Homeಕರ್ನಾಟಕ'ಯುವ ನಿಧಿ' ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

‘ಯುವ ನಿಧಿ’ ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

- Advertisement -
- Advertisement -

ಬೆಳಗಾವಿಯಲ್ಲಿ ಇಂದು(ಮಾ. 20) ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದರು. ಈ ವೇಳೆ ಆಡಳಿತಾರೂಢ ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿರುವ 40 ಪರ್ಸೆಂಟ್ ಕಮೀಷನ್ ಸರ್ಕಾರ ರಾಜ್ಯದ ಉದ್ಯೋಗ ನೀಡದೆ ಯುವಜನರ ಬದುಕನ್ನೇ ಹಾಳುಮಾಡಿದೆ ಎಂದು ಕಿಡಿಕಾರಿದ್ದಾರೆ.

ಯುವ ಕ್ರಾಂತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ನಾನು ಭಾರತ್ ಜೋಡೋ ಯಾತ್ರೆ ಮಾಡುವ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಾಗ ಒಂದು ವಿಚಾರವನ್ನು ಅರಿತುಕೊಂಡೆ. ಇಲ್ಲಿ ನಿರುದ್ಯೋಗ ಸಮಸ್ಯೆಯು ಯುವಕರನ್ನು ಕಾಡುತ್ತಿದೆ. ಭ್ರಷ್ಟ ಬಿಜೆಪಿ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿಸಿದೆ. ಇದನ್ನು ಅರ್ಥಮಾಡಿಕೊಳ್ಳಲು ನಾನು ಸಾವಿರಾರು ಯುವಕರೊಂದಿಗೆ ಮಾತನಾಡಿದ್ದೆನೆ” ಎಂದು ಹೇಳಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ 10 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” ಎಂದು ಯುವಕರಿಗೆ ರಾಹುಲ್‌ ಭರವಸೆ ನೀಡಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಚುನಾವಣೆಯಲ್ಲಿ ಗೆದ್ದ ನಂತರ ಯುವ ನಿಧಿ ಯೋಜನೆಯನ್ನು ತಕ್ಷಣವೇ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ. ಇದು ಎರಡು ವರ್ಷಗಳ ವರೆಗೆ ಮುಂದುವರಿಯುತ್ತದೆ” ಎಂದು ರಾಹುಲ್‌ ಗಾಂಧಿ ಘೋಷಿಸಿದರು.

”ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇರುವುದನ್ನು ನಾನು ಈಗಾಗಲೇ ಗಮನಿಸಿದ್ದೇನೆ. ರಾಜ್ಯ ಘಟಕ ಬಯಸಿದರೆ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಪ್ರವಾಸ ಮಾಡಲು ಸಿದ್ಧನಿದ್ದೇನೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದ್ದೇವೆ” ಎಂದು ಅವರು ಹೇಳಿದರು.

‘ದೇಶದ ಅತ್ಯಂತ ಭ್ರಷ್ಟ ಸರ್ಕಾರ ‘ಕರ್ನಾಟಕದಲ್ಲಿನ ಬಿಜೆಪಿ ಸರ್ಕಾರ ಎಂದು ಎಲ್ಲ ವರ್ಗದ ಜನ ಹೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿಗಳಿಗೆ ಪತ್ರ ಬರೆದು ರಾಜ್ಯದಲ್ಲಿ 40 ಪರ್ಸೆಂಟ್‌ ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರಿದ್ದಾರೆ. ಆದರೂ ಪ್ರಧಾನಿಗಳು ಈ 40 ಪರ್ಸೆಂಟ್‌ ಕಮಿಷನ್ ಸರ್ಕಾರದ ಬಗ್ಗೆ ಮಾತನಾಡುತ್ತಿಲ್ಲ” ಎಂದರು.

ರಾಜ್ಯದ ಮಹಿಳೆಯರ ಕಷ್ಟಕ್ಕೆ ಪರಿಹಾರ ನೀಡಲು ‘ಗೃಹಲಕ್ಷ್ಮಿ’ ಯೋಜನೆ ಮೂಲಕ ಮನೆಯೊಡತಿಗೆ 2000ರೂ. ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ, ‘ಗೃಹಜ್ಯೋತಿ’ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಅಷ್ಟೇ ಅಲ್ಲದೆ, ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ ಎಂದು ರಾಹುಲ್ ಹೇಳಿದರು.

”ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕರ್ನಾಟಕದ ಮೂಲಕ ಸಾಗಿದಾಗ ಅಭೂತಪೂರ್ವ ಬೆಂಬಲ ನೀಡಿ ಯಾತ್ರೆ ಯಶಸ್ಸುಗೊಳಿಸಿದ್ದಿರಿ. ಅದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ದೇಶ ಯಾರೋ ಒಬ್ಬರ ಸ್ವತ್ತಲ್ಲ, ಅಧಾನಿ ಸ್ವತ್ತೂ ಅಲ್ಲ. ಈ ದೇಶ ರೈತರು, ಯುವಕರು, ಬಡವರು ಸೇರಿದಂತೆ ಎಲ್ಲರಿಗೂ ಸೇರಿದ್ದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...