್‌ ಸಿಂಗ್  ಕೂಡ ಜಮ್ಮು ಡ್ರೋಣ್ ದಾಳಿಯ ಹಿಂದೆ ಲಷ್ಕರ್‌ ಕೈವಾಡವಿರುವ ಕುರಿತು ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದ್ದಾರೆ.

ಕಳೆದವಾರ ಭಾರತ ಪಾಕಿಸ್ತಾನದೊಂದಿಗೆ ವಿದೇಶಾಂಗ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಯಸುತ್ತದೆ ಎಂದು ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಹೇಳಿದ್ದರು .ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ತಾನದ ಐಎಸ್‌ಐ ಮುಖ್ಯಸ್ಥ ಜನರಲ್ ಫೈಜ್ ಹಮೀದ್ ನಡುವೆ ಕಳೆದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ , ಕಾಶ್ಮೀರ ಗಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಕುರಿತಾದ ಮಾತುಕತೆ ಕೂಡ ನಡೆದಿದೆ. ಇವೆಲ್ಲ ಬೆಳವಣಿಗೆಗಳ ಫಲವಾಗಿ ಕಳೆದ ಫೆಬ್ರವರಿ 25 ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ಕದನ ವಿರಾಮವನ್ನು ಘೋಷಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ಲಕ್ಷಣಗಳು ಕಾಣತೊಡಗಿರುವಾಗ ಮತ್ತೆ ಜಮ್ಮ ಗಡಿಯಲ್ಲಿ  ಉಂಟಾಗಿರುವ ಉದ್ವಿಘ್ನ ಪರಿಸ್ಥಿತಿ ವಿದೇಶಾಂಗ ನೀತಿಯ ಮೇಲೆ ತೀವ್ರ ಪರಿಣಾಮವನ್ನುಂಟುಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ 24 ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದರು. ಇದಾದ ಎರಡು ದಿನದಲ್ಲಿ ಕಾಶ್ಮೀರದಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಹೊಸ ಆತಂಕಗಳು ಎದುರಾಗುತ್ತಿವೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...