Homeಮುಖಪುಟಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

- Advertisement -
- Advertisement -

ಶನಿವಾರ ಮಧ್ಯರಾತ್ರಿಯಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿಯ ನಂತರ ಜಮ್ಮುವಿನಲ್ಲಿ ಸತತವಾಗಿ ಡ್ರೊಣ್‌ಗಳು ಪತ್ತೆಯಾಗುತ್ತಿವೆ. ಅನಧಿಕೃತವಾಗಿ ಹಾರಾಡುತ್ತಿರುವ ಡ್ರೊಣ್‌ಗಳು ಭದ್ರತಾಪಡೆಗಳ ನೆಲೆಗಳ ಸಮೀಪವೇ ಕಾಣಿಸಿಕೊಳ್ಳುತ್ತಿವೆ. ನಿನ್ನ ರಾತ್ರಿ ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆಯಾಗಿವೆ ಎಂದು ಭದ್ರತಾಪಡೆಗಳು ತಿಳಿಸಿವೆ.

ನಿನ್ನೆ ರಾತ್ರಿ 9:23 ಗಂಟೆಗೆ ಜಮ್ಮುವಿನ ಮಿರಾನ್ ಸಾಹೇಬ್ ಪ್ರದೇಶದಲ್ಲಿ ಡ್ರೋಣ್‌ ಒಂದು ಪತ್ತೆಯಾಗಿದ್ದರೆ ಇಂದು ಬೆಳಗಿನ ಜಾವ 4:40 ಗಂಟೆಗೆ  ಕಾಲುಚುಕ್ ಮತ್ತು ಕುಂಜ್ವಾನಿ ಪ್ರದೇಶದಲ್ಲಿ ಮತ್ತೆರಡು ಡ್ರೋಣ್‌ಗಳು ಪತ್ತೆಯಾಗಿವೆ.

ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿ ನಂತರ ಪ್ರತಿನಿತ್ಯ ಡ್ರೋಣ್‌ಗಳು ಕಾಣಿಸಿಕೊಳ್ಳುತ್ತಿದ್ದು ಭಾರತದ ಭದ್ರತಾ ವ್ಯವಸ್ಥೆಗೆ ತೀವ್ರ ಆತಂಕವನ್ನು ತಂದೊಡ್ಡಿವೆ.  ಮಂಗಳವಾರ ಮುಂಜಾನೆ ರತ್ನುಚಕ್, ಕಾಲುಚಕ್ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋಣ್ ಹಾರಾಟ ಕಂಡು ಬಂದಿದ್ದರೆ  ಸೋಮವಾರ ಕೂಡ ಜಮ್ಮುವಿನ ಕಾಲುಚಕ್ ಸೇನಾ ನೆಲೆಯ ಸಮೀಪ ಡ್ರೊಣ್‌ಗಳು ಹಾರಾಟ ನಡೆಸಿದ್ದವು.

ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರೆ ತೋಯ್ಬಾ ಕಮ್ಯಾಂಡರ್ ಎಂದು ಗುರುತಿಸಲಾದ ಶಂಕಿತ ಉಗ್ರ ನದೀಮ್ ಅಬ್ರಾರ್ ಎಂಬುವವನ್ನು  ಸೋಮವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಮಂಗಳವಾರ ಪೊಲೀಸರು ಮತ್ತು ಉಗ್ರರ ನಡುವಿನ ದಾಳಿಯಲ್ಲಿ ನದೀಮ್ ಅಬ್ರಾರ್ ಮೃತಪಟ್ಟಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಗಡಿಯಾಚೆಗಿನ ಶಕ್ತಿಗಳು ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಡ್ರೋಣ್‌ಗಳನ್ನು ಬಳಸಿಕೊಳ್ಳುತ್ತಿವೆ. ಜಗತ್ತಿನ ಭದ್ರತಾ ವ್ಯವಸ್ಥೆಗೆ ಹೊದಸ ಮಾದರಿಯ ಡ್ರೋಣ್ ದಾಳಿಗಳು ಅತ್ಯಂತ ಅಪಾಯಕಾರಿ ಆಗಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ಮೇಲೆ ಭಾರತ ಆರೋಪಿಸಿದೆ.

ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ವಿಮಾನ ನಿಲ್ಧಾಣದ ಮೇಲಿನ ಡ್ರೋಣ್‌ ದಾಳಿಯ ಕುರಿತಾಗಿ ತನಿಖೆ ನಡೆಸುತ್ತಿದ್ದು ಶನಿವಾರದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್‌-ಎ-ತೈಬಾ ಸಂಘಟನೆಯ ಕೈವಾಡವನ್ನು ಶಂಕಿಸಲಾಗಿದೆ ಎಂದು ಭದ್ರತಾಪಡೆಯ ಮೂಲಗಳು ತಿಳಿಸಿವೆ. ಜಮ್ಮು ಕಾಶ್ಮೀರದ ಡಿಸಿಪಿ ದಿಲ್ಬಾಗ್‌ ಸಿಂಗ್  ಕೂಡ ಜಮ್ಮು ಡ್ರೋಣ್ ದಾಳಿಯ ಹಿಂದೆ ಲಷ್ಕರ್‌ ಕೈವಾಡವಿರುವ ಕುರಿತು ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದ್ದಾರೆ.

ಕಳೆದವಾರ ಭಾರತ ಪಾಕಿಸ್ತಾನದೊಂದಿಗೆ ವಿದೇಶಾಂಗ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಯಸುತ್ತದೆ ಎಂದು ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಹೇಳಿದ್ದರು .ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ತಾನದ ಐಎಸ್‌ಐ ಮುಖ್ಯಸ್ಥ ಜನರಲ್ ಫೈಜ್ ಹಮೀದ್ ನಡುವೆ ಕಳೆದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ , ಕಾಶ್ಮೀರ ಗಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಕುರಿತಾದ ಮಾತುಕತೆ ಕೂಡ ನಡೆದಿದೆ. ಇವೆಲ್ಲ ಬೆಳವಣಿಗೆಗಳ ಫಲವಾಗಿ ಕಳೆದ ಫೆಬ್ರವರಿ 25 ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ಕದನ ವಿರಾಮವನ್ನು ಘೋಷಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ಲಕ್ಷಣಗಳು ಕಾಣತೊಡಗಿರುವಾಗ ಮತ್ತೆ ಜಮ್ಮ ಗಡಿಯಲ್ಲಿ  ಉಂಟಾಗಿರುವ ಉದ್ವಿಘ್ನ ಪರಿಸ್ಥಿತಿ ವಿದೇಶಾಂಗ ನೀತಿಯ ಮೇಲೆ ತೀವ್ರ ಪರಿಣಾಮವನ್ನುಂಟುಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ 24 ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದರು. ಇದಾದ ಎರಡು ದಿನದಲ್ಲಿ ಕಾಶ್ಮೀರದಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಹೊಸ ಆತಂಕಗಳು ಎದುರಾಗುತ್ತಿವೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...