Homeಕರ್ನಾಟಕ'ಯುವ ನಿಧಿ' ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

‘ಯುವ ನಿಧಿ’ ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

- Advertisement -
- Advertisement -

ಬೆಳಗಾವಿಯಲ್ಲಿ ಇಂದು(ಮಾ. 20) ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದರು. ಈ ವೇಳೆ ಆಡಳಿತಾರೂಢ ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿರುವ 40 ಪರ್ಸೆಂಟ್ ಕಮೀಷನ್ ಸರ್ಕಾರ ರಾಜ್ಯದ ಉದ್ಯೋಗ ನೀಡದೆ ಯುವಜನರ ಬದುಕನ್ನೇ ಹಾಳುಮಾಡಿದೆ ಎಂದು ಕಿಡಿಕಾರಿದ್ದಾರೆ.

ಯುವ ಕ್ರಾಂತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ನಾನು ಭಾರತ್ ಜೋಡೋ ಯಾತ್ರೆ ಮಾಡುವ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಾಗ ಒಂದು ವಿಚಾರವನ್ನು ಅರಿತುಕೊಂಡೆ. ಇಲ್ಲಿ ನಿರುದ್ಯೋಗ ಸಮಸ್ಯೆಯು ಯುವಕರನ್ನು ಕಾಡುತ್ತಿದೆ. ಭ್ರಷ್ಟ ಬಿಜೆಪಿ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿಸಿದೆ. ಇದನ್ನು ಅರ್ಥಮಾಡಿಕೊಳ್ಳಲು ನಾನು ಸಾವಿರಾರು ಯುವಕರೊಂದಿಗೆ ಮಾತನಾಡಿದ್ದೆನೆ” ಎಂದು ಹೇಳಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ 10 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” ಎಂದು ಯುವಕರಿಗೆ ರಾಹುಲ್‌ ಭರವಸೆ ನೀಡಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಚುನಾವಣೆಯಲ್ಲಿ ಗೆದ್ದ ನಂತರ ಯುವ ನಿಧಿ ಯೋಜನೆಯನ್ನು ತಕ್ಷಣವೇ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ. ಇದು ಎರಡು ವರ್ಷಗಳ ವರೆಗೆ ಮುಂದುವರಿಯುತ್ತದೆ” ಎಂದು ರಾಹುಲ್‌ ಗಾಂಧಿ ಘೋಷಿಸಿದರು.

”ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇರುವುದನ್ನು ನಾನು ಈಗಾಗಲೇ ಗಮನಿಸಿದ್ದೇನೆ. ರಾಜ್ಯ ಘಟಕ ಬಯಸಿದರೆ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಪ್ರವಾಸ ಮಾಡಲು ಸಿದ್ಧನಿದ್ದೇನೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದ್ದೇವೆ” ಎಂದು ಅವರು ಹೇಳಿದರು.

‘ದೇಶದ ಅತ್ಯಂತ ಭ್ರಷ್ಟ ಸರ್ಕಾರ ‘ಕರ್ನಾಟಕದಲ್ಲಿನ ಬಿಜೆಪಿ ಸರ್ಕಾರ ಎಂದು ಎಲ್ಲ ವರ್ಗದ ಜನ ಹೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿಗಳಿಗೆ ಪತ್ರ ಬರೆದು ರಾಜ್ಯದಲ್ಲಿ 40 ಪರ್ಸೆಂಟ್‌ ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರಿದ್ದಾರೆ. ಆದರೂ ಪ್ರಧಾನಿಗಳು ಈ 40 ಪರ್ಸೆಂಟ್‌ ಕಮಿಷನ್ ಸರ್ಕಾರದ ಬಗ್ಗೆ ಮಾತನಾಡುತ್ತಿಲ್ಲ” ಎಂದರು.

ರಾಜ್ಯದ ಮಹಿಳೆಯರ ಕಷ್ಟಕ್ಕೆ ಪರಿಹಾರ ನೀಡಲು ‘ಗೃಹಲಕ್ಷ್ಮಿ’ ಯೋಜನೆ ಮೂಲಕ ಮನೆಯೊಡತಿಗೆ 2000ರೂ. ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ, ‘ಗೃಹಜ್ಯೋತಿ’ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಅಷ್ಟೇ ಅಲ್ಲದೆ, ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ ಎಂದು ರಾಹುಲ್ ಹೇಳಿದರು.

”ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕರ್ನಾಟಕದ ಮೂಲಕ ಸಾಗಿದಾಗ ಅಭೂತಪೂರ್ವ ಬೆಂಬಲ ನೀಡಿ ಯಾತ್ರೆ ಯಶಸ್ಸುಗೊಳಿಸಿದ್ದಿರಿ. ಅದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ದೇಶ ಯಾರೋ ಒಬ್ಬರ ಸ್ವತ್ತಲ್ಲ, ಅಧಾನಿ ಸ್ವತ್ತೂ ಅಲ್ಲ. ಈ ದೇಶ ರೈತರು, ಯುವಕರು, ಬಡವರು ಸೇರಿದಂತೆ ಎಲ್ಲರಿಗೂ ಸೇರಿದ್ದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...