Homeಮುಖಪುಟಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

- Advertisement -
- Advertisement -

ಶನಿವಾರ ಮಧ್ಯರಾತ್ರಿಯಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿಯ ನಂತರ ಜಮ್ಮುವಿನಲ್ಲಿ ಸತತವಾಗಿ ಡ್ರೊಣ್‌ಗಳು ಪತ್ತೆಯಾಗುತ್ತಿವೆ. ಅನಧಿಕೃತವಾಗಿ ಹಾರಾಡುತ್ತಿರುವ ಡ್ರೊಣ್‌ಗಳು ಭದ್ರತಾಪಡೆಗಳ ನೆಲೆಗಳ ಸಮೀಪವೇ ಕಾಣಿಸಿಕೊಳ್ಳುತ್ತಿವೆ. ನಿನ್ನ ರಾತ್ರಿ ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆಯಾಗಿವೆ ಎಂದು ಭದ್ರತಾಪಡೆಗಳು ತಿಳಿಸಿವೆ.

ನಿನ್ನೆ ರಾತ್ರಿ 9:23 ಗಂಟೆಗೆ ಜಮ್ಮುವಿನ ಮಿರಾನ್ ಸಾಹೇಬ್ ಪ್ರದೇಶದಲ್ಲಿ ಡ್ರೋಣ್‌ ಒಂದು ಪತ್ತೆಯಾಗಿದ್ದರೆ ಇಂದು ಬೆಳಗಿನ ಜಾವ 4:40 ಗಂಟೆಗೆ  ಕಾಲುಚುಕ್ ಮತ್ತು ಕುಂಜ್ವಾನಿ ಪ್ರದೇಶದಲ್ಲಿ ಮತ್ತೆರಡು ಡ್ರೋಣ್‌ಗಳು ಪತ್ತೆಯಾಗಿವೆ.

ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿ ನಂತರ ಪ್ರತಿನಿತ್ಯ ಡ್ರೋಣ್‌ಗಳು ಕಾಣಿಸಿಕೊಳ್ಳುತ್ತಿದ್ದು ಭಾರತದ ಭದ್ರತಾ ವ್ಯವಸ್ಥೆಗೆ ತೀವ್ರ ಆತಂಕವನ್ನು ತಂದೊಡ್ಡಿವೆ.  ಮಂಗಳವಾರ ಮುಂಜಾನೆ ರತ್ನುಚಕ್, ಕಾಲುಚಕ್ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋಣ್ ಹಾರಾಟ ಕಂಡು ಬಂದಿದ್ದರೆ  ಸೋಮವಾರ ಕೂಡ ಜಮ್ಮುವಿನ ಕಾಲುಚಕ್ ಸೇನಾ ನೆಲೆಯ ಸಮೀಪ ಡ್ರೊಣ್‌ಗಳು ಹಾರಾಟ ನಡೆಸಿದ್ದವು.

ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರೆ ತೋಯ್ಬಾ ಕಮ್ಯಾಂಡರ್ ಎಂದು ಗುರುತಿಸಲಾದ ಶಂಕಿತ ಉಗ್ರ ನದೀಮ್ ಅಬ್ರಾರ್ ಎಂಬುವವನ್ನು  ಸೋಮವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಮಂಗಳವಾರ ಪೊಲೀಸರು ಮತ್ತು ಉಗ್ರರ ನಡುವಿನ ದಾಳಿಯಲ್ಲಿ ನದೀಮ್ ಅಬ್ರಾರ್ ಮೃತಪಟ್ಟಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಗಡಿಯಾಚೆಗಿನ ಶಕ್ತಿಗಳು ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಡ್ರೋಣ್‌ಗಳನ್ನು ಬಳಸಿಕೊಳ್ಳುತ್ತಿವೆ. ಜಗತ್ತಿನ ಭದ್ರತಾ ವ್ಯವಸ್ಥೆಗೆ ಹೊದಸ ಮಾದರಿಯ ಡ್ರೋಣ್ ದಾಳಿಗಳು ಅತ್ಯಂತ ಅಪಾಯಕಾರಿ ಆಗಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ಮೇಲೆ ಭಾರತ ಆರೋಪಿಸಿದೆ.

ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ವಿಮಾನ ನಿಲ್ಧಾಣದ ಮೇಲಿನ ಡ್ರೋಣ್‌ ದಾಳಿಯ ಕುರಿತಾಗಿ ತನಿಖೆ ನಡೆಸುತ್ತಿದ್ದು ಶನಿವಾರದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್‌-ಎ-ತೈಬಾ ಸಂಘಟನೆಯ ಕೈವಾಡವನ್ನು ಶಂಕಿಸಲಾಗಿದೆ ಎಂದು ಭದ್ರತಾಪಡೆಯ ಮೂಲಗಳು ತಿಳಿಸಿವೆ. ಜಮ್ಮು ಕಾಶ್ಮೀರದ ಡಿಸಿಪಿ ದಿಲ್ಬಾಗ್‌ ಸಿಂಗ್  ಕೂಡ ಜಮ್ಮು ಡ್ರೋಣ್ ದಾಳಿಯ ಹಿಂದೆ ಲಷ್ಕರ್‌ ಕೈವಾಡವಿರುವ ಕುರಿತು ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದ್ದಾರೆ.

ಕಳೆದವಾರ ಭಾರತ ಪಾಕಿಸ್ತಾನದೊಂದಿಗೆ ವಿದೇಶಾಂಗ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಯಸುತ್ತದೆ ಎಂದು ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಹೇಳಿದ್ದರು .ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ತಾನದ ಐಎಸ್‌ಐ ಮುಖ್ಯಸ್ಥ ಜನರಲ್ ಫೈಜ್ ಹಮೀದ್ ನಡುವೆ ಕಳೆದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ , ಕಾಶ್ಮೀರ ಗಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಕುರಿತಾದ ಮಾತುಕತೆ ಕೂಡ ನಡೆದಿದೆ. ಇವೆಲ್ಲ ಬೆಳವಣಿಗೆಗಳ ಫಲವಾಗಿ ಕಳೆದ ಫೆಬ್ರವರಿ 25 ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ಕದನ ವಿರಾಮವನ್ನು ಘೋಷಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ಲಕ್ಷಣಗಳು ಕಾಣತೊಡಗಿರುವಾಗ ಮತ್ತೆ ಜಮ್ಮ ಗಡಿಯಲ್ಲಿ  ಉಂಟಾಗಿರುವ ಉದ್ವಿಘ್ನ ಪರಿಸ್ಥಿತಿ ವಿದೇಶಾಂಗ ನೀತಿಯ ಮೇಲೆ ತೀವ್ರ ಪರಿಣಾಮವನ್ನುಂಟುಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ 24 ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದರು. ಇದಾದ ಎರಡು ದಿನದಲ್ಲಿ ಕಾಶ್ಮೀರದಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಹೊಸ ಆತಂಕಗಳು ಎದುರಾಗುತ್ತಿವೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...